Home / ಜಿಲ್ಲೆ / ಯಾದಗಿರಿ (page 3)

ಯಾದಗಿರಿ

ಲಾಕ್‍ಡೌನ್ ವೇಳೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ………….

ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದೆ. ಸೋಂಕಿತರ ಸಂಖ್ಯೆ 1,300ರ ಗಡಿದಾಟುತ್ತಿದೆ. ನಿಯಂತ್ರಣಕ್ಕೆ ಮಾಡುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಮತ್ತು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆದರೆ ಇನ್ನೊಂದೆಡೆ ಅಕ್ರಮ ಮದ್ಯ ಮಾರಾಟದ ಮೂಲಕ ಅವರ ಕೆಲಸಕ್ಕೆ ಬೆಲೆಯೇ ಇಲ್ಲದಂತೆ ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಜೆ 5ರ ನಂತರ ಎಲ್ಲ ರೀತಿಯ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾತ್ರ …

Read More »

ಮುಖ್ಯ ಶಿಕ್ಷಕನಿಂದ ಸರ್ಕಾರಿ ಶಾಲೆಯಲ್ಲಿ ನಿತ್ಯ ಗುಂಡು, ತುಂಡು ಪಾರ್ಟಿ

ಯಾದಗಿರಿ: ಶಾಲೆ ಎಂದರೆ ಜ್ಞಾನ ದೇಗುಲ ಎಂಬ ಭಾವನೆ. ಇಂತಹ ಶಾಲೆಯಲ್ಲಿ ಗುರುವಿನ ಸ್ಥಾನದಲ್ಲಿರುವ ಶಿಕ್ಷಕನೇ ಶಾಲೆಯಲ್ಲಿ ನೀತಿಗೆಟ್ಟ ಕೆಲಸ ಮಾಡಿದ್ದಾನೆ.   ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರಿನ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಕೊರೊನಾ ಹಿನ್ನೆಲೆ ಶಾಲೆಗೆ ಶಿಕ್ಷಕರು ಮಾತ್ರ ಬರುತ್ತಿದ್ದು, ಶಾಲೆಯಲ್ಲಿ ಮುಖ್ಯ ಶಿಕ್ಷಕ ಆಡಿದ್ದೆ ಆಟ ಎನ್ನುವಂತಾಗಿದೆ. ಕಳೆದ ಹಲವು ದಿನಗಳಿಂದ, ಶಾಲೆಯೊಳಗೆ ಮುಖ್ಯ ಶಿಕ್ಷಕನ ನೇತೃತ್ವದಲ್ಲೇ ಗುಂಡು-ತುಂಡಿನ …

Read More »

ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಮುಖ್ಯಮಂತ್ರಿಗಳೇ

ಯಾದಗಿರಿ: ನಮ್ಮ ಕೈ ಬಿಡಬೇಡಿ ಮುಖ್ಯಮಂತ್ರಿಗಳೇ, ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಅಂತ ಯಾದಗಿರಿ ಜಿಲ್ಲೆಯ ರೈತರೊಬ್ಬರು ತನ್ನ ಅಳಲನ್ನು ತೊಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಸೇರಿದಂತೆ ತಗ್ಗು ಪ್ರದೇಶದ ಮನೆಗಳಿ ಮಳೆ ನುಗ್ಗುತ್ತಿವೆ. ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತಿದ ಬೆಳೆ ನಾಶವಾಗಿದೆ. ಇದರಿಂದ ಕಂಗಾಲಾಗಿರುವ ಜಿಲ್ಲೆಯ …

Read More »

ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.

ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ………..

ಯಾದಗಿರಿ: ರಾಜಕಾರಣಿಗಳು ಬೇಕಾಬಿಟ್ಟಿಯಾಗಿ ದೊಡ್ಡ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ತಡೆಗೆ ಲಸಿಕೆ ಸಂಶೋಧನೆಯಾಗಿಲ್ಲ. ಹೀಗಿರುವಾಗ ಸಾಮಾಜಿಕ ಅಂತರವೇ ಮಹಾಮಾರಿ ತಡೆಗೆ ಆಯುಧವಾಗಿದೆ. ಇದನ್ನರಿತ ಗ್ರಾಮಸ್ಥರು ಕೊರೊನಾ ಬಂದ ಹಿನ್ನೆಲೆ ಹಳ್ಳಿ ಬಿಟ್ಟು ಜಮೀನು ಸೇರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಕೊರೊನಾಗೆ ಸದ್ಯ ಔಷಧಿ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ. ಮಾಸ್ಕ್ ಧರಿಸುವುದು, …

Read More »

ಕೊರೊನಾ ಸೋಂಕಿತ ಮಕ್ಕಳಲ್ಲಿ ನಗು ತರಿಸಿದ ಕೋವಿಡ್-19 ವೈದ್ಯ ………..

ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಕೊರೊನಾ ರುದ್ರ ತಾಂಡವಾಡುತ್ತಿದೆ. ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಿಗೆ ಕೋವಿಡ್ ಎಂಬ ಬೇತಾಳ ಬೆನ್ನು ಬಿದ್ದಿದ್ದಾನೆ. ಹೀಗಾಗಿ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 300ರ ಸಮೀಪ ಬಂದು ನಿಂತಿದೆ. ಈ 300ರಲ್ಲಿ ವೃದ್ಧರು, ಯುವಕರು, ಗರ್ಭಿಣಿ, ಬಾಣಂತಿಯರು ಹೀಗೇ ಎಲ್ಲಾ ವಯಸ್ಸಿನವರು ಇದ್ದಾರೆ. ಇದರ ಜೊತೆಗೆ ಹಾಲು ಕುಡಿಯುವ ಕಂದಮ್ಮಗಳಿಂದ 10 ವರ್ಷದ ವರೆಗಿನ ಮಕ್ಕಳು ಅತೀ ಹೆಚ್ಚಾಗಿರುವುದು, ಬಹಳಷ್ಟು ನೋವಿನ ಸಂಗತಿ.   ಜಿಲ್ಲೆಯಲ್ಲಿ ಇದುವರೆಗೆ 55ಕ್ಕೂ …

Read More »

ಈಜಲು ನದಿಗೆ ದುಮುಕಿದ ಯುವಕ ನಾಪತ್ತೆ…………

ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದಣ್ಣ ಗೊಂಡಿಕಾರ (35) ನಾಪತ್ತೆಯಾಗಿರುವ ಯುವಕ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಕಾರಣ ಇಬ್ಬರು ಸ್ನೇಹಿತರೊಂದಿಗೆ ಚಂದಣ್ಣ ಗ್ರಾಮದ ಹತ್ತಿರದ ಕೃಷ್ಣಾನದಿಗೆ ಈಜಲು ತೆರಳಿದ್ದ. ಮೂವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಚಂದಣ್ಣ ನದಿಯಿಂದ ಹೊರ ಬರದೆ ನಾಪತ್ತೆಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ …

Read More »

ಮಹಾರಾಷ್ಟ್ರದಿಂದ ಬಂದ ಮಕ್ಕಳಿಗೂ ಕೊರೊನಾ ಪಾಸಿಟಿವ್………

ಯಾದಗಿರಿ: ಮಹಾರಾಷ್ಟ್ರದಿಂದ ಯಾದಗಿರಿಗೆ ಬಂದಿರುವ ಇಬ್ಬರು ಮಕ್ಕಳಲ್ಲಿ ಕೊರೊನಾ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿದೆ. ರೋಗಿ ಸಂಖ್ಯೆ-1733, 06 ವರ್ಷದ ಹೆಣ್ಣು ಮಗು ಮತ್ತು ರೋಗಿ ಸಂಖ್ಯೆ-1743, 09 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಮೊದಲ ಹಂತದ ಮಾಹಿತಿ ಸಂಗ್ರಹಣೆ ಸಂದರ್ಭದಲ್ಲಿ ಇಬ್ಬರು ಮಕ್ಕಳು ಮಹಾರಾಷ್ಟ್ರದಿಂದ ಬಂದಿರುವುದು ಎಂಬುದು ತಿಳಿದುಬಂದಿದೆ. ಇಬ್ಬರ ಸಮಗ್ರ ಟ್ರಾವೆಲ್ ಹಿಸ್ಟರಿ ಪತ್ತೆಗಾಗಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಸದ್ಯ ಇಬ್ಬರು …

Read More »

ಎರಡು ವರ್ಷದ ಮಗುವಿಗೆ ಕೊರೊನಾ- ಯಾದಗಿರಿಯಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ

ಯಾದಗಿರಿ: ತಾಲೂಕಿನಲ್ಲಿ ಇಂದು ಎರಡು ವರ್ಷದ ಗಂಡು ಮಗುವಿಗೂ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಜಿಲ್ಲೆಯ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 11ಕ್ಕೇರಿದೆ. ತಾಲೂಕಿನ ಚಿನ್ನಕಾರ ಗ್ರಾಮದ ಗುರುಮಿಠಕಲ್‍ನ ರೋಗಿ ನಂ.1,256 ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟದೆ. ಈ ಹಿನ್ನೆಲೆ ಮಗುವಿನ ತಂದೆ, ತಾಯಿಯರ ಸ್ಯಾಂಪಲ್ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮೇ 14ರಂದು ತಂದೆ ತಾಯಿ ಮಗುವಿನೊಂದಿಗೆ ಖಾಸಗಿ ವಾಹನದ ಮೂಲಕ ಮುಂಬೈನಿಂದ ಯಾದಗಿರಿಗೆ ಬಂದಿದ್ದರು. ಇವರೊಟ್ಟಿಗೆ …

Read More »