ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
Read More »ಸುಟ್ಟ ಸ್ಥಿತಿಯಲ್ಲಿ ಯುವಕನ ಶವಪತ್ತೆ- ಕುಡಿದು ಗಲಾಟೆಯಲ್ಲಿ ಕೊಲೆ ಶಂಕೆ………
ರಾಯಚೂರು: ನಗರದ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಶವಪತ್ತೆಯಾಗಿದೆ. ಮೃತ ಯುವಕನನ್ನ ನಗರದ ಕುಲಸಂಬಿ ಕಾಲೋನಿ ನಿವಾಸಿ ಕುರುಮೇಶ್ ನಾಯಕ್(23) ಅಂತ ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮದ್ಯದ ಪ್ಯಾಕೆಟ್, ಊಟದ ಪ್ಯಾಕೆಟ್ ಗಳು ಪತ್ತೆಯಾಗಿವೆ. ರಾತ್ರಿ ಕುಡಿದು ಗಲಾಟೆ ಮಾಡಿಕೊಂಡಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಶವ ಸುಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಬೆಂಕಿಯಿಂದ ಸುತ್ತಲಿನ ಗಿಡಗಳು ಸುಟ್ಟು ಭಸ್ಮವಾಗಿವೆ. ರೈಲ್ವೇ ನಿಲ್ದಾಣದ ರೈಲ್ವೇ …
Read More »ಪ್ರತ್ಯೇಕ ರಾಯಚೂರು ವಿವಿ ಕನಸು ನನಸು; ಹೊಸ ವಿವಿ ವ್ಯಾಪ್ತಿಗೆ ಯಾದಗಿರಿ, ರಾಯಚೂರಿನ 187 ಕಾಲೇಜುಗಳು
ರಾಯಚೂರು(ಮೇ 08): ರಾಯಚೂರು ಜಿಲ್ಲೆಯ ಪ್ರಗತಿಪರರು, ವಿದ್ಯಾರ್ಥಿಗಳ ಹೋರಾಟದ ಫಲವಾಗಿ ರಾಯಚೂರು ವಿಶ್ವವಿದ್ಯಾಲಯ ಆರಂಭಕ್ಕೆ ಸಿದ್ದತೆ ನಡೆದಿದೆ. ಕೊನೆಗೂ ರಾಜ್ಯಪಾಲರು ವಿವಿ ಆರಂಭಕ್ಕೆ ತಿದ್ದುಪಡಿ ಕಾಯ್ದೆಗೆ ಅಂಕಿತ ಹಾಕಿದ್ದು ರಾಜ್ಯ ಸರಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ ರಾಯಚೂರು ಜನತೆ ಹರ್ಷಗೊಂಡಿದ್ದಾರೆ. ಗುಲಬುರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ರಾಯಚೂರು ಹಾಗು ಯಾದಗಿರಿ ಜಿಲ್ಲೆಯ 187 ಕಾಲೇಜುಗಳು ಈಗ ಸ್ಥಾಪನೆಯಾಗಲಿರುವ ರಾಯಚೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರಲಿವೆ. ಕಲಬುರಗಿ, ಬೀದರ್, ರಾಯಚೂರು ಹಾಗು ಯಾದಗಿರಿ …
Read More »ರಾಯಚೂರಿನಲ್ಲಿ ವೈದ್ಯಕೀಯ ಸಿಬ್ಬಂದಿಗೆ 3 ತಿಂಗಳಿಂದ ಸಂಬಳವನ್ನೇ ನೀಡಿಲ್ಲ!
ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ, ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುತ್ತಿದ್ದಾರೆ. ಆದರೆ ರಾಯಚೂರಿನಲ್ಲಿ ಇವರ ಸೇವೆಗೆ ಬೆಲೆಕಟ್ಟುವುದಿರಲಿ ಸರಿಯಾಗಿ ಸಂಬಳವನ್ನೇ ನೀಡುತ್ತಿಲ್ಲ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕೋವಿಡ್ ಆಸ್ಪತ್ರೆಗಳಾದ ರಾಯಚೂರಿನ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್ನಲ್ಲಿ ಬಹುತೇಕ ಸಿ ಹಾಗೂ …
Read More »ರಾಯಚೂರಿನಲ್ಲಿ ಮಧ್ಯಾಹ್ನವೇ ಮದ್ಯದಂಗಡಿಗಳು ಕ್ಲೋಸ್
ರಾಯಚೂರು: ಲಾಕ್ಡೌನ್ ಸಡಿಲಿಕೆ ಹಿನ್ನೆಲೆ ಮದ್ಯದಂಗಡಿಗಳನ್ನ ತೆರೆದಿರುವ ಕಾರಣಕ್ಕೆ ರಾಯಚೂರಿನಲ್ಲಿ ರಸ್ತೆಗಳಲ್ಲಿ ಜನರ ಓಡಾಟವೂ ಹೆಚ್ಚಾಗಿದೆ. ಮದ್ಯದಂಗಡಿ ಮುಂದೆ ಜನರ ಕ್ಯೂ ದೊಡ್ಡದಿದೆ ಇದರ ಜೊತೆಗೆ ಜನ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಗುಂಪು ಗುಂಪಾಗಿ ಓಡಾಡುತ್ತಿದ್ದಾರೆ. ಹೀಗಾಗಿ ರಾಯಚೂರಿನಲ್ಲಿ ಮಧ್ಯಾಹ್ನ ಎರಡು ಗಂಟೆಗೆ ಎಲ್ಲ ಬಂದ್ ಮಾಡಲಾಗಿದೆ. ನಿನ್ನೆ ಸಂಜೆ 7 ಗಂಟೆವರೆಗೆ ಮದ್ಯದಂಗಡಿ ತೆರೆಯಲಾಗಿತ್ತು. ಜನರ ಓಡಾಟ ವಿಪರೀತವಾಗಿದ್ದರಿಂದ ಇಂದಿನಿಂದ ಮಧ್ಯಾಹ್ನ ಎರಡು ಗಂಟೆಗೆ ಮದ್ಯದಂಗಡಿ ಬಂದ್ …
Read More »ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ.
ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ. ಶುಕ್ರವಾರ ರಾತ್ರಿ ವೇಳೆ ಗಾಳಿಯ ರಭಸಕ್ಕೆ ಹಾರಿ ಬಂದ ಟಿನ್ಗಳು ನಗರದ ಸಿಯತಲಾಬ್ ನಿವಾಸಿ ರತ್ನಾಬಾಯಿ ಮನೆ ಮೇಲೆ ಬಿದ್ದಿವೆ. ರಸ್ತೆ, ಮನೆಗಳ ಮೇಲೆ ಬಿದ್ದಿರುವ ಟಿನ್ ಗಳಿಂದ ತಳ್ಳೋ ಬಂಡಿ, ಬೈಕ್ಗಳು ಜಖಂಗೊಂಡಿವೆ. ಅಷ್ಟೇ ಅಲ್ಲದೇ ರಾತ್ರಿ ಮಳೆ ಜೋರಾಗಿದ್ದರಿಂದ ನಿವಾಸಿಗಳು ಮನೆಯಿಂದ ಹೊರಗಡೆಯಿರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ …
Read More »ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು
ರಾಯಚೂರು: ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು ಕಾಣೆಯಾಗಿದ್ದಾರೆ. ನಿಮಗೆ ಎಲ್ಲಾದರೂ ಕಾಣಿಸಿದರೆ ದಯವಿಟ್ಟು ಕ್ಷೇತ್ರಕ್ಕೆ ಕಳುಹಿಸಿ ಎನ್ನುವ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿವೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಹರಿಬಿಟ್ಟ ಪೋಸ್ಟ್ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರ ಕೈಗೆ ಓರ್ವ ಯುವಕ …
Read More »ಗ್ರೀನ್ ಝೋನ್ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು…….
ರಾಯಚೂರು: ಗ್ರೀನ್ ಝೋನ್ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿ ಇರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು, ಬುಧವಾರದಿಂದ ಜಿಲ್ಲೆಯಾದ್ಯಂತ ವ್ಯಾಪಾರ- ವಹಿವಾಟು ಶುರುವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ, ಕೈಗಾರಿಕೆಗಳನ್ನ ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಂಪನಿ ಆರಂಭಿಸಲು ಸೂಚಿಸಲಾಗಿದೆ. ಜೊತೆಗೆ ಬೇರೆ …
Read More »ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಲಕ್ಷ್ಮಣ್ ಸವದಿ
ರಾಯಚೂರು: ಜನಪ್ರತಿನಿಧಿಗಳು ಜಾತಿ, ರಾಜಕೀಯ ಬಿಟ್ಟು ನಿಜವಾಗಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕಿದೆ. ಎಲ್ಲವೂ ಸರ್ಕಾರದಿಂದ ಸಾಧ್ಯವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜೀವ ಮತ್ತು ಜೀವನ ಉಳಿಸಲು ಹಾಗೂ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕರೆ ನೀಡಿದ್ದಾರೆ. ರಾಯಚೂರು ಜಲ್ಲೆಯಲ್ಲಿ ಡಿಸಿಎಂ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆ ವೀಕ್ಷಣೆ ಮಾಡಿದರೆ. ಬಳಿಕ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಸಿರು …
Read More »ಮೂಟೆ ಹೊತ್ತು ಸುಸ್ತಾಗುವ ನಮ್ಗೆ ಎಣ್ಣೆ ಇಲ್ಲದಿದ್ರೆ ಹೇಗೆ: ಹಮಾಲಿಗಳು ಆಕ್ರೋಶ………..
ರಾಯಚೂರು: ಲಾಕ್ಡೌನ್ ಹಿನ್ನೆಲೆ ಮದ್ಯಪ್ರಿಯರಿಗೆ ಬಹಿರಂಗವಾಗಿ ಹೇಳಿಕೊಳ್ಳಲು ಆಗದಿರುವಷ್ಟು ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೆಲವರು ದುಬಾರಿ ಬೆಲೆಗೆ ಅಕ್ರಮ ಮದ್ಯವನ್ನು ಕೊಂಡು ಕುಡಿಯುತ್ತಿದ್ದಾರೆ. ರಾಯಚೂರಿನ ಎಪಿಎಂಸಿ ಹಮಾಲಿಗಳು ಮಾತ್ರ ಮದ್ಯ ಬಂದ್ ಆಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದ್ಯ ಸಿಗದಿರುವುದಕ್ಕೆ ಕೆಲವರು ಸಿಎಚ್ ಪೌಡರ್ ಕಲಬೆರಕೆ ಸೇಂದಿಗೆ ದಾಸರಾಗಿದ್ದಾರೆ. ಸೇಂದಿ ಬೆಲೆ ಸಹ ಲಾಕ್ಡೌನ್ ಹಿನ್ನೆಲೆ ಡಬಲ್ ಆಗಿದೆಯಂತೆ. ಲಾಕ್ಡೌನ್ನಿಂದ ಸಿಎಚ್ ಪೌಡರ್ ಸಹ ಸಿಗದಿರುವುದರಿಂದ ಅದರಲ್ಲೂ ನಕಲಿ ಸೇಂದಿ …
Read More »
Laxmi News 24×7