Breaking News
Home / ಜಿಲ್ಲೆ / ರಾಯಚೂರು (page 18)

ರಾಯಚೂರು

ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.

ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …

Read More »

ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …

Read More »

ಲಾಕ್‍ಡೌನ್ ಎಫೆಕ್ಟ್- ನುಗ್ಗೆಕಾಯಿ ಬೆಳೆದ ರೈತರು ಕಂಗಾಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನುಗ್ಗೆಕಾಯಿ ಬೆಳೆದ ರೈತರು ಕೊರೊನಾ ಲಾಕ್‍ಡೌನ್ ಎಫೆಕ್ಟ್ ನಿಂದ ಈ ವರ್ಷ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗುತ್ತಿಲ್ಲ. ಅಲ್ಲದೆ ನುಗ್ಗೆಕಾಯಿ ಬೆಲೆ ಕೂಡ ಇಳಿಕೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಒಬ್ಬೊಬ್ಬ ರೈತರು ಎರಡು ಮೂರು ಎಕರೆ ಪ್ರದೇಶದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚುಮಾಡಿ ನುಗ್ಗೆಕಾಯಿ ಬೆಳೆದಿದ್ದಾರೆ. ಈ ಬಾರಿ ನುಗ್ಗೆಕಾಯಿ ಬೆಳೆಕೂಡ ಉತ್ತಮವಾಗೇ ಬಂದಿದೆ. ಆದರೆ ಕೊಳ್ಳುವವರೇ ಇಲ್ಲವಾಗಿದೆ. ಹೀಗಾಗಿ ರೈತನ …

Read More »

ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ

ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್​ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …

Read More »

ಕಳ್ಳಭಟ್ಟಿ, ಅಕ್ರಮ ಸೇಂಧಿ ಮಾರುವವರ ವಿರುದ್ಧ ಕಠಿಣ : ಡಿಸಿಎಂ ಸವದಿ ಎಚ್ಚರಿಕೆ

ರಾಯಚೂರು, – ಜಿಲ್ಲೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ, ಸಿಎಚ್ ಪೌಡರ್ ಮಿಶ್ರಿತ ಸೆಂಧಿ ಮಾರಾಟ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ನೂತನವಾಗಿ ನೇಮಕಗೊಂಡಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಏ.13ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ …

Read More »

ಹಿಂಬಾಗಿಲಿನಿಂದ ಮದ್ಯ ಮಾರಾಟಕ್ಕೆ ಮುಂದಾದ ಮಾಲೀಕ ಅರೆಸ್ಟ್

ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್‍ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್ ಮಾಲೀಕನೋರ್ವ ತನ್ನ ಅಂಗಡಿಯಲ್ಲಿನ ಮದ್ಯವನ್ನು ಹಿಂಬಾಗಿಲಿನಿಂದ ತಾನೇ ಕದ್ದು ಮಾರಾಟ ಮಾಡಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾನೆ ಇಲ್ಲಿನ ಕೋಹಿನೂರ್ ಬಾರ್ ಅಂಡ ರೆಸ್ಟೋರೆಂಟ್ ನಲ್ಲಿ ಮದ್ಯ ಹಾಗೂ ನಗದು ಹಣವನ್ನು ತೆಗೆಯುತ್ತಿದ್ದ ವೇಳೆ …

Read More »

ರಾಯಚೂರು: ಕೊರೊನಾ ಭೀತಿಗೆ ತಾಯಿಯನ್ನ ಕಳೆದುಕೊಂಡು ತಬ್ಬಲಿಗಳಾದ ಮಕ್ಕಳು

ರಾಯಚೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜಿಲ್ಲೆಯ ಸಿಂಧನೂರಿಗೆ ಪ್ರಯಾಣಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಕೂಲಿಕಾರ್ಮಿಕ ಮಹಿಳೆ ಗಂಗಮ್ಮಳ ಇಬ್ಬರು ಮಕ್ಕಳು ಈಗ ದಿಕ್ಕುಕಾಣದ ತಬ್ಬಲಿಗಳಾಗಿದ್ದಾರೆ. ಮಕ್ಕಳಾದ ಮಂಜುನಾಥ್ ಹಾಗೂ ಪ್ರೀತಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ. ಬೆಂಗಳೂರಿನಿಂದ ಬರುವಾಗ ಬಳ್ಳಾರಿಯಲ್ಲಿ ಅನಾರೋಗ್ಯದಿಂದ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಗಂಗಮ್ಮ ಇಡೀ ಕುಟುಂಬಕ್ಕೆ ಆಸರೆಯಾಗಿದ್ದಳು. ಬೆಂಗಳೂರಿನ ಕೆಂಗೇರಿಯ ಗ್ಲೋಬಲ್ ವಿಲೇಜ್ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಗಂಗಮ್ಮಳಿಗೆ ಅಪಾರ್ಟ್ ಮೆಂಟ್ ಮಾಲೀಕರು ಯಾವುದೇ ಸಹಾಯ ಮಾಡಿಲ್ಲ. …

Read More »

ರಾಮನವಮಿಗೆ ತಟ್ಟದ ಲಾಕ್‍ಡೌನ್ ಬಿಸಿ- ಮುಗಿಬಿದ್ದು ದರ್ಶನ ಪಡೆದ ರಾಮ ಭಕ್ತರು

ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಎಲ್ಲಾ ದೇವಾಲಯಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ರಾಮನವಮಿಗೆ ಮಾತ್ರ ಲಾಕ್‍ಡೌನ್ ಬಿಸಿ ತಟ್ಟಲಿಲ್ಲ. ಬೆಳಗ್ಗೆಯಿಂದ ರಾಮ ಭಕ್ತರು ನಿರಂತರವಾಗಿ ದರ್ಶನ ಪಡೆದಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರಲ್ಲಿ ಭಕ್ತರು ಯಾವ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಮುಗಿಬಿದ್ದು ದರ್ಶನ ಪಡೆದಿದ್ದಾರೆ. ಮಂದಿರದ ಮುಖ್ಯದ್ವಾರಕ್ಕೆ ಬೀಗ ಹಾಕಿದ್ದರೂ ಪಕ್ಕದ ಚಿಕ್ಕ ದ್ವಾರದಿಂದ ಭಕ್ತರ ಪ್ರವೇಶಕ್ಕೆ ಅರ್ಚಕರು ಅನುವು ಮಾಡಿಕೊಟ್ಟಿದ್ದಾರೆ …

Read More »

ಬೆಂಗ್ಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವು- ಭಯಭೀತರಾಗಿರುವ ಗ್ರಾಮಸ್ಥರು

ರಾಯಚೂರು: ಬೆಂಗಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆ ಮೃತ ವ್ಯಕ್ತಿಯ ಮನೆ ಹತ್ತಿರ ಸುಳಿಯಲು ಗ್ರಾಮಸ್ಥರು ಹಾಗೂ ಸಂಬಂಧಿಕರು ಹೆದರಿಕೊಂಡಿರುವ ಘಟನೆ ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ತಳವಾರ (54) ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೇವದುರ್ಗದ ಸೋಮನಮರಡಿ ಗ್ರಾಮದಲ್ಲಿ ತನ್ನ ಮಗಳ ಮನೆಗೆ ಬಂದಿದ್ದರು. ಬಳಿಕ ತನ್ನ ಊರಾದ ಲಿಂಗಸುಗೂರಿನ ರೋಡಲಬಂಡಾಗೆ ಬಂದು ಎರಡು ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ವ್ಯಕ್ತಿ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾನೆಂದು ಭಾವಿಸಿರುವ …

Read More »

ರಾಯಚೂರು: ಐದು ದಿನಗಳಿಂದ ಊಟಕ್ಕಾಗಿ ಪರದಾಡಿದ ಬೀದಿಬದಿಯ ಅಲೆಮಾರಿ

ರಾಯಚೂರು: ಐದು ದಿನಗಳಿಂದ ಊಟವಿಲ್ಲದೆ ಪರದಾಡಿದ ಬೀದಿಬದಿಯ ಅಲೆಮಾರಿ ವ್ಯಾಪಾರಿಗಳು ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಹೊಟ್ಟೆಪಾಡಿಗೆ ದುಡಿಯಲು ಬಂದ ಅಲೆಮಾರಿಗಳಿಗೆ ಕೆಲಸವಿಲ್ಲದೆ ಊಟವೂ ಇಲ್ಲದಂತಾಗಿದೆ. ಊಟ ನೀಡುವಂತೆ ಕೇಳಿಕೊಂಡು ತಹಶೀಲ್ದಾರ್ ಕಚೇರಿಗೆ ಮಹಿಳೆಯರು ನುಗ್ಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಐದಾರು ದಿನಗಳಿಂದ ವ್ಯಾಪಾರವೇ ಇಲ್ಲದಾಗಿ ಊಟವೂ …

Read More »