Breaking News
Home / ಜಿಲ್ಲೆ / ರಾಯಚೂರು (page 5)

ರಾಯಚೂರು

ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಪ್ರಶ್ನೆಗೆ ಹಾಲಪ್ಪ ಆಚಾರ್ ಹೇಳಿದ್ದು ಹೀಗೆ..!

ರಾಯಚೂರು: ಕಳೆದ ಕೆಲವು ದಿನಗಳಿಂದ ಬಾಬೂರಾವ್ ಚಿಂಚನೂರ್ ಮತ್ತೆ ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಮಾತಿದೆ. ಈ ಬಗ್ಗೆ ಸಚಿವ ಹಾಲಪ್ಪ ಆಚಾರ್ ಮಾತನಾಡಿದ್ದು, ಹೋಗೋರಿಗೆ, ಬರುವವರಿಗೆ ಬಾಗಿಲು ಯಾರು ಮುಚ್ಚೋದಕ್ಕೆ ಆಗುತ್ತೆ. ತೆಗೆಯೋದಕ್ಕೆ ಆಗುತ್ತೆ. ಬಹುಶಃ ಅವರು ಹೋಗುವುದಿಲ್ಲ. ಇವತ್ತು ಕೂಡ ನನ್ನ ಜೊತೆಯಲ್ಲಿ ಸಭೆಯಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಚಾರ ಸುಳ್ಳು ಎಂದಿದ್ದಾರೆ. ಇದೆಲ್ಲಾ ಯಾರೋ ಹೇಳಿರುವ ವಿಚಾರವಿರಬಹುದು. ಬಿಜೆಪಿ ಪಾರ್ಟಿಯ ಸಿದ್ದಾಂತವನ್ನು ಬಹಳ ಚೆನ್ನಾಗಿ ಅರ್ಥ ಮಾಡಿಕೊಂಡು, …

Read More »

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …

Read More »

ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು

ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್

ರಾಯಚೂರು: ಮಾನ್ವಿ ಪಟ್ಟಣದ ಪಕ್ಷಿ ಪ್ರೇಮಿ ಪಬ್ಲಿಕ್ ಹೀರೋ ಸಲ್ಲಾವುದ್ದೀನ್ ಗಾಯಗೊಂಡಿದ್ದ ನವಿಲೊಂದನ್ನ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡಿ ಪುನಃ ಕಾಡಿಗೆ ಬಿಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಪಕ್ಷಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಸಲ್ಲಾವುದ್ದೀನ್ ಈಗ ನವಿಲೊಂದಕ್ಕೆ ಪುನರ್ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಮಾನ್ವಿ ತಾಲೂಕಿನ ಬಾಪೂರಿನ ಜಮೀನೊಂದರಲ್ಲಿ ಅನಾರೋಗ್ಯದಿಂದ ಬಿದ್ದಿದ್ದ ನವಿಲನ್ನು ಸ್ಥಳೀಯರಾದ ಫಯಾಜ್ ರುಮಾಲ್ ವಾಲೆ ಹಾಗೂ ಅವರ ಸ್ನೇಹಿತರು ಸಲ್ಲಾವುದ್ದೀನ್ ಅವರಿಗೆ ತಂದು ಒಪ್ಪಿಸಿದ್ದಾರೆ. ಬಳಿಕ …

Read More »

ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು ದುಸ್ತರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಯಚೂರು : ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಜನಾಶೀರ್ವಾದ ಸಮಾರಂಭವನ್ನು ನಡೆಸುತ್ತಿದ್ದು , ಇದಕ್ಕೂ ಪೂರ್ವದಲ್ಲಿ ಸಾರ್ವಜನಿಕರಿಗೆ ಏನನ್ನು ನೀಡಿ ಆಶೀರ್ವಾದ ಪಡೆಯಲು ಮುಂದಾಗಿರುವುದರ ಬಗ್ಗೆ ಬಿಜೆಪಿಗರು ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ . ಕೆ . ಶಿವಕುಮಾರ ಲೇವಡಿ ಮಾಡಿದ್ದಾರೆ . ಸ್ಥಳೀಯ ಖಾಸಗಿ ಹೋಟೆಲ್ ‌ ನಲ್ಲಿ ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ , ಬಿಜೆಪಿ ಸರ್ಕಾರ ಬಂದ ಮೇಲೆ ಸಾರ್ವಜನಿಕರ ಬದುಕು …

Read More »

ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ

ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು.   ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ …

Read More »

ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ.

ರಾಯಚೂರು: ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ನೂತನ ವಿದ್ಯುತ್‌ಶಕ್ತಿ ತಿದ್ದುಪಡಿ …

Read More »

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರತಿ ತಿಂಗಳ 1 ರಿಂದ 10 ನೇ ದಿನಾಂಕದ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಇದುವರೆಗೆ ಇ-ಕೆವೈಸಿ ಆಗದಿರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲೆಯ ಆಹಾರ, …

Read More »

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …

Read More »