Home / ಜಿಲ್ಲೆ / ಶಿವಮೊಗ್ಗ (page 3)

ಶಿವಮೊಗ್ಗ

ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು.

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. …

Read More »

ಕುವೆಂಪು ವಿಶ್ವವಿದ್ಯಾಲಯದ 24 ಮಂದಿಯಲ್ಲಿ ಸೋಂಕು ಪತ್ತೆ, ಸೀಲ್ ಡೌನ್ ಗೆ ಆದೇಶ

ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.   ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ …

Read More »

ಟೈಸನ್‌’ ಶ್ವಾನದ ಜನ್ಮದಿನ: 150 ಮಂದಿಗೆ ಬಿರಿಯಾನಿ ಊಟ, 13 ಸಾವಿರ ಬೆಲೆ ಬಾಳುವ ಹಾಸಿಗೆ ಉಡುಗೊರೆ

ಶಿವಮೊಗ್ಗ : ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಶ್ವಾನಪ್ರಿಯರೊಬ್ಬರು ಶ್ವಾನಕ್ಕೆ ಬೆಲೆಬಾಳುವ ಉಡುಗೊರೆ ನೀಡಿದ್ದಾರೆ.   ಇಲ್ಲಿನ ರಾಗಿಗುಡ್ಡದ ನಿವಾಸಿ ಮಹಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ‘ಟೈಸನ್’ ಎಂದು ಹೆಸರಿಟ್ಟಿದ್ದಾರೆ. ‘ಟೈಸನ್‌’ಗೆ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. 150 ಮಂದಿಗೆ ಬಿರಿಯಾನಿ ಊಟ: ಟೈಸನ್ ಮೊದಲ ವರ್ಷದ ಹುಟ್ಟುಹಬ್ಬಕ್ಕಾಗಿ ಮಹಮದ್ ಅಯಾಜ್ ಅವರು ಮನೆ ಬಳಿ ಪೆಂಡಾಲ್ ಹಾಕಿಸಿ, ನಾಯಿಯಿಂದ ಕೇಕ್ …

Read More »

ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ‌ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ‌ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …

Read More »

‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

ಶಿವಮೊಗ್ಗ: ರಮೇಶ್ ಜಾರಕಿಹೊಳಿ​ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಕೆ.ಎಸ್​.ಈಶ್ವರಪ್ಪ ನಿರಾಕರಿಸಿದ್ದಾರೆ. ಜೊತೆಗೆ, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗರಂ ಸಹ ಆದರು. ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಳ್ಳೇ ವಿಚಾರ ಕೇಳಿದ್ದೇನೆ. ಆ ದರಿದ್ರ ಸಿಡಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಈಶ್ವರಪ್ಪ ಹೇಳಿ ಹೊರಟು ಹೋದರು. ಇದಕ್ಕೂ ಮುಂಚೆ, ನಗರದಲ್ಲಿ ನಡೆದ ಒಂದು ದೇಶ ಒಂದು ಚುನಾವಣೆ …

Read More »

ಪ್ರಚೋದನಕಾರಿ ಭಾಷಣದ ಆರೋಪ: ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಮಾರ್ಚ್‌ 20ರಂದು ಇಲ್ಲಿನ ಬಿ.ಎಚ್‌.ರಸ್ತೆಯ ಸೈನ್ಸ್ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತರ ಮಹಾ ಪಂಚಾಯತ್‌ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಬಂಧನ ಹಾಕಬೇಕು. ಟ್ರ್ಯಾಕ್ಟರ್‌ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ನೀಡಿದ್ದ ಹೇಳಿಕೆ ಆಧಾರಿಸಿ …

Read More »

ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ

ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …

Read More »

ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ

ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ಈ ಬಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇಲ್ಲ?

ಶಿವಮೊಗ್ಗ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳವರವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಶಾಲಾ-ಕಾಲೇಜುಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ …

Read More »

GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

ಶಿವಮೊಗ್ಗ: ಜಿಎಸ್ ಟಿ ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ. ವೇಣು (36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ನೋಂದಣಿ ಮಾಡಲು ವೇಣು ಲಂಚ ಕೇಳಿದ್ದು, ಇಂದು 2500 ರೂ. ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. …

Read More »