Breaking News

ಹಬ್ಬಳ್ಳಿ

ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ರಸ್ತೆಗಳ ಪರಿಸ್ಥಿತಿ ನೋಡಿದರೆ ಭಯ ಮೂಡುವಂತಿದೆ. ಇಲ್ಲಿನ ರಸ್ತೆಗಳ ದುಸ್ಥಿತಿ ಬಗ್ಗೆ ಬಾಲಕಿಯೊಬ್ಬಳು ವಿನೂತನ ರೀತಿಯಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾಳೆ. ಹುಬ್ಬಳ್ಳಿಯ ಹರ್ಷಿತಾ ಮೆಹರವಾಡೆ ಎಂಬ ಬಾಲಕಿ ರಾಜಧಾನಿ ಕಾಲೋನಿಯಲ್ಲಿರುವ ರಸ್ತೆ ಅವ್ಯವಸ್ಥೆ ಕುರಿತು ದೇವತೆ ವೇಷದಲ್ಲಿ ಸಾಕ್ಷ್ಯಚಿತ್ರದ ಮೂಲಕ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾಳೆ. ದಸರಾ ಸಂದರ್ಭದಲ್ಲಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನಾತ್ಮಕ ಪ್ರದರ್ಶನ ಮಾಡಲಾಗಿದೆ. ದುರ್ಗಾ ದೇವಿ ವೇಶ ಧರಿಸಿರುವ ಬಾಲಕಿ …

Read More »

ಬಣ್ಣ ಹಚ್ಚಿದ ಇನ್​​ಸ್ಪೆಕ್ಟರ್ ಕಾಲಿಮಿರ್ಚಿ; ಖಡಕ್ ಡ್ಯೂಟಿಗೂ ಸೈ, ಬಯಲಾಟಕ್ಕೂ ಜೈ

ಹುಬ್ಬಳ್ಳಿ: ಪೊಲೀಸ್ ಇಲಾಖೆ (Police Department) ಅಂದ್ರೆ ಸದಾ ಒತ್ತಡದ ಕೆಲಸ. ಒಂದಷ್ಟು ನಿದ್ದೆ ಮಾಡೋಕೆ ಟೈಮ್ ಸಿಕ್ಕರೂ ಸಾಕು ಅನ್ನೋ ಅಧಿಕಾರಿಗಳಿದ್ದಾರೆ. ಹೀಗಿರುವಾಗ ಇಲ್ಲೊಬ್ಬ ಅಧಿಕಾರಿ ಡ್ಯೂಟಿಗೂ ಸೈ, ಬಯಲಾಟಕ್ಕೂ (Bayalata) ಜೈ ಅಂತಿದಾರೆ. ಅದರಲ್ಲಿಯೂ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆ (Gokul Road Police Station) ಅಂದ್ರೆ ಅದರ ಕಥೆ ಹೇಳುವಂತೆಯೇ ಇಲ್ಲ. ಸದಾ ಕರ್ತವ್ಯ ನಿರತವಾಗಿರೋ ಅನಿವಾರ್ಯತೆ ಇರೋ ಈ ಠಾಣೆಯಲ್ಲಿ ಕೆಲಸ ಮಾಡುತ್ತಲೇ …

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …

Read More »

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …

Read More »

ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.   ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ …

Read More »

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.   ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು …

Read More »

ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

ಹುಬ್ಬಳ್ಳಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು (ಸೆ.27) ಭಾರತ್ ಬಂದ್ಗೆ (Bharat Bandh) ಕರೆಕೊಟ್ಟಿದ್ದಾರೆ. ಸದ್ಯ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿಲ್ಲ. ಈ ಬಗ್ಗೆ ಪ್ರತಿಕ್ರಿಯಿ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೊವಿಡ್ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಅಂತ ಹೇಳಿದ್ದಾರೆ. ಕಾಂಗ್ರೆಸ್ …

Read More »

ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.   ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್‍ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್‍ಗೆ …

Read More »

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

  ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ.   ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …

Read More »

ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ.

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ಸುರಿದ ಮಳೆಯಿಂದಾಗಿ 506 ಶಾಲೆಗಳ 1,373 ಕೊಠಡಿಗಳು ಹಾಳಾಗಿವೆ. ನವಲಗುಂದ ತಾಲ್ಲೂಕಿನಲ್ಲಿ ಹಾನಿ ಪ್ರಮಾಣ ಹೆಚ್ಚಿದೆ. 2019ರಲ್ಲಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿತ್ತು. ಮನೆ ಹಾಗೂ ಕೆಲ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ನೀರು ನುಗ್ಗಿತು. ಮೇಲಿಂದ ಮೇಲೆ ಸುರಿದ ಮಳೆಯಿಂದಾಗಿ ಹಳೇ ಶಾಲೆಗಳ ಕೊಠಡಿಗಳು ಬಿರುಕು ಬಿಟ್ಟು ಬಿದ್ದಿದ್ದವು. ಆ ವರ್ಷ 199 ಶಾಲೆಗಳ 444 ಕೊಠಡಿಗಳಿಗೆ ಹಾನಿಯಾಗಿತ್ತು. ದುರಸ್ತಿಗೆ ಕಾದಿದ್ದ ಎಲ್ಲ 444 …

Read More »