Breaking News
Home / ಜಿಲ್ಲೆ / ಹಾವೇರಿ (page 7)

ಹಾವೇರಿ

ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಶಾಸಕ ಸತೀಶ ಜಾರಕಿಹೊಳಿ

ಹಾವೇರಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಹಾವೇರಿ ಜಿಲ್ಲೆಯ ಕಾಂಗ್ರೆಸ್  ಪಕ್ಷದ ಸಂಘಟನೆಯನ್ನು ಕುರಿತು ಪಾದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ  ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಮಾಜಿ  ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ …

Read More »

ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ.

ಹಾವೇರಿ: ನಿವೃತ್ತಿಯಾಗಿ ವರ್ಷ ಕಳೆದರು ಬಾರದ ಪೆನ್ ಶನ್ ನಿಂದಾಗಿ ವಾಯುವ್ಯ ಸಾರಿಗೆಯ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.2 ರಂದು ಬೆಳಕಿಗೆ ಬಂದಿದೆ. ಶಿವಪ್ರಕಾಶ ಹೂಗಾರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ನಗರದ ವಾಯುವ್ಯ ಸಾರಿಗೆ ಇಲಾಖೆಯ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಕಚೇರಿ ಮುಂಭಾಗದ ಹೊಟೇಲ್ ನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.  ಶಿವಪ್ರಕಾಶ ಹೂಗಾರ 1 ವರ್ಷ 8 ತಿಂಗಳ ಹಿಂದೆ ಚಾಲಕ ಹುದ್ದೆಯಿಂದ …

Read More »

ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡ ಬಿಜೆಪಿ ಶಾಸಕ

ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾದ ರೌದ್ರನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾಗಿದ್ದ ಬಿಜೆಪಿ ಶಾಸಕ ಅರುಣ್ ಕುಮಾರ್ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.   ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಅಪಾರ ಬೆಂಬಲಿಗರ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ರಾಣೆಬೆನ್ನೂರು ನಗರದಲ್ಲಿರುವ ಶಾಸಕರ ನಿವಾಸದ ಬಳಿ ಸೇರಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಎಲ್‍ಇಡಿ ಟಿವಿ, ಸೌಂಡ್ …

Read More »

ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ

ಹಾವೇರಿ: ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ. ಆ ಸೌಂದರ್ಯವನ್ನ ಕಣ್ತುಂಬಿಕೊಳ್ಳೋದೆ ಕಣ್ಣಿಗೆ ಹಬ್ಬ, ಮನಸ್ಸಿಗೆ ಆನಂದ. ಇಲ್ಲಿನ ಸೌಂದರ್ಯಕ್ಕೆ ಮನಸೋತ ಜನ, ಧುಮ್ಮಿಕ್ಕುವ ಜಲಪಾತ ನೋಡಲು ಸಾಲುಗಟ್ಟಿ ಆಗಮಿಸುತ್ತಿದ್ದಾರೆ. ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮದಗಮಾಸೂರು ಕೆರೆಯ ಬಳಿ ಜಲಪಾತ ಉಂಟಾಗಿದ್ದು, ಕಣ್ತುಂಬಿಕೊಳ್ಳಲು ಸಚಿವರು ಸೇರಿದಂತೆ ಜನರು ಮುಗಿಬೀಳುತ್ತಿದ್ದಾರೆ. ಮದಗಮಾಸೂರು ಕೆರೆ ಐತಿಹಾಸಿಕವಾಗಿ ಸಾಕಷ್ಟು ಮಹತ್ವ ಪಡೆದಿದೆ. ಕೆರೆಯ ಕುರಿತು …

Read More »

ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ

ಹಾವೇರಿ: ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂತಹ ಘಟನೆ ನಡೆದಿದೆ. ಹೌದು, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಸವೇಶ್ವರ ನಗರದಲ್ಲಿ ಇಂದು ನಡೆದಿದೆ. ಡಾ. ಜಗದೀಶ್ ಗೊಡ್ಡೆಮ್ಮಿ (47) ಎಂಬುವರೇ ಆತ್ಮಹತ್ಯೆಗೆ ಶರಣಾದ ವೈದ್ಯರಾಗಿದ್ದಾರೆ. ಮೃತ ಜಗದೀಶ್ ನಗರದ ಗೌರಮ್ಮ ಸ್ಮಾರಕ ಮೊಮೊರಿಯಲ್ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞ ವೈದ್ಯರಾಗಿ …

Read More »

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ

ಹಾವೇರಿ,   : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ ಎಂದು ಆರೋಪಿಸಿದರು. ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..! ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ …

Read More »

ಜನರಿಂದ ಹಗಲು ದರೋಡೆಗೆ ನಿಂತಿದೆವಾಯುವ್ಯ ಸಾರಿಗೆ ಇಲಾಖೆ

ಹಾವೇರಿ: ವಾಯುವ್ಯ ಸಾರಿಗೆ ಇಲಾಖೆಯಲ್ಲಿ ಆಗಾಗ ಒಂದಿಲ್ಲೊಂದು ಅವಾಂತರಗಳು ನಡೆಯುವಂತೆ, ಈಗ ಟಿಕೆಟ್ ದರದ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ. ಒಂದು ಊರಿನಿಂದ ಮತ್ತೊಂದು ಊರಿಗೆ ಹೋದ್ರೆ ಒಂದು ದರವಿದ್ದರೇ, ಹೋದ ಊರಿನಿಂದ ಮರಳಿ ಬಂದರೆ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆ. 10 ರಂದು ಪ್ರಯಾಣಿಕನೋರ್ವ ಮಧ್ಯಾಹ್ನ 2.22 ಗಂಟೆಗೆ ಕಾಗಿನೆಲ್ಲಿಯಿಂದ ಹತ್ತಿರದ ಮುತ್ತೂರಿಗೆ ತೆರಳುವ ಸಮಯದಲ್ಲಿ ಹಾವೇರಿ ಘಟಕಕ್ಕೆ ಸೇರಿದ …

Read More »

ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಭತ್ತದ ನಾಟಿ

ಹಾವೇರಿ: ಹಾವೇರಿಯಲ್ಲಿ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಜನರು ಭತ್ತದ ನಾಟಿ ಮಾಡುವ ಮೂಲಕ ವಿನೂತನವಾಗಿ ಆಡಳಿತದ ಗಮನ ಸೇಳೆದರು. ಸೋಮವಾರ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ 26 ರಲ್ಲಿ ಕಳೆದ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆ ಕೇಸರು ಗದ್ದೆಯಾಗಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ, ತಾಲ್ಲೂಕಾಡಳಿತ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ …

Read More »

ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ

ಹಾವೇರಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಮಳೆರಾಯ ಎರಡು ದಿನಗಳಿಂದ ಕೊಂಚ ವಿಶ್ರಾಂತಿ ನೀಡಿದ್ದಾನೆ. ಆದರೆ ನದಿಗೆ ಹರಿದು ಬರುತ್ತಿರುವ ನೀರು ಮಾತ್ರ ಕಡಿಮೆಯಾಗಿಲ್ಲ. ಸೇತುವೆ ಮೇಲಿಂದ ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ ಪ್ರದರ್ಶಿಸಿದ್ದಾರೆ.ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ವರದಾ ನದಿಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ವಾರದಿಂದ ವರದಾ ನದಿ ಭರಪೂರ ತುಂಬಿ ಹರಿಯುತ್ತಿದೆ. ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. …

Read More »

ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ

ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …

Read More »