Breaking News
Home / ಜಿಲ್ಲೆ / ಹಾವೇರಿ (page 8)

ಹಾವೇರಿ

ಮೃತ ದೇಹದಿಂದ ಕೊರೋನಾ ವೈರಸ್ ಹರಡುತ್ತದೆಯೇ?;

  ಹಾವೇರಿ: ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯಿಂದ ಅಥವಾ ಮೃತದೇಹದಿಂದ ಕೊರೋನಾ ವೈರಸ್​ ಹರಡುತ್ತಿದೆಯಾ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುವುದು ಸಹಜ. ಈ ಅನುಮಾನ ಅಥವಾ ಗೊಂದಲಕ್ಕೆ ಇಲ್ಲಿದೆ ಉತ್ತರ.   ಕೊರೋನಾ ಸೋಂಕಿನಿಂದ ಮೃತರಾದ ವ್ಯಕ್ತಿಯ ದೇಹದಲ್ಲಿ ಜೀವಹೋದ ನಾಲ್ಕು ತಾಸಿನವರೆಗೆ ಕೊರೋನಾ ವೈರಸ್ ಜೀವಂತವಾಗಿರುತ್ತದೆ. ನಂತರ ವೈರಸ್ ನಾಶವಾಗುತ್ತದೆ. ಕೊರೋನಾ ವೈರಸ್ ಪರಾವಲಂಬಿ ಜೀವಿಯಾಗಿರುವುದರಿಂದ ಸ್ವಂತವಾಗಿ ಬೆಳೆಯಲು ಅಥವಾ ಜೀವಿಸಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಸೋಂಕಿನಿಂದ ಸತ್ತ ವ್ಯಕ್ತಿಯ ಶವವನ್ನು …

Read More »

ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌.

ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …

Read More »

ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ. ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ …

Read More »

ಹಾವೇರಿಯಲ್ಲಿ ಪಿಡಿಒ ಸೇರಿ ಆರು ಜನರಿಗೆ ಕೊರೊನಾ- ಓರ್ವ ಸೋಂಕಿತ ಸಾವು

ಹಾವೇರಿ: ಜಿಲ್ಲೆಯಲ್ಲಿ ಇಂದು ಒರ್ವ ಕೋವಿಡ್-19 ನಿಂದ ಮೃತಪಟಿದ್ದು, ಪಿಡಿಒ ಸೇರಿ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರಿನ ಮಾಸೂರ ನಗರದ 45 ವರ್ಷದ ವ್ಯಕ್ತಿ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಜುಲೈ 9ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಜುಲೈ 10ರಂದು ಮೃತಪಟ್ಟಿದ್ದಾರೆ. ಆ ದಿನವೇ ಇವರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಜುಲೈ 12ರಂದು ಪಾಸಿಟಿವ್ ಎಂದು ದೃಢಪಟ್ಟಿತ್ತು. ಹಾವೇರಿ ತಾಲೂಕು …

Read More »

ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ

ಹಾವೇರಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಲಹೆ ಮೇರೆಗೆ ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಗುತ್ತೂರ ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್‍ಡೌನ್ ವೇಳೆ ಹಾಲು, ದಿನಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲವೂ ಲಾಕ್‍ಡೌನ್ ಆಗಲಿದೆ. ಯಾರೂ ಮನೆಯಿಂದ ಹೊರಬರದೆ …

Read More »

ಕೊರೊನಾ ಬಂದ ವ್ಯಕ್ತಿಗಳನ್ನ ಕೀಳಾಗಿ ಕಾಣಬೇಡಿ- ಪುಟ್ಟ ಬಾಲಕಿ ಮನವಿ

ಹಾವೇರಿ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರನ್ನ ನೋಡುವ ದೃಷ್ಟಿಕೋನ ಬೇರೆಯಾಗಿದೆ. ಆದರೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಅಕ್ಕಿಆಲೂರಿನ ಪುಟ್ಟ ಬಾಲಕಿಯೊಬ್ಬಳು ಮಹಾಮಾರಿ ಕೊರೊನಾ ಸೋಂಕಿನ ಬಗ್ಗೆ ಮನಮುಟ್ಟುವ ಸಂದೇಶವನ್ನು ನೀಡಿದ್ದಾಳೆ. ಅಕ್ಕಿಆಲೂರು ಗ್ರಾಮದ ಬಾಲಕಿ ವಚನಾ ಚಿಲ್ಲೂರಮಠ ಜೈನ್ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕೊರೊನಾ ಕುರಿತು ಮಾನವೀಯ ಸಂದೇಶವನ್ನು ಸಾರಿದ್ದಾಳೆ.ಗ್ರಾಮದ ಕೊರೊನಾ ವ್ಯಕ್ತಿಗಳನ್ನು ಸಮಾಜದಲ್ಲಿ ನೋಡುವ ದೃಷ್ಟಿ ಬದಲಾಗಿದೆ. ಕೊರೊನಾ ಬಂದ …

Read More »

10 ದಿನ ಕಳೆದ್ರೂ ಬಾರದ ವರದಿ – ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಹಾವೇರಿ: ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರ ವರದಿ ಎಂಟು ಹತ್ತು ದಿನಗಳು ಕಳೆದರೂ ಬಾರದ ಹಿನ್ನೆಲೆ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊರ ರಾಜ್ಯಗಳಿಂದ ಬಂದ 60ಕ್ಕೂ ಹೆಚ್ಚಿನ ಜನರನ್ನು ಸರ್ಕಾರದ ಆದೇಶದಂತೆ ಸರ್ಕಾರಿ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿಯ ಜನರು ಸರಿಯಾಗಿ ಊಟವೂ ಸಿಗದೆ ಇತ್ತು ಕೊರೊನಾ ವರದಿಯೂ ಬಾರದೆ, ಮನೆಗೂ ಹೋಗಲಾಗದೆ ಪರದಾಟ ಅನುಭವಿಸುತ್ತಿದ್ದೇವೆ …

Read More »

ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆಗ್ರಾಮಸ್ಥರು

ಹಾವೇರಿ,- ಮಹಾಮಾರಿ ಕೊರೊನಾ ರಾಜ್ಯದ ಮೂಲೆ ಮೂಲೆಗೂ ಹಬ್ಬುತ್ತಿದ್ದು, ಸೋಂಕಿನಿಂದ ದೂರವಿರಲು ಹಿರೆಕೆರೂರು ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಸ್ವಯಂಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಸೋಂಕಿಲ್ಲ. ಬೇರೆ ಊರಿನವರು ಬಂದು ಸೋಂಕು ಹಬ್ಬಿಸುವುದು ಬೇಡ ಎಂದು ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಯಾರೂ ಹೊರಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.ಮನೆಗೆ ಒಬ್ಬೊಬ್ಬರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಊರಿನ …

Read More »

ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ- 2 ಗಂಟೆ ಅಂಬುಲೆನ್ಸ್‌ನಲ್ಲೇ ಸೋಂಕಿತ……..

ಹಾವೇರಿ: ಮಹಾಮಾರಿ ಕೊರೊನಾದಿಂದ ಅಂಬುಲೆನ್ಸ್, ಬೆಡ್ ಸಿಗುತ್ತಿಲ್ಲ ಎಂಬ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿವೆ. ಇದೀಗ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತನನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಹಾವೇರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಉಂಟಾಗಿದೆ. ಇದರಿಂದ ಸುಮಾರು ಎರಡು ಗಂಟೆ ಸಮಯ ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್‌ನಲ್ಲೇ ಕೊರೊನಾ ಸೋಂಕಿತ ಕುಳಿತಿದ್ದರು. ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ. ಹೀಗಾಗಿ ಬೆಡ್ ಖಾಲಿ ಆಗುವರೆಗೂ ಕಾಯಿರಿ ಎಂದು ಆಸ್ಪತ್ರೆ …

Read More »

ಸೋಂಕಿತ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳಿಸಲು ಪತಿರಾಯನ ರಂಪಾಟ!

ಹಾವೇರಿ:ಕೋವಿಡ್-19 ಪಾಸಿಟಿವ್‌ ಇರುವ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳುಹಿಸಲು ಒಪ್ಪದ ಪತಿ ಆರೋಗ್ಯ ಸಿಬ್ಬಂದಿಯೊಂದಿಗೆ ರಂಪಾಟ ಮಾಡಿದ ಘಟನೆ ಗುರುವಾರ ತಾಲೂಕಿನ ಕನವಳ್ಳಿಯಲ್ಲಿ ನಡೆದಿದೆ. ಕೋವಿಡ್  19 ಪಾಸಿಟಿವ್‌ ವರದಿ ಬಂದಾಗ ಗರ್ಭಿಣಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್‌ ಸಿಬ್ಬಂದಿ ಕನವಳ್ಳಿಯ ಮನೆಗೆ ಹೋದಾಗ ಪತ್ನಿಯೊಂದಿಗೆ ಪತಿಯೂ ಆಂಬ್ಯುಲೆನ್ಸ್‌ ಏರಲು ಯತ್ನಿಸಿದ್ದಾನೆ. ಪ್ರೀತಿಯ ಪತ್ನಿಯನ್ನು ಒಬ್ಬಳೇ ಇರಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಸ್ಥಳೀಯರು, ಸಿಬ್ಬಂದಿ ಮನವೊಲಿಸಿ ಆಂಬ್ಯುಲೆನ್ಸ್‌ ಹತ್ತುವುದನ್ನು …

Read More »