Breaking News

ಜಿಲ್ಲೆ

ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ : ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ ಒತ್ತಡಕ್ಕೆ ಸಿಲುಕಿ ಹೀಗೆ ಹೇಳುತ್ತಿದ್ದಾರೆ ಎಂದು ಚಿತ್ರ ಸಾಹಿತಿ ಕೆ.ಕಲ್ಯಾಣ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನನ್ನ ಹಾಗೂ ನನ್ನ ಪತ್ನಿಯ ನಡುವೆ ಯಾವುದೇ ಗೊಂದಲಗಳಿಲ್ಲ. ನಾವಿಬ್ಬರು ಚೆನ್ನಾಗೇ ಇದ್ದೆವು. ಮನೆ ಕೆಲಸಕ್ಕೆ ಎಂದು ಬಂದ ಗಂಗಾ ಕುಲ್ಕರ್ಣಿಯಿಂದ ನಮ್ಮ …

Read More »

ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಹೆಸರುಗಳು ಹೊರ ಬರುತ್ತಿವೆ. ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..? ಯಾರು ಆ ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೂಪಕಿ ಅನುಶ್ರೀಗೆ ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದರು ಎಂಬುದಾಗಿ ಸುದ್ದಿ ಬರ್ತಾ ಇದೆ. ಎಸ್ …

Read More »

ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರ ಮುಗಿಸಿ ವಾಪಸ್ಸು ಹೋಗುವಾಗ ಅಪಘಾತ

ಬೇಲೂರು: ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ. ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್‌ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ರಸ್ತೆ …

Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ನವದೆಹಲಿ : ರಾಜ್ಯದ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಪುಟ್ಟಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಪುಟ್ಟಣಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವಾಗಲೇ ಟಿಕೆಟ್ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿ ಆಗ್ನೇಯ ಪದವೀಧರ ಕ್ಷೇತ್ರ : ಎಂ ಚಿದಾನಂದಗೌಡ ಪಶ್ಚಿಮ ಪದವೀಧರ ಕ್ಷೇತ್ರ: ಎಸ್ ವಿ ಸುಂಕನೂರು ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ …

Read More »

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

  ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …

Read More »

ಚಿತ್ರಸಾಹಿತಿ ಕಲ್ಯಾಣ್ ಪತ್ನಿ ಕುಟುಂಬದ ಆಪ್ತನ ಬಳಿ ಸಿಕ್ತು ಮಾಟ ಮಂತ್ರದ ವಸ್ತುಗಳು!

ಬೆಳಗಾವಿ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ವಾಲಿ ಬಳಿ ಮಾಟ ಮಂತ್ರದ ವಸ್ತುಗಳು ಸಿಕ್ಕಿವೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ನಿವಾಸಿ ಶಿವಾನಂದ ವಾಲಿ ವಿರುದ್ಧ ಮಾಟ ಮಂತ್ರದ ಆರೋಪ ಕೇಳಿ ಬಂದಿದೆ. ಶಿವಾನಂದ ವಾಲಿ ಕೆ.ಕಲ್ಯಾಣ್ ಪತ್ನಿ ಕುಟುಂಬದ ಆಪ್ತ. ಈ ಹಿಂದೆ ಕೆ‌.ಕಲ್ಯಾಣ್ ಶಿವಾನಂದ ವಾಲಿ ವಿರುದ್ಧ ಅಪಹರಣ ಆರೋಪ ಮಾಡಿದ್ದರು. ಪತ್ನಿ, ಅತ್ತೆ, ಮಾವರನ್ನು ಅಪಹರಣ …

Read More »

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು. ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.

Read More »

ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …

Read More »

ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿ……

ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವರಶೀಗಿಹಳ್ಳಿ ಹೊರವಲಯದಲ್ಲಿ ಹುಲ್ಲಿನ ಹೊರೆ ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪದ ಮೇಲೆ ಮೂವರನ್ನು ಕಿತ್ತೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ದೇವರಶೀಗಿಹಳ್ಳಿ ಗ್ರಾಮದ ನಾಗೇಶ ದೊಡಮನಿ, ವಿಜಯ ಮದನಬಾವಿ ಮತ್ತು ಚೇತನ ಹಿರೇಮಠ ಬಂಧಿತರು. ಅವರಿಂದ, ಕಳವು ಮಾಡಿದ್ದ ₹ 1.40 ಲಕ್ಷ ಮೌಲ್ಯದ 35 ಗ್ರಾಂ. ತೂಕದ ಚಿನ್ನದ ಸರ, ದ್ವಿಚಕ್ರ ವಾಹನ, ₹ 10 ಸಾವಿರ, …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 33,974 ವಿದ್ಯಾರ್ಥಿಗಳು ಪದವಿ

ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) 8ನೇ ಘಟಿಕೋತ್ಸವ ಅ. 5ರಂದು ಬೆಳಿಗ್ಗೆ 11.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು. ‘ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸುವರು. ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರಿನ ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಾರ್ವತಿಗೆ …

Read More »