ಬೆಂಗಳೂರು : ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲ ನಂಟು ಆರೋಪ ಪ್ರಕರಣ ಸಂಬಂಧ ಸದ್ಯ ಬಂಧನವಾಗಿರೋ ಆರೋಪಿಗಳು ಕೇವಲ ಡ್ರಗ್ಸ್ ಪೆಡ್ಲಿಂಗ್ ಮತ್ತು ಸೇವನೆ ಅಷ್ಟೇ ಮಾಡುತ್ತಿರಲಿಲ್ಲ. ಇವರ ಜಾಲ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ರವಿಶಂಕರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. 5, 10 ರೂಪಾಯಿ ನೋಟುಗಳನ್ನು ಹವಾಲಾಗೆ ಬಳಸಿ, ಲಕ್ಷಕ್ಕೆ ಕೆ.ಜಿ …
Read More »ತುಂಗಭದ್ರಾ ನದಿ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದೆ.
ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಮದಗಲಟ್ಟಿ ಬಳಿಯಿರುವ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದು, ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ರಸ್ತೆಯಾಗಿದ್ದು, 2002ರಲ್ಲಿ ನಿರ್ಮಾಣಗೊಂಡಿತ್ತು. ಸೇತುವೆ ಸಾಕಷ್ಟು ಶಿಥಿಲಾವಸ್ಥೆಯಲ್ಲಿದ್ದರೂ ಸಹ ಲೋಕೋಪಯೋಗಿ ಇಲಾಖೆ ಇತ್ತ ಗಮನಹರಿಸಿಲ್ಲ ಎನ್ನಲಾಗಿದೆ. ಸೇತುವೆಯ ನವೀಕರಣದ ಬಗ್ಗೆ ಅನೇಕ ಸಲ ದೂರು ಸಲ್ಲಿಸಿದ್ದರು ಸಹ ಅಧಿಕಾರಿಗಳು ಕ್ಯಾರೇ ಎಂದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಒಂದೆಡೆ ತುಂಗಾಭದ್ರಾ …
Read More »ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್ನಿಂದ ಹಲ್ಲೆ!
ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. …
Read More »ಹ್ಯಾಂಡಿ ಕ್ರಾಫ್ಟ್ಗೆ 15 ಕೋಟಿ ಹಣ ವಂಚಿಸಿದ್ದ ಆರೋಪಿ ED ಬಲೆಗೆ
ಬೆಂಗಳೂರು: ಹ್ಯಾಂಡಿಕ್ರಾಫ್ಟ್ ಎಫ್ ಡಿ ವಂಚನೆ ಪ್ರಕರಣ ಸಂಬಂಧ ನಾಗಲಿಂಗ ಸ್ವಾಮಿಯನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಾಗಲಿಂಗಸ್ವಾಮಿ ಹ್ಯಾಂಡಿ ಕ್ರಾಫ್ಟ್ಗೆ ಸೇರಿದ್ಧ ಸುಮಾರು 15 ಕೋಟಿ ಹಣ ವಂಚನೆ ಮಾಡಿದ್ದ. ಹ್ಯಾಂಡಿ ಕ್ರಾಫ್ಟ್ಗೆ ಸೇರಿದ್ದ ಒಟ್ಟು ಹದಿನೈದು ಕೋಟಿ ಹಣವನ್ನು ವಿಜಯ ಬ್ಯಾಂಕ್ನಲ್ಲಿ FD ಇಡಲಾಗಿತ್ತು. ಬ್ಯಾಂಕ್ ಮತ್ತು ಹ್ಯಾಂಡಿ ಕ್ರಾಫ್ಟ್ ನಡುವೆ ಮಧ್ಯವರ್ತಿ ಯಾಗಿದ್ದ ನಾಗಲಿಂಗ ಸ್ವಾಮಿ FD ಇಟ್ಟ ಏಳು ದಿನದಲ್ಲಿ ನಕಲಿ ಸರ್ಕಾರಿ ಲೆಟರ್ ಮತ್ತು …
Read More »ಉನ್ನತ ವ್ಯಾಸಂಗಕ್ಕೆ ಬಂದು ಮಾದಕ ವಸ್ತು ಮಾರಾಟ, ವಿದೇಶಿ ಪ್ರಜೆ ಸೇರಿ ಐವರ ಬಂಧನ
ಬೆಂಗಳೂರು, ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದು ಎಂಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆ ಮಾದಕ ವಸ್ತುಗಳ ಸೇವನೆ ಚಟಕ್ಕೆ ಬಿದ್ದು ಹಣಕಾಸಿನ ತೊಂದರೆಯಿಂದ ತಾನೇ ಮಾದಕ ವಸ್ತುಗಳ ಮಾರಾಟ ಆರಂಭಿಸಿದ್ದ ವಿದೇಶಿ ಪ್ರಜೆ ಸೇರಿ ಐದು ಮಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಬೆಲೆ ಬಾಳುವ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೂಡಾನ್ ದೇಶದ ಅಹಮ್ಮದ್ ಒಮರ್ (27), ತಾಬ್ಶೇರ್(24), ಲಜೀಮ್(23), ಸೈಯದ್ ಶಕೀರ್(24), ಮೊಹಮ್ಮದ್ ಶಿಹಾಮ್ …
Read More »ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು
ಬೆಂಗಳೂರು: ಬಿಜೆಪಿಯ ಇಬ್ಬರು ಶಾಸಕರು ಸೇರಿದಂತೆ ಹಲವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದ ಪ್ರಸಂಗ ವಿಧಾನಸಭೆ ಮೊಗಸಾಲೆಯಲ್ಲಿ ಮಂಗಳವಾರ ನಡೆಯಿತು. ಕಲಾಪ ನಡೆಯುತ್ತಿದ್ದಾಗಲೇ ಚಹಾ ಕುಡಿಯುವ ಸಲುವಾಗಿ ವಿಧಾನಪರಿಷತ್ತಿನ ಸದಸ್ಯ ಸಿ.ಎಂ. ಇಬ್ರಾಹಿಂ ಜತೆಯಲ್ಲಿ ಸಿದ್ದರಾಮಯ್ಯ ಮೊಗಸಾಲೆಗೆ ಬಂದರು. ಆ ಹೊತ್ತಿನಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಜತೆ ಬಿಜೆಪಿ, ಕಾಂಗ್ರೆಸ್ ಸದಸ್ಯರು ಹರಟೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ಅವರನ್ನು ನೋಡುತ್ತಿದ್ದಂತೆ ಎಲ್ಲರೂ ಅವರ ಮುಂದೆ ನಿಂತರು. ಆಗ, …
Read More »ಪ್ರಥಮ ಭಾಷೆಗೆ 481 ವಿದ್ಯಾರ್ಥಿಗಳು ಗೈರು ಹಾಜರು
ಬೆಳಗಾವಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ 2ನೇ ದಿನವಾದ ಮಂಗಳವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಿತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 2,700 ಮಂದಿಯಲ್ಲಿ 2,540 ವಿದ್ಯಾರ್ಥಿಗಳು ಹಾಜರಾದರು. 160 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4,005 ಮಕ್ಕಳು ನೋಂದಾಯಿಸಿದ್ದರು. ಇವರಲ್ಲಿ 3,684 ಮಂದಿ ಹಾಜರಾದರು. 321 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್ ಆಗಿಲ್ಲ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.
Read More »ಸೆ.25 ರಂದು ‘ಕರ್ನಾಟಕ ಬಂದ್’ ಇಲ್ಲ : ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ
ಬೆಂಗಳೂರು : ಸೆಪ್ಟೆಂಬರ್ 25 ರಂದು ಕರ್ನಾಟಕ ಬಂದ್ ಇಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸೆ.25 ರಂದು ಕರ್ನಾಟಕ ಬಂದ್ ಇಲ್ಲ , ಬಂದ್ ಬದಲು ಹೆದ್ದಾರಿ ಮಾತ್ರ ಬಂದ್ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದ ರೈತವಿರೋಧಿ ಮಸೂಧೆ ವಿರೋಧಿಸಿ, …
Read More »ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ
ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ …
Read More »ಶಾಸಕ ಜಮೀರ್ ವಿರುದ್ಧ ಮತ್ತೇ ಆರೋಪ ಮಾಡಿದ ಸಂಬರಗಿ
ಡ್ರಗ್ಸ್ ಹಗರಣ ಶುರುವಾದ ನಂತರ ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸಿದ ನಂತರ ಕೆಲ ಸಮಯದವರೆಗೆ ಸುಮ್ಮನಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ವಿಧಾನ ಸೌಧಕ್ಕೆ ಆಗಮಿಸಿ ಪುನಃ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಹೊಸ ಆರೋಪಗಳನ್ನು ಮಾಡಿದರು . ” ಜಮೀರ್ ಅಹ್ಮದ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿ ಸರ್ಕಾರಕ್ಕೆ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ , ಈ ಕುರಿತು ಸಿಎಂ ಬಿ . ಎಸ್ . …
Read More »
Laxmi News 24×7