Breaking News

ಜಿಲ್ಲೆ

ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು

ಬೆಂಗಳೂರು, ಸೆ.19- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು, ಇಂಟರ್‍ನೆಟ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ …

Read More »

ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ

ಬೆಂಗಳೂರು: ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ, ಜೆಡಿಎಸ್ ಪಕ್ಷದ ದೇವೇಗೌಡರು ಹಾಗೂ ಕುಟುಂಬ ಒಂದು ಅವಕಾಶವಾದಿ. ಪಕ್ಷಸ್ವಾರ್ಥ ಇರುವವರು. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಬಿಜೆಪಿ ಜೊತೆಯೂ …

Read More »

ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ

ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …

Read More »

ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ……..?

ಬೆಂಗಳೂರು: ಡ್ರಗ್ಸ್ ಕೇಸ್ಸಲ್ಲಿ ಬಂಧಿತರಾಗಿರೋ ಸಂಜನಾ ಹಾಗೂ ರಾಗಿಣಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರೋದು ಬಹಿರಂಗವಾಗಿದೆ. ಇದೀಗ ಜೈಲಲ್ಲಿ ಈ ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೋರ್ಟ್ ಆದೇಶ ಇಲ್ಲದೇ ಆರೋಪಿಗಳಿಗೆ ಜೈಲು ಸಿಬ್ಬಂದಿಯೊಬ್ಬರ ಮನೆಯಿಂದ ನಿತ್ಯ ರುಚಿ ರುಚಿಯಾದ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನಾ ಅನ್ನೋ ಪ್ರಶ್ನೆ ಎದ್ದಿದೆ.   ಇತ್ತ ಕಳೆದ ನಾಲ್ಕು …

Read More »

ಉಡುಪಿಯಲ್ಲಿ ವರುಣನ ಅಬ್ಬರ – ಮನೆಗಳು ಮುಳುಗಡೆ,

ಉಡುಪಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಹಾ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಕಟ್ಟೆಚ್ಚರಿಕೆ ನೀಡಿದೆ. ಇತ್ತ ಉಡುಪಿಯಲ್ಲಿ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಪಾತ್ರದ ಊರುಗಳಿಗೆ ನೀರು ನುಗ್ಗಿದ ಉಡುಪಿ ನಗರದ ಕೆಲಭಾಗ ಕೂಡ ಮುಳುಗಡೆಯಾಗಿದೆ. ಕಲ್ಸಂಕ, ಬೈಲಕೆರೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಾರಿ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸ್ತಬ್ಧವಾಗಿದೆ. ಹಿರಿಯಡ್ಕದಲ್ಲಿ ಸೇತುವೆ …

Read More »

ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …

Read More »

ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …

Read More »

ಆ’ ಫೋಟೋ ಹಾಕಿ ಹೊಗಳಿದ್ದ ಸಂಜನಾ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, …

Read More »

ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …

Read More »

ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ: ಸತೀಶ ಜಾರಕಿಹೊಳಿ

ಬೆಳಗಾವಿ:  ಪಕ್ಷದಲ್ಲಿ ಬಹಳಷ್ಟು ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಮೊದಲು  ಪಕ್ಷ ಅಧಿಕಾರಕ್ಕೆ ಬರಬೇಕು. ಸದ್ಯ ಪಕ್ಷ ಅಧಿಕಾರಕ್ಕೆ ತರಬೇಕು  ಎಂಬುವುದೇ ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ್ಯಂತ ಪಕ್ಷ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದೇವೆ.  ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ  ಶನಿವಾರ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು,   ಸುವರ್ಣಸೌಧದಲ್ಲಿ  ಪ್ರತಿ ಸಲ ಅಧಿವೇಶನ ನಡೆಯಬೇಕು. …

Read More »