Breaking News

ಜಿಲ್ಲೆ

ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ. …

Read More »

ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ …

Read More »

ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,

ಬೆಳಗಾವಿ:    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು …

Read More »

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್………

ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್‍ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಬೈಕ್ ಹಿಂಬದಿ ಸವಾರ …

Read More »

ಗೋಕಾಕ ತಾಲ್ಲೂಕಿನ ಹಿರೇನಂದಿ ಹಾಗೂ ಚಿಕ್ಕನಂದಿ ಗ್ರಾಮಪಂಚಾಯತಿಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚಾರಣೆ ಮಾಡಿದರು.

ಗೋಕಾಕ್ ತಾಲ್ಲೂಕಿನ ಮಮದಾಪುರ ವಲಯದಿಂದ ಇಂದು ಗ್ರಾಮ ಪಂಚಾಯಿತಿ ಯಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೆರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ರಥ ಕಾರ್ಯಕ್ರಮ ಆಚರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ ಕಾಂಬಳೆ ಮತ್ತು ಮಮದಾಪುರ ವಲಯದ ಮೇಲ್ವಿಚಾರಕಿರಾದ N y ವಡ್ಡರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಷಣ ಅಭಿಯಾನ ಯೋಜನೆ ಅತ್ಯಂತ ಪ್ರಮುಖವಾದ ಯೋಜನೆಯಾಗಿದೆ. ಮಕ್ಕಳ ಬೆಳವಣಿಗೆಗೆ ಮತ್ತು ಏಳಿಗೆಗೆ …

Read More »

ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ

ಉಡುಪಿ: ದುಷ್ಕರ್ಮಿಗಳು ಎಸ್‍ಪಿ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಅಕೌಂಟ್ ಸೃಷ್ಟಿ ಮಾಡಿದ್ದಾರೆ. ಕೋಸ್ಟ್ ಗಾರ್ಡ್ ಎಸ್‍ಪಿ ಚೇತನ್ ಕುಮಾರ್ ಹೆಸರಿನಲ್ಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ದುಷ್ಕೃತ್ಯ ಎಸಗುವ ಹುನ್ನಾರ ಮಾಡಿದ್ದರು. ಕೋಸ್ಟಲ್ ಎಸ್‍ಪಿ ಎಸ್‍ಪಿ ಸಿಂಗ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಿ, ಚೇತನ್ ಕುಮಾರ್ ಅವರ ಫೋಟೋ ಬಳಸಲಾಗಿತ್ತು. ಇದಾಗಿ ಕೇವಲ ಅರ್ಧಗಂಟೆಯಲ್ಲಿ ದುಷ್ಕೃತ್ಯ ಬೆಳಕಿಗೆ ಬಂದಿದೆ. ಉಡುಪಿಯ ಮತ್ತು ಬೆಂಗಳೂರಿನ ಸೈಬರ್ ಕ್ರೈಂಗೆ ಎಸ್‍ಪಿ ಚೇತನ್ ಕುಮಾರ್ ದೂರು …

Read More »

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …

Read More »

ನನಗೆ ಸಿಗರೇಟ್ ಕೋಡಿ ಎಂದು ಜೈಲು ಸಿಬ್ಬಂದಿ ಮುಂದೆ ರಂಪಾಟ ಮಾಡಿದ್ದಾರೆಸಂಜನಾ

ಬೆಂಗಳೂರು: ಸಿಸಿಬಿ ನೋಟಿಸ್ ನೀಡಿದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಕಿರಿಕ್ ಮಾಡುತ್ತಿರುವ ನಟಿ ಸಂಜನಾಗಲ್ರಾನಿ ಇದೀಗ ಜೈಲಿನಲ್ಲಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ಸಂಜನಾ ಎರಡು ದಿನಗಳ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ನಟಿಯ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಇದರಿಂದ ಟೆನ್ಶನ್ ಗೆ ಒಳಗಾಗಿರುವ ನಟಿ, ನನಗೆ ಸಿಗರೇಟ್ ಕೋಡಿ …

Read More »

ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿ ,ಮತ್ತೆ ಮೂವರಿಗೆC.C.B.ನೋಟಿಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‍ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿಸಿಬಿ ನೊಟೀಸ್ ತಲುಪಿದೆ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ …

Read More »

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ

ವಿಜಯಪುರ:  ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.   ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್​​ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇಎಂಟಿ  ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ …

Read More »