Breaking News
Home / ಜಿಲ್ಲೆ (page 1049)

ಜಿಲ್ಲೆ

ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷ ಹತ್ತಿರ ಬರುತ್ತಿದ್ದು ಕೋವಿಡ್ 19 ಸೋಂಕು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು …

Read More »

ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ.

ಬೆಂಗಳೂರು: ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ …

Read More »

ದೇಶದಲ್ಲೇ ಮೊದಲ ಬಾರಿಗೆ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಕಾರ್ಯಕ್ಕೆ ಚಾಲನೆ

ಬೆಂಗಳೂರು, – ಸಾಂಕ್ರಾಮಿಕ ರೋಗಗಳು ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ವ್ಯಾಪ್ತಿಯಲ್ಲಿ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಭಾರತದಲ್ಲೇ ಮೊದಲು ಎನಿಸಿದ ಈ ವಾಹನದ ಮೂಲಕ ಸುಮಾರು 30 ರಿಂದ 45 ಅಡಿ ಅಂತರದವರೆಗೆ ರಾಸಾಯನಿಕಗಳನ್ನು ಬಳಸಿ ಸಿಂಪಡಣೆ ಮಾಡಿ ಸಾಂಕ್ರಾಮಿಕ ರೋಗ ಹಬ್ಬುವುದನ್ನು ತಡೆಗಟ್ಟಬಹುದಾಗಿದೆ. ಮಹಾಲಕ್ಷ್ಮಿ ಲೇಔಟ್‍ನ ಶಾಸಕರೂ ಆಗಿರುವ ಆಹಾರ …

Read More »

ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ-ವಿ.ಸೋಮಣ್ಣ ನಡುವೆ ಫೈಟ್..!

ಬೆಂಗಳೂರು, -ಬೆಂಗಳೂರು ಮಹಾನಗರದಲ್ಲಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ಇಬ್ಬರು ಸಚಿವರ ನಡುವೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ಮಾತಿನ ಚಕಮಕಿ ನಡೆದಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ನಗರಾಭಿವೃದ್ಧಿ ಸಚಿವ ವಿ.ಸೋಮಣ್ಣ ನಡುವೆ ಪರಸ್ಪರ ಏಕವಚನದ ಬೈಗುಳ ನಡೆದಿದೆ. ಒಂದು ಹಂತದಲ್ಲಿ ಸೋಮಣ್ಣ ಮತ್ತು ಮಾಧುಸ್ವಾಮಿ ನಡುವೆ ಏಕವಚನದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಜವಾಬ್ದಾರಿಯುತ …

Read More »

ಇಲ್ಲಿದೆ ಮುತ್ತಪ್ಪ ರೈ ಬದುಕಿನ ಅಸಲಿ ಕಹಾನಿ………..

ಬೆಂಗಳೂರು, ಮೇ 15- ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಕಾಲಿಟ್ಟು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಜನಸೇವೆಯಲ್ಲಿ ನಿರತರಾದ ಮುತ್ತಪ್ಪ ರೈ ಅವರ ಇತಿಹಾಸವೇ ರೋಚಕ. ಪುತ್ತೂರಿನಲ್ಲಿ ಸುಸಂಸ್ಕøತ ಕುಟುಂಬದ ನೆತ್ತಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿ ಪುತ್ರನಾಗಿ ಜನಿಸಿದ ನೆತ್ತಾಲ ಮುತ್ತಪ್ಪ ರೈ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದು, ದುರದೃಷ್ಟವಶಾತ್ ಅಪರಾಧ ಜಗತ್ತಿಗೆ ಕಾಲಿಡುವ ಸನ್ನಿವೇಶ ಎದುರಾಯಿತು. ಸಕಲೇಶಪುರದ ಕಾಫಿ ಎಸ್ಟೇಟ್ ವಿವಾದದ ಮೂಲಕ ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಇಳಿದ …

Read More »

ಭಾರತಕ್ಕೆ ವಿಶ್ವ ಬ್ಯಾಂಕ್‌ನಿಂದ 1 ಶತಕೋಟಿ ಡಾಲರ್ ನೆರವು ……….

ನವದೆಹಲಿ, ಮೇ 15- ಕೊರೊನಾ ವೈರಸ್ ನಿಗ್ರಹಕ್ಕಾಗಿ ಹೋರಾಡುತ್ತಿರುವ ಭಾರತಕ್ಕೆ ವಿಶ್ವಬ್ಯಾಂಕ್(ಡಬ್ಲ್ಯುಬಿ) ಇಂದು ಒಂದು ಶತಕೋಟಿ ಡಾಲರ್ ಮೊತ್ತದ ನೆರವು ನೀಡಲು ಸಮ್ಮತಿಸಿದೆ. ವೈರಸ್ ಹಾವಳಿಯಿಂದ ಸಂಕಷ್ಟಕ್ಕೀಡಾಗಿರುವ ಬಡವರು, ಶ್ರಮಿಕ ವರ್ಗದವರು ಮತ್ತಿತರಿಗೆ ಸಾಮಾಜಿಕ ನೆರವು ನೀಡಲು ಶ್ರಮಿಸುತ್ತಿರುವ ಭಾರತಕ್ಕೆ ಸಹಕಾರ ನೀಡಲೋಸುಗ ಕೋವಿಡ್-19 ಸಾಮಾಜಿಕ ರಕ್ಷಣಾ ಸ್ಪಂದನೆ ಕಾರ್ಯಕ್ರಮವನ್ನು ಚುರುಕುಗೊಳಿಸಲು ವಿಶ್ವವ್ಯಾಂಕ್ ಒಂದು ಶತಕೋಟಿ ಡಾಲರ್ ನೆರವಿಗೆ ಒಪಿಗೆ ನೀಡಿದೆ. ಇದರೊಂದಿಗೆ ಭಾರತದಲ್ಲಿ ತುರ್ತು ಕೊರೊನಾ ನಿಗ್ರಹ ಹೋರಾಟಕ್ಕಾಗಿ …

Read More »

“ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮ

ಬೆಳಗಾವಿ: ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟ (ರಿ,) ದಿಂದ ಸರ್ಕಾರದ ಆದೇಶದಂತೆ ಅಂತರ ಕಾಯ್ದುಕೊಂಡು “ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮವನ್ನು ಇಂದು ಕಚೇರಿಯಲ್ಲಿ ನೆರವೇರಿಸಲಾಯಿತು . ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟದ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್,ಎಸ್,ಮೂಕನವರ ಮಾತನಾಡಿ, “ಕರ್ನಾಟಕದ ಇತಿಹಾಸವನ್ನು ಪುಟವನ್ನು ತಿರುವಿ ಹಾಕಿದಾಗ ಚಿತ್ರದುರ್ಗದ ಪಾಳೇಗಾರರಲ್ಲಿ ಮೇಲುಪಂಕ್ತಿಯಲ್ಲಿ ನಿಲ್ಲುವವರು ಯಾರೆಂದರೆ ನಾಡ ದೊರೆ ವೀರ ಮದಕರಿ …

Read More »

“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು”

“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು” ಹುಕ್ಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿನ ಸಮೀಪದ ಮಸರಗುಪ್ಪಿ ಬಳಿಯ ಹಿರಣ್ಯಕೇಶಿ ನದಿಯ ಹೂಳೆತ್ತುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಬಳಿಕ ಸಮೀಪದ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಕೈಷಿ ಇಲಾಖೆಯಿಂದ ರೈತರಿಗೆ ಬೀಜ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿ.ಪಂಚಾಯತಿ ಸಿಇಒ …

Read More »

ದುರ್ಯೋಧನ ಐಹೊಳೆ ವಿರುದ್ಧ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ

ಚಿಕ್ಕೋಡಿ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕಾಗಿರುವ ರಾಯಬಾಗ ಶಾಸಕರು ತಮ್ಮ ಕ್ಷೇತ್ರದಲಿ ಒಂದು ಊರಿಗೆ ಕೇವಲ 20 ದಿನಸಿ ಕಿಟ್ ವಿತರಣೆ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತ ಪಡಿಸಿದರು. ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಬಾಗ ಶಾಸಕರ ಮೂರು ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿರುವ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿ ಹಳ್ಳಿಗಳ ಬಡ ಮತ್ತು …

Read More »

ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.. ದಿನದ ಕರ್ತವ್ಯ ನಿಭಾಯಿಸುತ್ತಲೇ.. ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ.. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು.. ಈ ವಿಷಯಗಳ ಭಿತ್ತಿಚಿತ್ರ …

Read More »