ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …
Read More »ಬೆಳಗಾವಿ: ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧನಿಗೆ ಮತ್ತೆ ಕೊರೊನಾ ಸೋಂಕು
ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ …
Read More »ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದ ಕಾವೇರಿ ನದಿ ತಟ್ಟದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ
ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಾವೇರಿ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಕೊಪ್ಪದ ಕಾವೇರಿ ಸೇತುವೆ ಕೆಳ ಭಾಗದಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಜೆಸಿಬಿಯಲ್ಲಿ ಕುಳಿತ ಶಾಸಕ ರಂಜನ್ …
Read More »ವಿದೇಶಿಗರ ಕ್ವಾರಂಟೈನ್- ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿದ ಗ್ರಾಮಸ್ಥರು
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಬಾಣವಾಡಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದೇಶಿಗರ ಕ್ವಾರಂಟೈನ್ ವಿಚಾರವಾಗಿ, ಮಠದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಬೇಡ ಎಂದು ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದರು. ಇಂದು ಗ್ರಾಮಸ್ಥರ ಜೊತೆ ಜಂಟಿ ಸಭೆ ನಡೆಸಿದ ಅಧಿಕಾರಿಗಳು ಮತ್ತು …
Read More ».ಬೆಂಗಳೂರಿಗೆ ವಿಮಾನ ಹಾರಾಟ ಬೇಡ- ಪ್ರಧಾನಿ ಮೋದಿಗೆ ಸಿಎಂ ಬಿಎಸ್ವೈ ಸಲಹೆ!
ಬೆಂಗಳೂರು: ಕಂಟೈನ್ಮೆಂಟ್ ಝೋನ್ಗಳಿಗಷ್ಟೇ ಲಾಕ್ಡೌನ್ ಸೀಮಿತ ಮಾಡಿ ಎಂದು ದೇಶದ ಬಹುತೇಕ ಮುಖ್ಯಮಂತ್ರಿಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕರ್ನಾಟಕದ ಸಲಹೆಗಳನ್ನು ಮುಂದಿಟ್ಟಿದ್ದು, ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್ವೈ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು: …
Read More »ಮೈಸೂರಲ್ಲಿ ಅನಗತ್ಯವಾಗಿ ತಿರುಗಾಡಿದರೆ ಬೀಳುತ್ತೆ ದಂಡ; ಹೊರಗಿನಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್
ಮೈಸೂರು: ಮೈಸೂರಿನಲ್ಲಿ ಕೊರೋನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅನಗತ್ಯವಾಗಿ ರಸ್ತೆಗೀಳಿದವರಿಗೆ ಜಿಲ್ಲಾಡಳಿತ ದಂಡ ವಿಧಿಸುತ್ತಿದೆ. ಮಧ್ಯಾಹ್ನ 12 ಗಂಟೆಯ ನಂತರ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತ ದಂಡ ವಿಧಿಸಲು ತೀರ್ಮಾನಿಸಿದೆ. ಆಸ್ಪತ್ರೆ, ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಉಳಿದ ವ್ಯವಹಾರಗಳಿಗೆ ನಿರ್ಬಂಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡಿದರೆ 2 ಸಾವಿರ ದಂಡ ವಿಧಿಸಲಾಗುತ್ತಿದೆ. ಈಗಾಗಲೇ 5 ಸಾವಿರ ವಾಹನಗಳನ್ನು ಸೀಜ್ ಮಾಡಿರುವ ಮೈಸೂರು ನಗರ …
Read More »ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ………….
ಬೆಂಗಳೂರು: ಬಹುತೇಕರಿಗೆ ಪೆಟ್ ಡಾಗ್ ಎಂದರೆ ಎಲ್ಲಿಲ್ಲದ ಪ್ರೀತಿ, ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಸಾಕಿರುತ್ತಾರೆ. ಅವುಗಳ ಜೊತೆ ಯಾವಾಗಲೂ ಕಾಲ ಕಳೆಯುತ್ತಿರುತ್ತಾರೆ. ಈ ಮೂಲಕ ಕೆಲಸದ ದಣಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ. ಹೀಗೆ ಸಾಕು ಪ್ರಾಣಿಗಳು ಅವರ ಜೀವನದ ಭಾಗವೇ ಆಗಿರುತ್ತವೆ. ಅದೇ ರೀತಿ ನಟಿ ಶುಭ ಪೂಂಜಾ ಸಹ ನಾಯಿಯನ್ನು ಸಾಕಿದ್ದರು. ಆದರೆ ಅದು ಈಗ ಸಾವನ್ನಪ್ಪಿದೆ. ನಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಶುಭ ಪೂಂಜ ಕೊರಗುತ್ತಿದ್ದಾರೆ. ಲಾಕ್ಡೌನ್ ಹಿನ್ನೆಲೆ ಮನೆಯಲ್ಲೇ ಇರುವ …
Read More »ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಸಿಎಂಗಳ ಪಟ್ಟಿಯಲ್ಲಿ ಬಿಎಸ್ವೈಗೆ 2ನೇ ಸ್ಥಾನ..!
ಬೆಂಗಳೂರು, ಮೇ 11-ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಹೆಚ್ಚು ಹಬ್ಬದಂತೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್.ಯಡಿಯೂರಪ್ಪನವರಿಗೆ ದೇಶದಲ್ಲೇ 2ನೇ ಸ್ಥಾನ ದೊರಕಿದೆ. ಟೈಮ್ಸ್ ನೌ ಹಾಗೂ ಓರೊ ಮಾಕ್ಸ್ ಜಂಟಿಯಾಗಿ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪೈಕಿ ದೆಹಲಿಯಲ್ಲಿ ಅರವಿಂದ್ ಕ್ರೇಜಿವಾಲ್ಗೆ ಮೊದಲ ಸ್ಥಾನ ಬಂದಿದ್ದರೆ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 2ನೇ ಸ್ಥಾನ ಸಿಕ್ಕಿದೆ. ಕೊರೊನಾ ಭಾರತಕ್ಕೆ ಅಧಿಕೃತವಾಗಿ ಕಾಲಿಟ್ಟ ನಂತರ ಅದನ್ನು ತಡೆಗಟ್ಟಲು ಪ್ರಧಾನಿ …
Read More »ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ಮೂವರಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಬೆಂಗಳೂರು, ಮೇ 11- ಮೂರು ಮಂದಿ ದರೋಡೆಕೋರರನ್ನು ಸಾರ್ವಜನಿಕರೇ ಹಿಡಿದು ಸಿದ್ದಾಪುರ ಪೊಲೀಸರ ವಶಕ್ಕೆ ನೀಡಿದ್ದಾರೆ.ಸಿದ್ದಾಪುರ ಠಾಣೆ ಪೊಲೀಸರು ಈ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಾ ಲೇಔಟ್ನ ಸಯ್ಯದ್ ನದೀಮ್ (23), ಮಾಗಡಿ ರಸ್ತೆಯ ಚೌಳರಪಾಳ್ಯ ರಾಮದಾಸ್ ಲೇಔಟ್ನ ಇರ್ಫಾನ್ ಪಾಷ (20) ಮತ್ತು ಪಾದರಾಯನಪುರದ ಮೌಶಾಕ್ ಅಹಮ್ಮದ್ (44) ಪೊಲೀಸರ ವಶದಲ್ಲಿರುವ ಆರೋಪಿಗಳು. ಈ ಮೂವರು ಹೊಸೂರು ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೊಬ್ಬರ …
Read More »ಮೊಬೈಲ್ ಫೀವರ್ ಕ್ಲಿನಿಕ್ಗೆ ಚಾಲನೆ ನೀಡಿದ ಸಿಎಂ …………
ಬೆಂಗಳೂರು,ಮೇ 11- ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನ ನಾಲ್ಕು ವಿಭಾಗಗಳಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡಲಿದ್ದು, ಈಗಾಗಲೇ ಮೈಸೂರು, ಮಂಗಳೂರಲ್ಲಿ ಈ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು. ನಾಲ್ಕು ಬಸ್ಗಳಲ್ಲಿ ಸಂಚಾರ ಮಾಡಲಿರುವ ಮೊಬೈಲ್ ಫೀವರ್ ಕ್ಲಿನಿಕ್ಗಳಲ್ಲಿ ಯಾರಿಗಾದರೂ ಅನಾರೋಗ್ಯ ಕಂಡುಬಂದರೆ ಇಲ್ಲಿ ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ …
Read More »