Breaking News
Home / ಜಿಲ್ಲೆ (page 1081)

ಜಿಲ್ಲೆ

ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ ಪರೀಕ್ಷೆಗಳು ಆರಂಭ

ಬೆಂಗಳೂರು: ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ ಪರೀಕ್ಷೆಗಳು ಆರಂಭವಾಗಲಿದೆ. ಡಿಎಲ್/ ಎಲ್‍ಎಲ್ ಲೈಸೆನ್ಸ್ ಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಈ ಪರೀಕ್ಷೆ ನಡೆಯಲಿದೆ. ಪ್ರತಿದಿನ ಶೇ.50 ರಷ್ಟು ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ದಿನಾಂಕವನ್ನು ಆರ್‌ಟಿಒ ಅಭ್ಯರ್ಥಿಗಳ ಮೊಬೈಲ್‍ಗೆ ಸಂದೇಶ ಕಳುಹಿಸಿದೆ. ಹಸಿರು ವಲಯದಲ್ಲಿರುವ 14 ಜಿಲ್ಲೆಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದ್ದು, …

Read More »

ಸ್ಥಳೀಯರ ಮನವೊಲಿಸಿ 17 ತಬ್ಲಿಘಿಗಳು ತುಮಕೂರಿನಲ್ಲಿ ಕ್ವಾರಂಟೈನ್…………

ತುಮಕೂರು: ಶತಾಯಗತಾಯ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿ 17 ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ ಪಾವಗಡದ ವೈ.ಎನ್.ಹೊಸಕೋಟೆಯ 13 ಜನರಿದ್ದು, ಉಳಿದ 5 ಜನ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ತಗಾದೆ …

Read More »

ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ

ಬೆಳಗಾವಿ, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ ಅಡಿ ನೋಂದಣಿಯಾಗಿರುವ ಎಲ್ಲ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ತಕ್ಷಣವೇ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಒಂದು ವೇಳೆ ಜನರಿಗೆ ವೈದ್ಯಕೀಯ ಸೇವೆ ನೀಡದಿದ್ದರೆ ಲೈಸೆನ್ಸ್ ರದ್ದುಪಡಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಕೋವಿಡ್ ಹೊರತುಪಡಿಸಿ ಇತರೆ …

Read More »

ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್​. ಅಶೋಕ್​, ಧಾರಾವಾಹಿ ಮತ್ತು …

Read More »

ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ …

Read More »

2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್‍) ನಿಂದ …

Read More »

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖ

ಬೆಳಗಾವಿ: ಕೊರೊನಾ ಸೋಂಕು ತಗುಲಿದ್ದ  ಒಬ್ಬ ಮಹಿಳೆಯು ಸೇರಿದಂತೆ ಒಟ್ಟು 8 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ:  ಪಿ-224 ಪಿ-225 ಪಿ-243 ಪಿ-244 ಪಿ-245 ಪಿ-289 ಪಿ-294 …

Read More »

ಚಿಕ್ಕೋಡಿ:ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಯಕ್ಸಂಬಾದ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಪೂಗತ್ಯಾನಟ್ಟಿ ಇವರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಬಂದ ಶಮನೇವಾಡಿಯ ಸಂಜೀವಕುಮಾರ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ. ನಾಳೆ ದಿ. 6 ರಂದು ಸ್ವ ಕ್ಷೇತ್ರ ಯಮಕನಮರಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಲಿದ್ದಾರೆ. ದಿ.7 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಲಭ್ಯವಿರುವ ಅವರು ಖಾನಾಪೂರ ತಾಲೂಕಿನ ಇಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ, ಹಿರೇಮುನ್ನೋಳ್ಳಿಯಲ್ಲಿ 11.30 ಗಂಟೆಗೆ, ಪಾರೀಶ್ವಾಡದಲ್ಲಿ12 ಗಂಟೆಗೆ ಮತ್ತು 12.30. ಗಂಟೆಗೆ ಹಿರೇಹಟ್ಟಿಹೋಳಿಯಲ್ಲಿ ಭೇಟಿ ನೀಡಿ ಜನರ …

Read More »

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು …

Read More »