Breaking News

ಜಿಲ್ಲೆ

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ

: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …

Read More »

ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. …

Read More »

ಬೆಳಗಾವಿ : ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ.

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು ನೀರು ಬಿಡುಗಡೆಯ ಕಾರಣ ಜಿಲ್ಲೆಯಲ್ಲಿ ಕೃಷ್ಣ ನದಿ ಮತ್ತು ಅದರ ಉಪನದಿಗಳು ಜಿಲ್ಲೆಯಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾನದಿಗೆ ಒಳಹರಿವಿನ ಪ್ರಮಾಣ 1,62,139 ಕ್ಯೂಸೆಕ್‌ಗಳಿಗೆ ಏರಿಕೆಯಾಗಿದೆ. ಇದರಿಂದ ಅನೇಕ ಜಿಲ್ಲೆಯ ಅನೇಕ ಸೇತುವೆಗಳು ರಸ್ತೆಗಳು ನೀರಿನಲ್ಲಿ ಮುಳುಗಿದೆ. ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನಿರಿನಲ್ಲಿ ಮುಳುಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು …

Read More »

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್‌.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್‌.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.   ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …

Read More »

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …

Read More »

ಪೊಲೀಸರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಕೈಪಿಡಿ

ಬೆಂಗಳೂರು: ಪೊಲೀಸರ ಆರೋಗ್ಯ ರಕ್ಷಣೆಗಾಗಿ ಮಾರ್ಗಸೂಚಿ ಕೈಪಿಡಿ ಬಿಡುಗಡೆ ಮಾಡಲಾಗಿದೆ. ನಗರದ ಹಲವು ಪೊಲೀಸರು ಕೊರೊನಾ ಸೋಂಕಿತರಾಗಿದ್ದರು. ಹೀಗಾಗಿ, ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲೆಂದು ಈ ಕೈಪಿಡಿ ಸಿದ್ಧಪಡಿಸಲಾಗಿದೆ. ಇದರಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್‌ ಸೂಚನೆ ನೀಡಿದ್ದಾರೆ. ‘ಠಾಣೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯಬೇಕು, ಹೊರಗಡೆ ಕರ್ತವ್ಯನಿರತ ಸಿಬ್ಬಂದಿ ನೇರವಾಗಿ ಮನೆಗೆ ಹೋಗಬೇಕು, ಸಂಬಂಧಿಕರು-ಸ್ನೇಹಿತರನ್ನು ಭೇಟಿಯಾಗಲು ಹೋಗಬಾರದು. …

Read More »

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.

Read More »

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಚಿಕ್ಕಮಗಳೂರಿನಲ್ಲಿ 4 ದಿನಗಳಿಂದ ಧಾರಾಕಾರ ಮಳೆ; ಕಳಸ- ಹೊರನಾಡು ಸಂಪರ್ಕ ಬಂದ್

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …

Read More »