Breaking News

ಜಿಲ್ಲೆ

ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »

ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್​​ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ …

Read More »

ಸಂಬಳ ಕೊಟ್ಟಿಲ್ಲ ಎಂದು ಎಂದು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾದ ಕರೋನಾ ಸೋಂಕಿತ..

ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ  ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ.   ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ.   ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.  ಗುತ್ತಿಗೆ ಕಾರ್ಮಿಕರಿಗೆ …

Read More »

ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲ ಚಿವ ಸಂಪುಟದಿಂದ ಕೈಬಿಡಬೇಕ: ಕರ್ನಾಟಕ ರಕ್ಷಣಾ ವೇದಿಕೆ

ಚಿಕ್ಕೋಡಿ : ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಸಕ್ಕರೆ ಕಾರ್ಖಾನೆಯ ಅಡಿಗಲ್ಲು ಸಮಾರಂಭದ ವೇದಿಕೆಯಲ್ಲಿ ಮರಾಠಿ ನಾಮಫಲಕ ಹಾಕುವ ಜತೆಗೆ ಸಚಿವ ಶ್ರೀಮಂತ ಪಾಟೀಲರು ಕನ್ನಡ ಭಾಷೆ ಮರೆತು ಮರಾಠಿಯಲ್ಲಿಯೇ ಮಾತನಾಡಿದ್ದಾರೆ.  ಇದು ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಮರಾಠಿ …

Read More »

ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ್ವಾತಂತ್ರೋತ್ಸವಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದ್ರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. …

Read More »

ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …

Read More »

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ.   ಸಿಎಂ ನಿವಾಸದ …

Read More »

ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್

ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ …

Read More »

ಜಿಲ್ಲಾಡಳಿತ ಮತ್ತು ಬಿಮ್ಸ್ ಎಡವಟ್ಟು: ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ?

ಬೆಳಗಾವಿ: ಜಿಲ್ಲಾಡಳಿತ ಮತ್ತು ಬಿಮ್ಸ್ ಆಸ್ಪತ್ರೆ ಎಡವಟ್ಟಿನಿಂದ ಕೊವಿಡ್ ವಿಚಾರದಲ್ಲಿ ಎರಡನೇ ಬೆಂಗಳೂರು ಆಗ್ತಿದೆಯಾ ಕುಂದಾನಗರಿ ಎಂಬ ಆತಂಕ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಿತ್ಯವೂ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ ಇನ್ನೂರು, ಮುನ್ನೂರರ ಗಡಿ ದಾಟುತ್ತಿದೆ. ಜಿಲ್ಲಾಡಳಿತ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾದ್ರೂ ಮುಚ್ಚಿಡುವ ಪ್ರಯತ್ನ? ಮಾಡುತ್ತಿದೆ. ಮೃತದೇಹ ಸಾಗಿಸುವ ವಾಹನದ ಡ್ರೈವರ್ ಹೇಳುವಂತೆ ನಿತ್ಯವೂ ಹದಿನೈದರಿಂದ ಹದಿನೆಂಟು ಸೋಂಕಿತರು ಮೃತಪಡುತ್ತಿದ್ದಾರಂತೆ. ವಯಸ್ಸಾದವರು ಆಸ್ಪತ್ರೆಗೆ ದಾಖಲಾದ್ರೂ ಚಿಕಿತ್ಸೆ …

Read More »

ಸಿಎಂ ಬಿಎಸ್​ವೈ ಮಗ ವಿಜಯೇಂದ್ರಗೆ ಕೊರೋನಾ ನೆಗೆಟಿವ್, ಮಗಳಿಗೆ ಪಾಸಿಟಿವ್

ಬೆಂಗಳೂರು (ಆ.3): ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದವರನ್ನು ಹೋಂ ಕ್ವಾರಂಟೈನ್​ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಬಿಎಸ್​ವೈ ಮಗನಿಗೆ ಕೊರೋನಾ ನೆಗೆಟಿವ್​ ಬಂದರೆ, ಮಗಳಿಗೆ ಪಾಸಿಟಿವ್​ ಬಂದಿದೆ. ಭಾನುವಾರ ಟ್ವೀಟ್​ ಮಾಡಿದ್ದ ಬಿಎಸ್​ವೈ ತಮಗೆ ಕೊರೋನಾ ಪಾಸಿಟಿವ್​ ಇರುವುದಾಗಿ ಹೇಳಿಕೊಂಡಿದ್ದರು. ನನ್ನ …

Read More »