Home / ಜಿಲ್ಲೆ (page 1150)

ಜಿಲ್ಲೆ

ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ.

ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಯಾಗುತ್ತೆ ಎಂಬ ನಿರೀಕ್ಷೆಯಲ್ಲಿ ಇದ್ದ ಯಶ್ ಅಭಿಮಾನಿಗಳಿಗೆ ಕೆಜಿಎಫ್-2 ಚಿತ್ರತಂಡ ನಿರಾಸೆ ಮೂಡಿಸಿದೆ. ಇಡೀ ಭಾರತ ಚಿತ್ರರಂಗವೇ ಕೆಜಿಎಫ್-2 ಚಿತ್ರದ ಬಿಡುಗಡೆಯ ಕಡೆ ನೋಡುತ್ತಿದೆ. ಕೆಜಿಎಫ್-1ರ ಭರ್ಜರಿ ಯಶಸ್ಸಿನ ನಂತರ ಯಶ್ ಕೆಜಿಎಫ್-2 ಚಿತ್ರವನ್ನು ಮಾಡುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೂ ಚಿತ್ರ ಕೆಲ ಪೋಸ್ಟರ್ ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಚಿತ್ರದ ಟೀಸರ್ ನೋಡಲು ಯಶ್ …

Read More »

ಕಾರವಾರ: ಲಂಚದ ಆಸೆಗೆ ಬಿದ್ದ ಪೊಲೀಸರು ಇಲಾಖೆ ಜೀಪಿನಲ್ಲಿಯೇ ಕೆಲವರನ್ನು ಗಡಿದಾಟಿಸಲು ಮುಂದಾಗಿ ಟಾಸ್ಕ್ ಪೋರ್ಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ

ಕಾರವಾರ: ಲಂಚದ ಆಸೆಗೆ ಬಿದ್ದ ಪೊಲೀಸರು ಇಲಾಖೆ ಜೀಪಿನಲ್ಲಿಯೇ ಕೆಲವರನ್ನು ಗಡಿದಾಟಿಸಲು ಮುಂದಾಗಿ ಟಾಸ್ಕ್ ಪೋರ್ಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಇಂತಹದೊಂದು ಘಟನೆ ನಡೆದಿರುವುದು ಕುಮಟಾ ತಾಲೂಕಿನ ಗೋಕರ್ಣದಲ್ಲಿ. ಕೆಲ ದಿನಗಳ ಹಿಂದೆ ಗೋಕರ್ಣದಿಂದ ಹುಬ್ಬಳ್ಳಿಗೆ ತೆರಳಿದ ಮೂವರು ಜೆಸಿಬಿ ಡ್ರೈವರ್​ಗಳು ಲಾಕ್ ಡೌನ್​ನಿಂದಾಗಿ ಸಿಲುಕಿಕೊಂಡಿದ್ದರು ಎನ್ನಲಾಗಿದೆ. ಆದರೆ ಮರಳಿ ಬರಲು ಯೋಚಿಸುತ್ತಿರುವಾಗ ಹುಬ್ಬಳ್ಳಿ ಠಾಣೆಯೊಂದರ ಪೊಲೀಸರೊಂದಿಗೆ ವ್ಯವಹಾರ ಕುದುರಿಸಿದ್ದಾರೆ. ಅದರಂತೆ ಒಪ್ಪಿದ ಅಧಿಕಾರಿಗಳು ತಮ್ಮದೇ ಜೀಪಿನಲ್ಲಿ ಮೂವರನ್ನು ಮಹಿಳಾ ಪೇದೆಯೊಂದಿಗೆ …

Read More »

ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ :ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೇರಳದಲ್ಲಿ ಈ ಹಿಂದೆ ವಿದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ.ಯಾಕೆ ಹೀಗಾಗುತ್ತಿದೆ ಎಂದು ಅಧ್ಯಯನ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ ಸೋಂಕು ಕಂಡು ಬಂದ …

Read More »

ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು …

Read More »

ಹಾಸನ:ದೇವಸ್ಥಾನದ ಬಳಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಕೆನ್ನೆ ಕೊಯ್ದ ಪುಂಡರು

ಹಾಸನ: ಕೊರೊನಾ ಲಾಕ್‍ಡೌನ್ ನಡುವೆಯೂ ಹಾಸನದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು ಮನೆ ಬಳಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾರೆ. ಹಾಸನದ ಬೇಲೂರು ರಸ್ತೆಯ, ಈಶ್ವರ ದೇವಾಲಯ ಬಳಿ ಆಟೋಚಾಲಕ ನವೀನ್ ಮನೆಯಿದ್ದು, ಅಲ್ಲಿ ಮೂವರು ಯುವಕರು ಸಿಗರೇಟ್ ಸೇದುತ್ತಾ ಕೂಗಾಡುತ್ತಿದ್ದರು. ಇದನ್ನು ನೋಡಿದ ಆಟೋ ಚಾಲಕ ನವೀನ್, ಯಾರು ನೀವು, ಯಾಕೆ ಹೀಗೆ ಕೂಗಾಡುತ್ತಿದ್ದೀರಿ. ದೇವಾಲಯದ ಬಳಿ ಸಿಗರೇಟ್ ಸೇದಬಾರದು ಎಂದು ಬುದ್ಧಿವಾದ ಹೇಳಿದ್ದಾರೆ. …

Read More »

ಉಡುಪಿ:ಸಿರಪ್ ಬಾಟಲ್ ಹಿಡಿದು ಜಾಲಿ ರೈಡ್- ಯುವಕನ ಬೈಕ್ ಸೀಜ್

ಉಡುಪಿ: ದೇಶಾದ್ಯಂತ ಕೊರೊನಾ ಲಾಕ್ ಡೌನ್ ಘೋಷಣೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಆದರೂ ಜನ ಸುತ್ತಾಡುತ್ತಿದ್ದು, ಹೀಗಾಗಿ ಸುತ್ತಾಡುವವರ ವಾಹನ ಸೀಜ್ ಮಾಡಿ ಜಿಲ್ಲಾಧಿಕಾರಿ ಕೇಸ್ ದಾಖಲು ಮಾಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 11 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ವಿನಾಯಿತಿ ಕೊಟ್ಟಿದೆ. ಆದರೂ ಆ ಸಂದರ್ಭ ಮತ್ತು ಆ ಬಳಿಕ ಅನಗತ್ಯವಾಗಿ ನಗರದಾದ್ಯಂತ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಎಸ್ಪಿ ಮತ್ತು ಡಿಸಿಗೆ …

Read More »

, ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆ,ಇಂದು ಹೊಸದಾಗಿ 12,ಕೊರೋನಾ ಸೋಂಕು ಪತ್ತೆ>

ಬೆಂಗಳೂರು – ರಾಜ್ಯದಲ್ಲಿ ಇಂದು ಹೊಸದಾಗಿ 12 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಬೆಳಗಾವಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದ್ದು, 42ಕ್ಕೇರಿದೆ. ಮೈಸೂರು 3, ಮಂಡ್ಯದಲ್ಲಿ 2, ಬಾಗಲಕೋಟೆ 2, ಕಲಬುರ್ಗಿ 2, ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಕಲಬುರ್ಗಿಯಲ್ಲಿ 16 ವರ್ಷದ ಬಾಲಕನಿಗೆ ಸೋಂಕು ಪತ್ತೆಯಾಗಿದೆ. ನಂಜನಗೂಡು, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ ಪತ್ತೆಯಾಗಿರುವುದು ಸೆಕೆಂಡರಿ ಕಾಂಟಾಕ್ಟ್ ಎನ್ನುವುದು ಖಚಿತವಾಗಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಇಂದು ೊಂದು …

Read More »

ಶಿವಮೊಗ್ಗ:ಜೋಗದ ರಸ್ತೆಯಲ್ಲಿ ಚಿರತೆ – ಓಡಾಡುತ್ತಿರುವ ದೃಶ್,,,,,,,.

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗದ ಪ್ರಮುಖ ರಸ್ತೆಗಳಲ್ಲಿ ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಮಹಾತ್ಮ ಗಾಂಧಿ ಜಲವಿದ್ಯುತ್ ಕೇಂದ್ರಕ್ಕೆ ತೆರಳುವ ಮಾರ್ಗದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಎರಡು ದಿನದ ಹಿಂದೆ ರಸ್ತೆಯಲ್ಲಿ ಓಡಾಡುತ್ತಿದ್ದ ಚಿರತೆಯನ್ನು ನೋಡಿದ ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ಹಿಂದೆ ಜೋಗದ ಸುತ್ತಮುತ್ತಲಿನ ಗ್ರಾಮಗಳಾದ ಶ್ರೀಪುರ, ಬಾಳೆಗದ್ದೆ, ಕೆಮ್ಮಣ್ಣುಗಾರು ಸೇರಿದಂತೆ ಅನೇಕ ಕಡೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೇ ಕಳೆದ 10 ದಿನಗಳಿಂದ …

Read More »

ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..

ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.   ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …

Read More »

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು

ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …

Read More »