Breaking News

ಜಿಲ್ಲೆ

ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’

ಬೆಳಗಾವಿ: ‘ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಗರದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಅವಕಾಶ ಕಲ್ಪಿಸಲಾಗುವುದು. ‘ಗಣೇಶೋತ್ಸವ ಮಂಡಳಿಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ …

Read More »

ದೇವದುರ್ಗದಲ್ಲಿ ಗುಡ್ಡ ಕುಸಿತ- ಇಬ್ಬರು ಬಾಲಕರು ಸಾವು………

ರಾಯಚೂರು: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದೇವದುರ್ಗ ಪಟ್ಟಣದ ಗೌರಂಪೇಟೆ ಕಾಲೋನಿ ಬಳಿ ಗುಡ್ಡ ಕುಸಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಬಾಲಕನ ಕಾಲು ಮುರಿದಿದೆ. 13 ವರ್ಷದ ವಿರೇಶ್, 10 ವರ್ಷದ ರಮೇಶ್ ಮೃತ ಬಾಲಕರು. ಇನ್ನೋರ್ವ ಬಾಲಕ ಮೌನೇಶ್‍ಗೆ ಕಾಲು ಮುರಿದಿದ್ದು, ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿರಂತರ ಮಳೆಯಿಂದಾಗಿ ಗುಡ್ಡದ ಮಣ್ಣು ಸಡಿಲವಾಗಿದ್ದು, ಬಂಡೆ ಕೆಳೆಗೆ ಉರುಳಿದೆ. ಗುಡ್ಡದ ಪಕ್ಕದಲ್ಲೇ ಮನೆಗಳಿದ್ದು, ಬಾಲಕರು ಆಟವಾಡುತ್ತಿದ್ದ ವೇಳೆ ಬಂಡೆ …

Read More »

ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ

ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಆಸ್ಫೋಟ, ಇಂದು 5007 ಮಂದಿಗೆ ಪಾಸಿಟಿವ್, 110 ಸಾವು..!

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.   ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ …

Read More »

ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ.: ಡಾ.ಕೆ.ಸುಧಾಕರ್

ಬೆಂಗಳೂರು: ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವೆ ಎಂದರೆ ಭಯವೇಕೆ ? ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ  ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದಾರೆ. ನಿನ್ನೆ ಸಚಿವ ಸುಧಾಕರ್ ಅವರ ಮಾತಿಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ, ವೆಚ್ಚ ಅಂದರೆ ಏನು ಎಂದು ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು116 ಜನರಿಗೆ ಸೊಂಕುದೃಡ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ.   ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ https://youtu.be/tAGGn6JHTPE  

Read More »

ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. : ಸಚಿವ ಸುರೇಶ ಅಂಗಡಿ 

ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಸುಟ್ಟವರು  ದೇಶದ್ರೋಹಿಗಳು ಅಂತಾ ಕೇಂದ್ರ ಸಚಿವ ಸುರೇಶ ಅಂಗಡಿ  ಹೇಳಿಕೆ ನೀಡಿದ್ದಾರೆ. ಆ್ಯಂಬುಲೆಸ್ ಗೆಬೆಂಕಿ ಹಚ್ಚಿದ ವಿಚಾರವಾಗಿ  ನಗರದ ಕಾಡಾ ಕಚೇರಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದರ ಹಿಂದಿರುವವರನ್ನು ಪೊಲೀಸರು ಕಂಡು ಹಿಡಿಯಬೇಕು.   ವೈದ್ಯಕೀಯ  ಸಿಬ್ಬಂದಿಗಳು  ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು . ಕೃತ್ಯ ಎಸಗಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು …

Read More »

ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ರಾಮದುರ್ಗ ಪುರಸಭೆಯ ಸಿಬ್ಬಂದಿ, ಕಟಕೋಳ ಪೊಲೀಸ್ ಠಾಣೆಯ ಮೂವರು ಪೇದೆಗಳಿಗೆ , ಹಾಗೂ ರಾಮದುರ್ಗ ಕೆಎಸ್‌ಆರ್‌‌ಟಿಸಿ ಘಟಕದ 10 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ. ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ 48 ಗಂಟೆಗಳ ಕಾಲ ರಾಮದುರ್ಗ ಪುರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಟಕೋಳ ಪೊಲೀಸ್ ಠಾಣೆಯ ಪೇದೆಗಳಿಗೂ …

Read More »

ಸರ್ಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳು, ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ..!

ಬೆಂಗಳೂರು,ಜು.24- ಸರ್ಕಾರದ ಆದೇಶವನ್ನು ಪಾಲನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಮತ್ತೆ ಚಾಟಿ ಬೀಸಿದ್ದಾರೆ. ಒಪ್ಪಂದದಂತೆ ಖಾಸಗಿ ಆಸ್ಪತ್ರೆಯವರು ಸರ್ಕಾರಕ್ಕೆ ಈವರೆಗೂ ಕೊಟ್ಟ ಭರವಸೆಯಂತೆ ಹಾಸಿಗೆಗಳನ್ನು ನೀಡದೆ ನಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ನೀಡುತ್ತಿಲ್ಲ. ಒಂದು ಹಂತದವರೆಗೂ ಸಹಿಸಿಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳ ವರ್ತನೆ ಅತಿಯಾಗಿದೆ. ಕೂಡಲೇ ಕಾನೂನು ಕ್ರಮ ಜರುಗಿಸಿ ಎಂದು ಎಚ್ಚರಿಕೆ ಕೊಟ್ಟರು. …

Read More »

ಮಾಸ್ಕ್‌ ಧರಿಸದೇ ಎಂಟ್ರಿ – ಪ್ರಶ್ನಿಸಿದ್ದಕ್ಕೆ ಕಂಪ್ಯೂಟರ್‌ ಎತ್ತಿ, ಪೀಠೋಪಕರಣ ಧ್ವಂಸ

ಹಾಸನ: ಪಾನಮತ್ತ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಗ್ರಾಮ ಪಂಚಾಯಿತಿಗೆ ನುಗ್ಗಿ ಅಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಆತಂಕ ಸೃಷ್ಟಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಗುರುವಾರ ಬ್ಯಾಕರವಳ್ಳಿ ಗ್ರಾಮ ಪಂಚಾಯತಿಗೆ ನುಗ್ಗಿದ ಹರೀಶ್, ನನಗೆ ಹೆಲ್ತ್ ಕಾರ್ಡ್ ಮಾಡಿಕೊಡಬೇಕು ಎಂದು ಸಿಬ್ಬಂದಿಗೆ ಜೋರು ದನಿಯಲ್ಲಿ ಕೇಳಿದ್ದಾನೆ. ಆಗ ಸಿಬ್ಬಂದಿ ಹಿರಿಯ ಅಧಿಕಾರಿಗಳು ಹೊರಗೆ ಹೋಗಿದ್ದಾರೆ ಅವರು ಬಂದ …

Read More »