Breaking News

ಜಿಲ್ಲೆ

ಬೈಕ್ ಡಿಕ್ಕಿ – ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವು

ಕೋಲಾರ: ಎರಡು ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್‍ಐ ಮಂಜುನಾಥ್ (52) ಮೃತಪಟ್ಟವರು. ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ತೆರಳುವ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಎಎಸ್‍ಐ ಸಾವನ್ನಪ್ಪಿದ್ದಾರೆ.ಬುಧವಾರ ರಾತ್ರಿ ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ …

Read More »

ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ……

ನವದೆಹಲಿ: ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ ಮುಂದುವರಿಸುವಂತೆ ಖಾಸಗಿ ಕಂಪನಿಗಳಿಗೆ ಸರ್ಕಾರ ತಿಳಿಸಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಳವಾಗ್ತಿದ್ದಂತೆ ಸರ್ಕಾರದ ಸಲಹೆ ಮೇರೆಗೆ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ತಿಳಿಸಿದ್ದವು. ಐಟಿ ಕಂಪನಿಗಳ ಶೇ.85 ರಷ್ಟು ಉದ್ಯೋಗಿಗಳು ಸದ್ಯ ಮನೆಯಿಂದ ಕೆಲಸ ಮಾಡುತ್ತಿದ್ದಾರೆ.ದೇಶವು ಅನ್‍ಲಾಕ್ ಆಗಿದ್ದರೂ ಕೊರೊನಾ ಆತಂಕ ಮಾತ್ರ ಕಡಿಮೆಯಾಗಿಲ್ಲ. ಸರ್ಕಾರ ಜನದಟ್ಟಣೆ ತಡೆಯುವ ಉದ್ದೇಶದಿಂದ ಐಟಿ, ಬಿಪಿಓ ಸೇರಿದಂತೆ ಖಾಸಗಿ ಕಂಪನಿಗಳು …

Read More »

ಸಂಕಷ್ಟದಲ್ಲಿ ಐಟಿಬಿಟಿ ಕಂಪೆನಿಗಳು, ಬಿಬಿಎಂಪಿಗೆ 2 ಸಾವಿರ ಕೋಟಿ ತೆರಿಗೆ ನಷ್ಟದ ಆತಂಕ..!

ಬೆಂಗಳೂರು, ಜು.22- ಲಾಕ್‍ಡೌನ್‍ನಿಂದ ಐಟಿಬಿಟಿ ಕಂಪೆನಿಗಳು ತೀವ್ರವಾಗಿ ಕಂಗೆಟ್ಟಿದ್ದು, ಇದರಿಂದ ಬಿಬಿಎಂಪಿಗೆ ಬರೋಬ್ಬರಿ 2 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ನಷ್ಟವಾಗುವ ಆತಂಕ ಎದುರಾಗಿದೆ. ಮೊದಲ ಲಾಕ್‍ಡೌನ್ ಹಾಗೂ ರಾಜ್ಯಸರ್ಕಾರದಿಂದ ಮತ್ತೊಂದು ಸುತ್ತಿನ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮ ಐಟಿಬಿಟಿ ಕಂಪೆನಿಗಳು, ವಾಣಿಜ್ಯ ಮಳಿಗೆಗಳು, ಕೈಗಾರಿಕಾ ಕ್ಷೇತ್ರ ಕಂಗೆಟ್ಟು ಹೋಗಿವೆ. ಕಳೆದ ಮಾರ್ಚ್‍ನಿಂದ ಎಲ್ಲ ವಹಿವಾಟುಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ 2020-21ನೆ ಸಾಲಿನ ವಾಣಿಜ್ಯ ತೆರಿಗೆ ಮನ್ನಾ ಮಾಡಬೇಕೆಂದು ಐಟಿಬಿಟಿ ಕಂಪೆನಿಗಳು, …

Read More »

ದರೋಡೆ ಕಥೆಕಟ್ಟಿ 7.5 ಲಕ್ಷ ಹಣ ಲಪಾಟಿಯಿಸಿದ್ದ ಆಸಾಮಿಗಳು ಅರೆಸ್ಟ್..!

ತುಮಕೂರು, ಜು.23- ಪೊಲೀಸರಿಗೆ ಕಥೆ ಕಟ್ಟಿ ಹಣ ದರೋಡೆ ಅಗಿದೆ ಎಂದು ಕಥೆ ಕಟ್ಟಿ 7.53 ಲಕ್ಷ ರೂ.ಗಳನ್ನು ಲಪಾಟಿಯಿಸಿದ್ದ ಕೋಟಕ್ ಮಹೇಂದ್ರ ಬ್ಯಾಂಕ್‍ನ ರಿಕವರಿ ಎಕ್ಸಿಕ್ಯುಟಿವ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಟರಾಜು.ಸಿ (31), 2) ಅಶೋ.ಬಿ.ಹೆಚ್ (32) ಬಂಧಿತ ಆರೋಪಿಗಳು.ಜು.15ರಂದು ರಾತ್ರಿ 10.30ರ ಸಮಯದಲ್ಲಿ ಶಿರಾ ತಾಲ್ಲೂಕಿನ ಚಿಕ್ಕದಾಸರಹಳ್ಳಿಯವನಾದ ಕೋಟಕ್ ಮಹೇಂದ್ರ ಬ್ಯಾಂಕಿನ ರಿಕವರಿ ಎಕ್ಸಿಕ್ಯುಟೀವ್ ನಟರಾಜು.ಸಿ ಎಂಬಾತ ದರೋಡೆ ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದ್ದನು.ಅಂದು …

Read More »

: ಜನ ಯಾರನ್ನು ನಂಬಬೇಕೋ? ಯಾವುದನ್ನು ನಂಬಬೇಕೋ ಗೊತ್ತಾಗುತ್ತಿಲ್ಲ……/ಕೊರೋನಾ ಸಾವು ಮುಚ್ಚಿಡಲಾಗುತ್ತಿದ್ಯಾ?

ಬೆಂಗಳೂರು: ಜನ ಯಾರನ್ನು ನಂಬಬೇಕೋ? ಯಾವುದನ್ನು ನಂಬಬೇಕೋ ಗೊತ್ತಾಗುತ್ತಿಲ್ಲ. ಕೊರೊನಾ ಸಂಬಂಧ ವೈದ್ಯಕೀಯ ವಸ್ತು, ಔಷಧಿಗಳ ಖರೀದಿಯಲ್ಲಿ ಭಾರೀ ಗೋಲ್‍ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಗ್ಯ ಇಲಾಖೆ ನೀಡುವ ಕೊರೋನಾ ಹೆಲ್ತ್ ಬುಲೆಟಿನ್‍ನಲ್ಲಿ ನಿತ್ಯ ನೀಡುವ ಅಂಕಿ ಸಂಖ್ಯೆಯನ್ನೂ ಅನುಮಾನದಿಂದ ನೋಡುವ ಸಂದರ್ಭ ಎದುರಾಗಿದೆ. ಯಾಕೆಂದರೆ ಕೊರೋನಾ ಸಾವು ನೋವುಗಳ ಲೆಕ್ಕವನ್ನು ಮುಚ್ಚಿಟ್ಟಿರೋದು ಕೂಡ ಇದೀಗ ಜಗಜ್ಜಾಹೀರಾಗಿದೆ. ಯಾವುದೋ ಕಾರಣಕ್ಕೆ, ಎಂದೋ ಸತ್ತವರನ್ನು ಕೊರೋನಾ ಸಾವಿನ ಪಟ್ಟಿಗೆ …

Read More »

ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಟ್ವೀಟ್

ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆ ಭೀಮ್ಸ್ ಸುತ್ತ ಮುತ್ತಲು ನಿಷೇದಾಜ್ಞೆ, ಮೂವರನ್ನು ವಶಕ್ಕೆ ಪಡೆದಪೋಲೀಸರು,

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ವಾರ್ಡಿನಲ್ಲಿ ಕಿಡಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಮಂಧಿಸಿದೆ ಪೋಲೀಸರು ಮೂವರನ್ನು ವಶಕ್ಕೆ ಪಡೆದು,ವಿಚಾರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಕಿಡಗೇಡಿಗಳ ಪುಂಡಾಟಿಕೆಗೆ ಐವರು ಜನ ಗಾಯಗೊಂಡಿದ್ದು ಒಂದು ಅಂಬ್ಯುಲೆನ್ಸ್ ಸಂಪೂರ್ಣವಾಗಿ ಭಸ್ಮವಾಗಿ ಪೋಲೀಸ್ ವಾಹನ ಸೇರಿದಂತೆ ಒಟ್ಟು ಐದು ವಾಹನಗಳು ಜಖಂಗೊಂಡಿವೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು, ಮೂವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ,ಬೆಳಗಾವಿಯ ಎಪಿಎಂಸಿ ಪೋಲೀಸರು ಇಡೀ …

Read More »

ಔಷಧಿ ಸಿಂಪಡಿಸಲು ತೆರಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು……

ಚಿಕ್ಕಮಗಳೂರು: ಅಡಕೆ ತೋಟಕ್ಕೆ ಔಷಧಿ ಸಿಂಪಡಿಸಲು ಕಬ್ಬಿಣದ ಏಣಿಯನ್ನು ತೋಟದಲ್ಲಿ ಹೊತ್ತುಯ್ಯುವಾಗ ತೋಟದಲ್ಲಿ ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದುಗ್ಗಲಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನ 28 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ. ದಶಕಗಳ ಹಿಂದೆ ಕಾಫಿ-ಅಡಕೆ ತೋಟಗಳಲ್ಲಿ ಮರಗಸಿ, ಮೆಣಸು ಕೊಯ್ಯಲು ಹಾಗೂ ಔಷಧಿ ಸಿಂಪಡಿಸಲು ಬಿದಿರಿನ ಏಣಿಗಳನ್ನ ಬಳಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಕಬ್ಬಿಣದ ಏಣಿ …

Read More »

ಹುಟ್ಟುಹಬ್ಬದ ದಿನವೇ ಭೀಮಾತೀರದ ನಟೋರಿಯಸ್ ಅರೆಸ್ಟ್

ವಿಜಯಪುರ: ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್ ಹುಟ್ಟುಹಬ್ಬದ ದಿನದಂದೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ಉದ್ಯಮಿಗೆ 5 ಕೋಟಿ ನಗದು ಅಥವಾ 3 ಕೆ.ಜಿ. ಚಿನ್ನಕ್ಕೆ ಬೇಡಿಕೆ ಇಟ್ಟಿದ ಆರೋಪದಡಿ ಬಂಧನವಾಗಿದ್ದಾನೆ. ಚಿನ್ನಾಭರಣದ ವ್ಯಾಪಾರಿಯಾಗಿರುವ ನಾಮದೇವ್ ಡಾಂಗೆ ಎಂಬವರಿಗೆ ಬೇಡಿಕೆ ಇಟ್ಟಿದ್ದನು. 5 ಕೋಟಿ ಕೊಡದೇ ಇದ್ರೇ ಕಾಲು, ತಲೆ ಕಟ್ ಮಾಡ್ತೀನಿ. ಯಾರಿಗಾದ್ರೂ ಹೇಳಿದ್ರೆ ಮನೆಗೆ ಹೊಕ್ಕು ತಲೆಗೆ ಗುಂಡು ಹೊಡೆಯುತ್ತೇನೆಂದು ಧಮ್ಕಿ ಹಾಕಿದ್ದನು. ಇನ್ನು ಈ …

Read More »

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »