Breaking News

ಜಿಲ್ಲೆ

ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ, ಬಾಯಿ ಮಾತಿನಲ್ಲಿ ಹೇಳಿದರೆ ನಡೆಯುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಳಿಕ ಮಾತನಾಡಿದ ಅವರು,  ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ …

Read More »

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದ ವಿವಿಧೆಡೆಯ ಸೋಮವಾರ ಐದು ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, …

Read More »

ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು

ಬೆಂಗಳೂರು, ಜು.20- ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜು.26ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು ಎನ್ನುವ ಕುರಿತು ಒಂದು ವರದಿ. ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಕಾಲಮಿತಿಯೊಳಗೊಂಡಂತೆ ನೀಡಿದ್ದ ಭರವಸೆ ಈಡೇರಿಸಿದ್ದರೂ ಬಹುತೇಕ ಹಾಗೂ ಪ್ರಮುಖ …

Read More »

ಲಾಕ್‍ಡೌನ್ ನಿಯಮ ಉಲ್ಲಂಘನೆ- ಬೇಕಾಬಿಟ್ಟಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ, ದಂಡ

ಯಾದಗಿರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಕಠಿಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 15ರಂದು ಲಾಕ್‍ಡೌನ್ ಆರಂಭವಾಗಿದ್ದು, ಆಗಲೇ 5 ದಿನ ಕಳೆದಿದೆ. ಆದರೂ ಜನತೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅಂತಹವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಫುಲ್ ಅಲರ್ಟ್ ಆಗಿದ್ದಾರೆ. ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ನಗರದಲ್ಲಿ ತಿರುಗಾಟ ನಡೆಸಿದವರಿಗೆ ದಂಡ ಜೊತೆಗೆ …

Read More »

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು: ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯಬಿದ್ದರೆ ಹೆಚ್ಚುವರಿ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಗೊಬ್ಬರ ಕೊರತೆಯಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ  ಕರೆಯಲಾಗಿದ್ದ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸದ್ಯಕ್ಕೆ ಇರುವ ದಾಸ್ತಾನು ರೈತರಿಗೆ ಸಮರ್ಪಕವಾಗಿ ವಿತರಿಸಬೇಕು. ಒಂದು ವೇಳೆ ಜಿಲ್ಲೆಗೆ …

Read More »

ಶೇ. 50 ಖಾಸಗಿ ಆಸ್ಪತ್ರೆಯ ಬೆಡ್ ಗಳು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು: ಸತೀಶ ಜಾರಕಿಹೊಳಿ

ಗೋಕಾಕ:  ಶೇ. 50 ಖಾಸಗಿ ಆಸ್ಪತ್ರೆಯ ಬೆಡ್ ಗಳು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಎಂಬ ಸರ್ಕಾರದ  ನಿಯಮದಿಂದ ಹಿಂದೆ  ಸರಿಯಬೇಕು.  ಬೇಕಿದ್ದರೆ  ಸರ್ಕಾರಿ ಆಸ್ಪತ್ರೆಗಳಿಗೆ   ಖಾಸಗಿ ವೈದ್ಯರನ್ನು ಕರೆಸಿಕೊಂಡು ಸೇವೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದ್ದಾರೆ. ನಿನ್ನೆಯಷ್ಟೇ ಕೋವಿಡ್ ನಿರ್ವಹಣೆ ವಿಚಾರವಾಗಿ  ಸತೀಶ ಜಾರಕಿಹೊಳಿ ಅವರು  ಸರ್ಕಾರಕ್ಕೆ  ಕೆಲವು ಸಲಹೆಗಳನ್ನು ನೀಡಿದ್ದರು. ಅದೇ ವಿಚಾರವಾಗಿ ಸೋಮವಾರ ಗೋಕಾಕ ನಗರದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದರು.  …

Read More »

ಕೊರೊನಾ ಸೋಂಕಿತರ ಶವ ಅದಲು  ಬದಲು ಮಾಡಿದ:ಬಿಮ್ಸ್ ಆಸ್ಪತ್ರೆ

ಬೆಳಗಾವಿ: ಸದಾ ಒಂದಿಲ್ಲದೊಂದು ವಿವಾದಗಳಿಂದ ಹೆಸರುವಾಸಿಯಾಗುತ್ತಿರುವ ಇಲ್ಲಿನ ಬಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಕೊರೊನಾ ಸೋಂಕಿತರ ಶವ ಅದಲು  ಬದಲು ಮಾಡಿ ಮತ್ತೆ ಸುದ್ದಿಯಾಗಿದೆ. ಕ್ಯಾಂಪ್ ನಗರದ 57 ವರ್ಷದ ವೃದ್ದೆ ಶವ ಅದಲು ಬದಲಾಗಿದೆ. ಕಳೆದ ಶನಿವಾರ  ಮೃತ ವೃದ್ದೆಯ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆದ್ರೆ ಆಸ್ಪತ್ರೆ ಸಿಬ್ಬಂದಿ  ಮತ್ತೆ ಕರೆ ಮಾಡಿ,   ಯಾಕೆ ಇನ್ನು ನೀವು ಶವ ತಗೆದುಕೊಂಡು ಹೋಗಿಲ್ಲ?. ಕೂಡಲೇ ಬಂದು ಶವ …

Read More »

ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ: ಉಮೇಶ ಕತ್ತಿ

ಚಿಕ್ಕೋಡಿ: ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆ ಆಗಬಾರದು. ತೊಂದರೆ ಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹುಕ್ಕೇರಿ ತಹಶೀಲ್ದಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಕೊರೊನಾ ನಿಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಅಂತ್ಯಕ್ರಿಯೆ ಮಾಡಲು ಯಾವುದೇ ಸಮಸ್ಯೆ ಆಗಬಾರದು. ಸರ್ಕಾರಿ ಜಮೀನುಗಳಿದ್ದರೆ ಅವುಗಳನ್ನು ಸ್ಮಶಾನಗಳಿಗಾಗಿ ಮೀಸಲಿಡಬೇಕು …

Read More »

ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ:ಕಾಂಗ್ರೆಸ್ ನಾಯಕರು, 

ಬೆಂಗಳೂರು:  ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು,  ಈ  ಹಿಂದೆ ಲೆಕ್ಕ ಕೊಡಿ ಎಂಬ ಅಭಿಯಾನ ಆರಂಭಿಸಿದ್ದರು. ಇದೀಗ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ  ನಡೆದ ಸಭೆಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾದ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿದರು. ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ …

Read More »

ಅಮವಾಸ್ಯೆ ಹೂ, ಹಣ್ಣಿಗೆ ಮುಗಿಬಿದ್ದ ಜನ- ಲಾಕ್‍ಡೌನ್ ಮಧ್ಯೆ ಭಕ್ತರಿಂದ ತುಂಬಿದ ದೇವಾಲಯ

ರಾಯಚೂರು: ಭೀಮನ ಅಮವಾಸ್ಯೆ ಹಾಗೂ ಶ್ರಾವಣ ಆರಂಭ ಹಿನ್ನೆಲೆ ರಾಯಚೂರಿನಲ್ಲಿ ಕೊರೊನಾ ಹರಡುವಿಕೆ ಭೀತಿ ಮರೆತು ಭಕ್ತರು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ನಗರದ ಉರುಕುಂದಿ ಈರಣ್ಣ ದೇವಾಲಯದಲ್ಲಿ ಭಕ್ತರ ದಂಡು ಹರಿದು ಬಂದಿದೆ. ಲಾಕ್‍ಡೌನ್ ಮಧ್ಯೆ ಅಮವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು, ಇದರಿಂದ ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಎಲ್ಲವನ್ನೂ ಮರೆತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಾಗಿ ಕೆಲ …

Read More »