Breaking News

ಜಿಲ್ಲೆ

ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಭಾಸ್ಕರ್‌ ‌ ರಾವ್‌ ಕಾರು ಚಾಲಕ ಕೋವಿಡ್‌ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್‌ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಭಾಸ್ಕರ್‌ ರಾವ್‌, ಚಾಲಕನಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ …

Read More »

ನಮಾಜ್‍ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..

ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.   ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್‍ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಪಾಸಿಟಿವ್ ಬಂದ ಕುಟುಂಬದವ್ರ ಜೊತೆ ಕ್ವಾರಂಟೈನ್‍ಗೆ ಪಂಚಾಯತ್ ಸದಸ್ಯ ವಿರೋಧ

ಬಾಗಲಕೋಟೆ: ಪಾಸಿಟಿವ್ ಬಂದ ಮನೆಯವರು ಹಾಗೂ ಪಕ್ಕದ ಮನೆಯವರನ್ನು ಒಂದೇ ಕಡೆ ಕ್ವಾರಂಟೈನ್ ಮಾಡಿರೋದಕ್ಕೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇತರೆ ಎರಡು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ನಡೆದಿದೆ. ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ಗುಡಿಸಲು ಹಾಕಿಕೊಂಡು ಕುಳಿತ ಕುಳಗೇರಿ ಕ್ರಾಸ್ ಗ್ರಾಪಂ ಸದಸ್ಯ ಹನುಮಂತ ನರಗುಂದ ಪ್ರಸನ್ನ ಹಾಗೂ ಮಂಜುನಾಥ …

Read More »

ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿ……….

ಬೆಳಗಾವಿ: ಮಹಾಮಾರಿ ಕೊರೊನಾನಿಂದಾಗಿ ಬೆಡ್, ಅಂಬುಲೆನ್ಸ್, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಅನೇಕರು ಸಾವನ್ನಪ್ಪುತ್ತಿರುವ ಅಮಾನವೀಯ ಘಟನೆ ಪ್ರತಿದಿನ ಬೆಳಕಿಗೆ ಬರುತ್ತಿವೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿಯಾಗಿದ್ದಾರೆ. ಕೋವಿಡ್ ಕೇರ್ ಸೆಂಟರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಬೆತ್ತಲೆಯಾಗಿ ನೆಲದ ಮೇಲೆ ಒದ್ದಾಡಿ ಸಾವನ್ನಪ್ಪಿದ್ದಾರೆ. ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೋಂಕಿತ  ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೃದ್ಧ …

Read More »

ನಿಷೇದಾಜ್ಞೆ ಇದ್ದರುಚಾಮುಂಡಿ ಬೆಟ್ಟ ಏರಿದ ಶೋಭಾ ಕರಂದಾ ಜ್ಲೆ

ಮೈಸೂರು: ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ …

Read More »

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…………………

ಮೈಸೂರು: ಕತ್ತು ಕೊಯ್ದುಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರು ಜುಲೈ 9 ರಂದು ಆತ್ಮತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಮರ್ಸ್ ವಿಭಾಗದಲ್ಲಿ ಕ್ಲಾಸ್‍ಮೇಟ್ಸ್ ಆಗಿದ್ದರು. ಕಾಲೇಜಿನಲ್ಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ. ಆದರೆ ಇಬ್ಬರ ಮದುವೆಗೆ ಜಾತಿ ಅಡ್ಡಿಯಾಗಿತ್ತು. ಅಲ್ಲದೆ ಇವರಿಬ್ಬರು ಅಪ್ರಾಪ್ತರು ಅನ್ನೋ ಹಿನ್ನೆಲೆ ಕೂಡ ಇತ್ತು. …

Read More »

ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್‍ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …

Read More »

ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.

ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ. ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು …

Read More »

ಚಂದನವನದ ಪದ್ಮಾವತಿಯ ಹೊಸ ಲುಕ್……….

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್‍ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್‍ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ …

Read More »

ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌

ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌ ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …

Read More »