ರಾಯಚೂರು: ನಾಳೆಯಿಂದ ಜುಲೈ 22 ರವರೆಗೆ ರಾಯಚೂರು ನಗರ ಮತ್ತು ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ತುರ್ತು ಹಾಗೂ ಅಗತ್ಯ ಸೇವೆಗಳಾದ ಕಿರಾಣಿ , ಔಷಧಿ ಅಂಗಡಿ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆ ಸಂಪೂರ್ಣ ಬಂದ್ ಇರುತ್ತದೆ. ಜಿಲ್ಲೆಯ ಉಳಿದ ತಾಲೂಕುಗಳಾದ ದೇವದುರ್ಗ, ಲಿಂಗಸುಗೂರು, ಸಿರವಾರ, ಮಸ್ಕಿ ಹಾಗೂ ಮಾನ್ವಿಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಎಲ್ಲದಕ್ಕೂ ಅವಕಾಶ ಇದ್ದು …
Read More »ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ…………
ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, …
Read More »14 ದಿನಗಳ ಕಾಲ ಉಡುಪಿ ಗಡಿಗಳು ಸೀಲ್ಡೌನ್- ಜಿಲ್ಲಾಧಿಕಾರಿ ಆದೇಶ
ಉಡುಪಿ: ಇಂದು ರಾತ್ರಿಯಿಂದ ಜಿಲ್ಲೆಯ ಎಲ್ಲ ಗಡಿಗಳು ಸೀಲ್ಡೌನ್ ಆಗಲಿದ್ದು, ಜೆಲ್ಲೆಯೊಳಗೆ ಜನಜೀವನ ಯಥಾಸ್ಥಿತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲ ಜಿಲ್ಲೆಗಳು ಪರಿಸ್ಥಿತಿಗನುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಿಸಿದರೆ, ಇನ್ನೂ ಕೆಲ ಗಡಿಗಳನ್ನು ಸೀಲ್ ಮಾಡಲಾಗುತ್ತಿದೆ. ಇನ್ನೂ ಹಲವು ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳಿರುವ ತಾಲೂಕುಗಳನ್ನಷ್ಟೇ ಲಾಕ್ ಮಾಡಲಾಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿಗೆ ಸಂಪರ್ಕ ಕಲ್ಪಿಸುವ …
Read More »ಹೊರ ಜಿಲ್ಲೆಯಿಂದ ಬಂದ್ರೆ ಶಾಲೆಯಲ್ಲಿ ಇರಬೇಕುʼ – ಡಂಗುರ ಸಾರಿದ ಗ್ರಾಮಸ್ಥರು
ಚಿಕ್ಕಮಗಳೂರು: ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಂಡು ಏಳು ದಿನಗಳ ಕಾಲ ಶಾಲಾ ಕಟ್ಟಡದಲ್ಲಿ ಇದ್ದು ಕ್ವಾರಂಟೈನ್ ಬಳಿಕ ಮನೆಗೆ ಬರಬೇಕೆಂದು ಕಡೂರು ತಾಲೂಕಿನ ಗ್ರಾಮದಲ್ಲಿ ಡಂಗುರ ಸಾರಿಸಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಡಂಗುರ ಸಾರಿಸಿ ಸ್ಥಳೀಯರಿಗೆ ಎಚ್ಚರಿಸಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ಹೊರರಾಜ್ಯ ಹಾಗೂ ಹೊರಜಿಲ್ಲೆಯಿಂದ ಬರುವವರನ್ನು ಯಾರೂ ಮನೆಗೆ …
Read More »Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..
ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಇಂದು ಸಂಜೆಯಿಂದ ಸ್ಥಬ್ದವಾಗಲಿದೆ ಬೆಂಗಳೂರು………
ಬೆಂಗಳೂರು,ಜು.14- ಬೆಂಗಳೂರು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಜÁರಿಗೆ ಬರಲಿರುವ ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ಎಲ್ಲ ಸೇವೆಗಳು ಬಂದ್ ಆಗಲಿವೆ. ಕೊರೊನಾ ಸೋಂಕು ತಡೆಯುವ ಸಲುವಾಗಿ ಸರ್ಕಾರ ಇಂದು ರಾತ್ರಿ 8ರಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ಡೌನ್ ಮಾಡಲು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ ಇಂದು ಮಧ್ಯಾಹ್ನ 12ರಿಂದಲೇ ದಿನಸಿ …
Read More »ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಬೆಂಗಳೂರು: ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಾಣಿಜ್ಯ ವಿಭಾಗದ ಪರೀಕ್ಷೆಯನ್ನು ಒಟ್ಟು 2,60,131 ಮಂದಿ ತೆಗೆದುಕೊಂಡಿದ್ದು, 1,70,426 ಮಂದಿ ತೇರ್ಗಡೆಯಾಗುವ ಮೂಲಕ ಶೇ.65.52 ಫಲಿತಾಂಶ ಬಂದಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ. ಟಾಪರ್ ಪಟ್ಟಿ 1. …
Read More »ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್
ಬೆಂಗಳೂರು: ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಿಜ್ಞಾನ ವಿಭಾಗದ ಪರೀಕ್ಷೆಗೆ 2,16,271 ಮಂದಿ ಹಾಜರಾಗಿದ್ದು, 1,64,794 ಮಂದಿ ಪಾಸ್ ಆಗುವ ಮೂಲಕ ಶೇ.76.2 ಫಲಿತಾಂಶ ದಾಖಲಾಗಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ …
Read More »ಬೇರೊಬ್ಬಳೊಂದಿಗೆ ಕಾರಿನಲ್ಲಿದ್ದ ಪತಿಯನ್ನು ಚೇಸ್ ಮಾಡಿ ಹಿಡಿದ ಪತ್ನಿ- ವೈರಲ್ ವಿಡಿಯೋ
ಮುಂಬೈ: ಗೆಳತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಪತಿಯನ್ನು ಪತ್ನಿ ಚೇಸ್ ಮಾಡಿ ಹಿಡಿದಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಮಹಿಳೆಯ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮುಂಬೈ ನಗರದಲ್ಲಿ ಪ್ರಮುಖ ರಸ್ತೆಯೊಂದರಲ್ಲಿ ಜುಲೈ 11ರ ಸಂಜೆ ಘಟನೆ ನಡೆದಿದೆ. ಮುಂಬೈ ನಿವಾಸಿಯಾಗಿದ್ದ 30 ವರ್ಷದ ವ್ಯಕ್ತಿ ಕಪ್ಪು ಬಣ್ಣದ ಕಾರಿನಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ. ಈ ಕಾರನ್ನು ಮತ್ತೊಂದು ಕಾರಿನಲ್ಲಿ ಬೆನ್ನತ್ತಿದ್ದ ಆತನ ಪತ್ನಿ ನಡುರಸ್ತೆಯಲ್ಲಿ ಕಾರನ್ನು …
Read More »
Laxmi News 24×7