Breaking News

ಜಿಲ್ಲೆ

ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ …

Read More »

ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್……………..

ಬೆಂಗಳೂರು: ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್ ಮಾಡಿ ಯುವಕನೊಬ್ಬ ಪೇಚಿಗೆ ಸಿಕ್ಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ನಿವಾಸಿ 26 ವರ್ಷದ ಯುವಕ ಅಪರಿಚಿತ ಯುವತಿಯಿಂದ ಮೋಸ ಹೋಗಿದ್ದಾನೆ. ಯುವಕ 22 ಸಾವಿರ ಹಣ ಕಳೆದುಕೊಂಡಿದ್ದಲ್ಲದೇ ಆತನಿಗೆ ಎಟಿಎಂ ಕಾರ್ಡ್ ಫೋಟೋ ಕೂಡ ಕಳುಹಿಸಿದ್ದಾನೆ. ಇದೀಗ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಮೋಸ ಹೋದ ಯುವಕ ಸೋಶಿಯಲ್ ಮೀಡಿಯಾದ ಮೂಲಕ ಹುಡುಗಿಯನ್ನು ಪರಿಚಯ ಮಾಡಿಕೊಂಡಿದ್ದನು. …

Read More »

ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್‌

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …

Read More »

ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ

ಬೆಳಗಾವಿ: ಸಾಮಾನ್ಯವಾಗಿ ಎಲ್ಲರಲ್ಲೂ ತಾನೊಂದು ದೊಡ್ಡ ಮನೆ ಕಟ್ಟಬೇಕೆಂಬ ಕನಸು ಇದ್ದೇ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ ಕ್ಯಾಮರಾ ಶೈಲಿಯ ಮನೆ ನಿರ್ಮಾಣ ಮಾಡುವ ಮೂಲಕ ಜನರ ಗಮನಸೆಳೆದಿದ್ದಾರೆ. ಹೌದು. ರವಿ ಹೊಂಗಲ್ ಅವರಿಗೆ ಬಾಲ್ಯದಿಂದಲೇ ಫೋಟೋಗ್ರಫಿ ಅಂದ್ರೆ ಪಂಚಪ್ರಾಣ. ಹೀಗಾಗಿ ಅವರು ಚಿಕ್ಕಂದಿನಿಂದಲೇ ಹತ್ತಿರದ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೆಲವೊಂದು ಫೋಟೋಗಳನ್ನು ತೆಗೆಯುವ ಹವ್ಯಾಸ ಬೆಳೆಸಿಕೊಂಡಿದ್ದರು. ರವಿ ಅವರಿಗಿದ್ದ …

Read More »

ಸರ್ಕಾರ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡಬೇಕು : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ಸರ್ಕಾರ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡುವ ಕೆಲಸ ಮಾಡಬೇಕಾಗಿದ್ದು. ಆ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳು ಬಹುಮುಖ್ಯವಾಗಲಿವೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾದ ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದ …

Read More »

ಬ್ರೇಕಿಂಗ್ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..! ಇಲ್ಲಿದೆ ಡೀಟೇಲ್ಸ್

ಬೆಂಗಳೂರು,ಜು.14- ಹಲವು ಸಂಕಷ್ಟಗಳ ನಡುವೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 61.81ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯು ಪರೀಕ್ಷಾ ಮಂಡಳಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು, ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು.ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ನಡೆದಿತ್ತು. ರಾಜ್ಯದಲ್ಲಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಹೊಸಬರು 5,56,267 ಹಾಜರಾಗಿದ್ದು, 3,84,947 ಮಂದಿ ತೇರ್ಗಡೆ …

Read More »

ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …

Read More »

ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್‌ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್‌ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್‌ 19 ವೆಬ್‌ಸೈಟ್‌ನಲ್ಲೇ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇನ್ನೊಂದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ …

Read More »