Breaking News

ಜಿಲ್ಲೆ

ಭಾರತದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ ಗೂಗಲ್‌

ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್‌ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್‌ ಒಟ್ಟು 10 ಶತಕೋಟಿ ಡಾಲರ್‌(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್‌ ಕಂಪನಿಯ ಸಿಇಒ ಸುಂದರ್‌ ಪಿಚೈ 10 ಶತಕೋಟಿ ಡಾಲರ್‌ …

Read More »

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ

ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು‌‌ ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …

Read More »

ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ

ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್​ಬುಕ್ ಲೈವ್​ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …

Read More »

ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ …

Read More »

ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ

ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್‍ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …

Read More »

ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ‌ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ‌ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್‌ ಪುತ್ರಿ ಪ್ರಿಯಾಂಕಾ …

Read More »

ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿ ಐತಿಹಾಸ ಹೆಜ್ಜೆ

ಬೆಳಗಾವಿ:  ಸ್ಮಶಾನವೂ ಕೂಡ ಒಳ್ಳೆಯ ಜಾಗ ಎಂದು ಜನರಿಗೆ ಸಂದೇಶ ನೀಡುವ  ನಿಟ್ಟಿನಲ್ಲಿ  ವಿನೂತನ ಕಾರ್ಯಕ್ರಮವನ್ನು ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ  ಹೇಳಿದರು. ಇಲ್ಲಿನ  ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ರಾಜ್ಯದ ಹಲವು ಮಠಾಧೀಶರ ನೇತೃತ್ವದಲ್ಲಿ  ಸೋಮವಾರ   ನಡೆದ  ನೂತನ ಕಾರು ಚಾಲನಾ ಸಮಾರಂಭದ ಬಳಿಕ  ಮಾತನಾಡಿದರು. ದೇವಸ್ಥಾನಕ್ಕೆ ಮತ್ತು  ಸ್ಮಶಾನದ ಜಾಗಕ್ಕೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಎಲ್ಲವೂ …

Read More »

ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್‍ಡೌನ್: ಜಗದೀಶ್ ಶೆಟ್ಟರ್

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್‍ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಗ್ಗೆ ಮಾತನಾಡಿದ ಸಚಿವರು, ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24ರ ರಾತ್ರಿ 8ವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡುವುದಾಗಿ ತಿಳಿಸಿದರು. 11 ಜಿಲ್ಲೆಗಳ ಬಗ್ಗೆ ಚರ್ಚೆ …

Read More »

ಲಾಕ್‍ಡೌನ್ ಜೊತೆಗೆ ಬೆಂಗಳೂರಿನಲ್ಲಿ ಸೀಲ್‍ಡೌನ್‍ಗೂ ಸಿದ್ಧರಾಗಿ- ಯಾವ್ಯಾವ ಏರಿಯಾ ಸೀಲ್?

ಬೆಂಗಳೂರು: ಸಿಲಿಕಾನ್ ಸಿಟಿ ಜನರು ಒಂದು ವಾರದ ಲಾಕ್‍ಡೌನ್ ಕಾಲಕ್ಕೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್‍ಗೆ ಪಾಲಿಕೆ ಪ್ಲ್ಯಾನ್ ಸಿದ್ಧಗೊಳಿಸುತ್ತಿದೆ. ಹೌದು.ಕೊರೊನಾ ಹೆಚ್ಚಿರುವ ವಾರ್ಡ್‌ಗಳನ್ನು ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ 15 ದಿನಗಳಲ್ಲಿ ಕೊರೊನಾ ಸ್ಫೋಟಗೊಂಡ ವಾರ್ಡ್‌ಗಳಲ್ಲಿ ಟಫ್ ಸೀಲ್‍ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಸೀಲ್‍ಡೌನ್ ಜಾರಿಯಾದರೆ ತುರ್ತು ಮತ್ತೊಂದು ಕಾರಣ ಹೇಳಿ ಓಡಾಡಲು ಸಾಧ್ಯವಿಲ್ಲ. ಭಾನುವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ …

Read More »

ಒಂದು ವಾರ ಸಚಿವ ಬಿ.ಸಿ.ಪಾಟೀಲ್ ಕ್ವಾರಂಟೈನ್

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ …

Read More »