Breaking News

ಜಿಲ್ಲೆ

ಸಂಡೆ ಲಾಕ್‌ಡೌನ್ : ಬೆಂಗಳೂರು ಸೇರಿ ಕರ್ನಾಟಕ ಸ್ಥಬ್ದ, ಎಲ್ಲೆಲ್ಲಿ ಏನೇನಾಯ್ತು..?

ಬೆಂಗಳೂರು : ಅಂಕೆ ಮೀರಿ ಶರವೇಗದಲ್ಲಿ ಹಬ್ಬುತ್ತಿರುವ ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಎರಡನೇ ಭಾನುವಾರದ ಲಾಕ್ ಡೌನ್ ಗೂ ಈ ವಾರವೂ ಬಹುತೇಕ ಯಶಸ್ವಿಯಾಗಿದೆ. ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದು ವಿಶೇಷವಾಗಿತ್ತು. ಲಾಕ್ ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ. …

Read More »

ಗೋಕಾಕ್ ತಾಲೂಕಿನಲ್ಲಿ ಲಾಕ್‍ಡೌನ್………

ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‍ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್‍ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್‍ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …

Read More »

ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ’- ಕ್ವಾರಂಟೈನ್‍ನಲ್ಲಿ ಪುಸ್ತಕದ ಮೊರೆಹೋದ ಸಿಎಂ

ಬೆಂಗಳೂರು: ಕೊರೊನಾ ಭೀತಿಯಿಂದ ಸ್ವಯಂ ಕ್ವಾರಂಟೈನ್ ಅಗಿರುವ ಸಿಎಂ ಯಡಿಯೂರಪ್ಪನವರು ಪುಸ್ತಕಗಳನ್ನು ಓದುವ ಮೂಲಕ ಕಾಲಕಳೆಯುತ್ತಿದ್ದಾರೆ. ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಅಧಿಕೃತ ನಿವಾಸ ಕಾವೇರಿ ಮತ್ತು ಅವರ ಧವಳಗಿರಿಯ ನಿವಾಸದಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಯಡಿಯೂರಪ್ಪನವರು ಶುಕ್ರವಾದಿಂದ ಐದು ದಿನಗಳ ಕಾಲ ತಮ್ಮ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಈ ವೇಳೆ ಪುಸ್ತಕಗಳನ್ನು ಓದುತ್ತಾ ಸಮಯ ದೂಡುತ್ತಿರುವ ಬಿಎಸ್‍ವೈ, ಬಿಡುವಿನ …

Read More »

ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ

ಬೆಂಗಳೂರು: ಕೊರೊನಾ ಸ್ಪೀಡ್ ಕಟ್ ಮಾಡುವ ಹಿನ್ನೆಲೆಯಲ್ಲಿ ಏಳು ದಿನ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲಾಗಿದೆ. ಸೋಮವಾರ ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಅಶೋಕ್, ಬೆಂಗಳೂರು ಲಾಕ್‍ಡೌನ್ ಅವಧಿಯಲ್ಲಿ ವೈದ್ಯಕೀಯ ಸಂಬಂಧಿತ ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲು ಸಿಎಂ ಒಪ್ಪಿದ್ದಾರೆ. …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ

ಗೋಕಾಕ :ಗೋಕಾಕ ನ ಖಾಸಗಿ ವೈದ್ಯ ಡಾ. ಹೊಸಮನಿ ಅವರು ಎರಡು ಲಕ್ಷ ಬಿಲ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ಗೋಕಾಕನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕನಲ್ಲಿ ಖಾಸಗಿ ವೈದ್ಯ ಡಾ. ಹೊಸಮನಿ ಮೃತಪಟ್ಟ ವ್ಯಕ್ತಿಗೆ ಎರಡು ಲಕ್ಷ ರು. ಬಿಲ್ ಮಾಡಿರುವ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು …

Read More »

ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಹೆಚ್ಡಿಕೆ ಒತ್ತಾಯ…………..

ಬೆಂಗಳೂರು, ಜು.11-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು …

Read More »

7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಹುಬ್ಬಳ್ಳಿ: ಜಿಲ್ಲೆಯಾದ್ಯಂತ ದಿನೇ ದಿನೇ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸೋಂಕಿತರನ್ನು ಕರೆ ತರಲು ಹೆಚ್ಚುವರಿಯಾಗಿ 7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಗ್ರಾಮಗಳ ಮಟ್ಟದಲ್ಲೂ ಕೊರೊನಾ ಹರಡುತ್ತಿದೆ. ಪ್ರಕರಣಗಳು ಏರುಗತಿಯಲ್ಲೇ ಸಾಗಿದರೆ, ಹುಬ್ಬಳ್ಳಿಯಲ್ಲಿರುವ ಕಿಮ್ಸ್‌ ಕೋವಿಡ್-19 ಆಸ್ಪತ್ರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸೋಂಕಿತರನ್ನು ಕರೆ ತರುವುದು ಸವಾಲಾಗಲಿದೆ. ಹಾಗಾಗಿ, ಆಂಬುಲೆನ್ಸ್‌ಗಳ ಕೊರತೆ ಎದುರಾಗದಿರಲೆಂದು, ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದೆ. ಏಳು ಮೀಸಲು: ‘ಸದ್ಯ ಏಳು ಆಂಬುಲೆನ್ಸ್‌ಗಳನ್ನು …

Read More »

ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ

ಮಂಡ್ಯ: ಇ-ತ್ಯಾಜ್ಯಗಳಿಂದ ತಾನು 600 ಡ್ರೋನ್​ಗಳನ್ನ ತಯಾರಿಸಿದ್ದೇನೆ. ಬಡತನದಿಂದ ಬೆಳೆದು ಮೇಲೆ ಬಂದಿದ್ದೇನೆ. ಅನೇಕ ಅಂತಾರಾಷ್ಟ್ರೀಯ ಡ್ರೋನ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದಿದ್ದೇನೆ. 87 ದೇಶಗಳಲ್ಲಿ ಕೆಲಸ ಆಫರ್ ಇದ್ದರೂ ತಾಯಿಗೋಸ್ಕರ ದೇಶದಲ್ಲೇ ಉಳಿದುಕೊಂಡಿದ್ದೇನೆ ಎಂದು ಸಖತ್ತಾಗಿ ಬಿಂಬಿಸಿಕೊಂಡಿದ್ದ ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ. ಸುದ್ದಿ ಜಾಲತಾಣವೊಂದು ಈತನದ್ದು ಬರೇ ಸುಳ್ಳಿನ ಕಂತೆಗಳು ಎಂದು ತನಿಖಾ ವರದಿಯಲ್ಲಿ ಬಟಾಬಯಲು ಮಾಡಿದೆ. ಈತನ ಹೆಸರು ಪ್ರತಾಪ್. ಮಂಡ್ಯ ಜಿಲ್ಲೆ …

Read More »

1 ವಾರ ಲಾಕ್‍ಡೌನ್‍ಗೂ ಮುನ್ನ ಎರಡು ದಿನ ಲಾಕ್ ಫ್ರೀ – 2 ದಿನ ಫ್ರೀ ನೀಡಿದ್ದು ಯಾಕೆ?

ಬೆಂಗಳೂರು: ಲಾಕ್‍ಡೌನ್ ಮಾಡಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ರಾತ್ರಿ ಒಂದು ವಾರಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಹೆಮ್ಮಾರಿಗೆ ಬ್ರೇಕ್ ಹಾಕಲು ಒಂದು ವಾರ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಆಗಲಿದೆ. ಜುಲೈ 14 ಮಂಗಳವಾರ ರಾತ್ರಿ 8 ಗಂಟೆಯಿಂದ ಕಂಪ್ಲೀಟ್ ಲಾಕ್ ಆಗಲಿದ್ದು, ಜುಲೈ 22 ಬುಧವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್‍ಡೌನ್ …

Read More »

ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾರಕ್ಕೆರಡು ದಿನಗಳ ಕಾಲ ಲಾಕ್ ಡೌನ್ ಮಾಡುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ತಜ್ಞರ ಅಂತಿಮ ಮಾಹಿತಿಗಾಗಿ ಕಾಯುತ್ತಿದ್ದು, ಈ ನಿಟ್ಟಿನಲ್ಲಿ ಅವರು ಅಂತಿಮ ಮಾಹಿತಿ ಬಳಿಕ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ …

Read More »