ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
Read More »ಕೋವಿಡ್ ಆಸ್ಪತ್ರೆಯಲ್ಲೇ ಡೆಡ್ಲಿ ತಾಂಡವ-
ಬೆಂಗಳೂರು: ಚೀನಾ ವೈರಸ್ ರಾಜ್ಯದಲ್ಲಿ ರಣರಣಿಸುತ್ತಿದೆ. ದಿನದಿನವೂ ಉಗ್ರರೂಪ ತಾಳಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಶುಕ್ರವಾರ ದಾಖಲೆಯ 2300ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಬೆಂಗಳೂರಲ್ಲಂತೂ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಕೇವಲ ರಾಜಧಾನಿಯೊಂದರಲ್ಲೇ 1400ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಎರಡನೇ ಬಾರಿಗೆ ದಿನದಲ್ಲಿ 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಇದರಲ್ಲಿ ಬೆಂಗಳೂರಿನಲ್ಲೇ 29 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 8 ಮಂದಿ, ಮೈಸೂರಲ್ಲಿ ನಾಲ್ವರು, ಬೀದರ್ನಲ್ಲಿ ಮೂವರು, …
Read More »ತೀವ್ರ ಜ್ವರದಿಂದ ಬಳಲುತ್ತಿದ್ದ ಉದ್ಯಮಿಸಾವು ………….
ಬೆಂಗಳೂರು, – ತೀವ್ರ ಜ್ವರದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಾವು ವಾಸವಾಗಿದ್ದ ಅಪಾರ್ಟ್ಮೆಂಟ್ನಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಿಲೀಪ್ಕುಮಾರ್ (35) ಮೃತಪಟ್ಟ ಉದ್ಯಮಿ. ನೆಲಮಂಗಲದ ಬಳಿ ದಿಲೀಪ್ಕುಮಾರ್ ಅವರು ಪೆಟ್ರೋಲ್ ಬಂಕ್ ಇಟ್ಟುಕೊಂಡಿದ್ದು, ಬ್ರಿಗೇಡ್ ಗೇಟ್ವೇ ಅಪಾರ್ಟ್ಮೆಂಟ್ನ ಫ್ಲಾಟ್ವೊಂದರಲ್ಲಿ ವಾಸವಾಗಿದ್ದರು. ಪತ್ನಿ ಇತ್ತೀಚೆಗೆ ತವರಿಗೆ ಹೋಗಿದ್ದರು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಇವರು ಸ್ವಯಂ ಮಾತ್ರೆ ಹಾಗೂ ಔಷಧಿ ತೆಗೆದುಕೊಂಡು ಮನೆಯಲ್ಲೇ ಇದ್ದರು. ದಿಲೀಪ್ಕುಮಾರ್ …
Read More »ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದೋಷಾರೋಪಣ ಪಟ್ಟಿ
ಬೆಂಗಳೂರು, ಜು.10- ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಬೆಂಗಳೂರು ನಗರ ಪೊಲೀಸರು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್ಶೀಟ್ (ದೋಷಾರೋಪಣ ಪಟ್ಟಿ) ಸಲ್ಲಿಸಿದ್ದಾರೆ. ಈಗಾಗಲೇ ಮೂರು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದು, ಇದು ನಾಲ್ಕನೆ ಚಾರ್ಜ್ಶೀಟ್ ಆಗಿದೆ. ಈ ಮೊದಲು ತಿಲಕ್ನಗರ ಪೊಲೀಸ್ ಠಾಣೆ ಪ್ರಕರಣ, ವೈಯಾಲಿಕಾವಲ್ ಠಾಣೆ ಹಾಗೂ ವೈಟ್ಫೀಲ್ಡ್ ಠಾಣೆ ಪ್ರಕರಣಗಳಲ್ಲಿ ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ದೀಗ ಇಂದಿರಾನಗರ ಪೊಲೀಸ್ ಠಾಣೆಯ …
Read More »ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ- ರಸ್ತೆ ಬದಿಯಲ್ಲಿ ಮಣ್ಣು ಕುಸಿತ
ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಉತ್ತಮ ಮಳೆಯ ಕಾರಣ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದೆ. ಮಳೆಗಾಲದ ಸಮಯದಲ್ಲಿ ಜೋಗ ಜಲಪಾತವನ್ನು ವೀಕ್ಷಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿ ನಯನ ಮನೋಹರವಾದ ಜಲಪಾದ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರ್ಕಾರ ಪ್ರವಾಸಿ ತಾಣಗಳಿಗೂ …
Read More »ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..
ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ರಾತ್ರಿ ಇಡೀ ಅಲೆದು ಕೊನೆಗೆ …
Read More »ಪಿಎಫ್ಐ ಯುವಕರ ತಂಡದಿಂದ ಸೋಂಕಿತರ ಶವಗಳಿಗೆ ಗೌರವದ ಅಂತ್ಯಕ್ರಿಯೆ…….
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಅತ್ಯಂತ ಭೀಕರವಾಗಿತ್ತು. ಈ ಹಿಂದೆ ಕೊರೊನಾದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು, ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ ಇದೀಗ ಕೊರೊನಾ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಹೌದು. ಫ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ದಿಂದ ಕೊರೊನಾದಿಂದ ಮೃತಪಟ್ಟವರ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸುವ ಕಾರ್ಯ ಮಾಡುತ್ತಿದೆ. ಪಿಎಫ್ಐ ಯುವಕರ ತಂಡ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುತ್ತಿದೆ. …
Read More »ಸೆಕೆಂಡ್ ಸಂಡೇ ಲಾಕ್ಡೌನ್ ಇಂದು ರಾತ್ರಿಯಿಂದಲೇ ಜಾರಿ……………
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಕೊರೊನಾ ತಡೆಗೆ ಈಗಾಗಲೇ ಹಲವೆಡೆ ಸೆಲ್ಫ್ ಲಾಕ್ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಶುಕ್ರವಾರ 2,313 ಮಂದಿಗೆ ಕೋವಿಡ್-19 ಸೋಂಕು ತಗಲುವ …
Read More »ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ
ಮೈಸೂರು : ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಕಾರಣ ಕತ್ತು ಕುಯ್ದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ …
Read More »ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.
Read More »
Laxmi News 24×7