ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ
ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …
Read More »ರಾಜ್ಯದ ಗ್ರೀನ್ಜೋನ್ಗಳಲ್ಲಿ ಶಾಲೆ ಪುನರಾರಂಭ?; ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದ ಶಿಫಾರಸಿನ ವಿವರ ಇಲ್ಲಿದೆ
ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮಿತಿಮೀರುತ್ತಿದೆ. ಇದರಿಂದಾಗಿ ಹಳ್ಳಿಹಳ್ಳಿಗಳಲ್ಲೂ ಜನರು ಮನೆಯಿಂದ ಹೊರಗೆ ಬರಲು ಆತಂಕ ಪಡುವಂತಾಗಿದೆ. ಈ ಆತಂಕದ ನಡುವೆಯೇ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಮಾಡಿ ಮುಗಿಸಿದೆ. ಇದೀಗ ಹಸಿರು ವಲಯಗಳಲ್ಲಿ ಮೊದಲು ಶಾಲೆ ಆರಂಭಿಸಿ, ನಂತರ ಕಂಟೋನ್ಮೆಂಟ್ ವಲಯವನ್ನು ಹೊರತುಪಡಿಸಿ, ಉಳಿದೆಡೆ ಶಾಲೆಗಳನ್ನು ತೆರೆಯಬಹುದು ಎಂದು ತಜ್ಞರ ತಂಡ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ತಜ್ಞರ …
Read More »ಸುಮಲತಾ ಅವರು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಂಡುಬಂದಿದೆ.ಜನಪ್ರತಿನಿಧಿಗಳು, ಬೆಂಬಲಿಗರು ಸೇರಿದಂತೆ ಸಾರ್ವಜನಿಕರಿಗೂ ಆತಂಕ
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ತಮಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆಯಷ್ಟೇ ದೃಢಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದ ಅವರು, ತಾವು ಶೀಘ್ರದಲ್ಲಿ ಗುಣಮುಖರಾಗಿ ಬರುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರಿಗೆ ಆತಂಕ ಎದುರಾಗಿದೆ. ಇದಕ್ಕೆ ಕಾರಣ ಇಷ್ಟೇ. ಇದೇ 4ರಂದು ಮಂಡ್ಯದ ರೈತ ಸಭಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸುಮಲತಾ ಭಾಗವಹಿಸಿದ್ದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ …
Read More »ಬಯಲು ಸೀಮೆ ಕೋಲಾರದಲ್ಲಿ ನೀರಿನ ಜೊತೆಗೆ ರಕ್ತಕ್ಕೂ ಬರ..
ಕೋಲಾರ: ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಮಾಡಿದ ಲಾಕ್ಡೌನ್ ಎಫೆಕ್ಟ್ ಸಾಕಷ್ಟು ಕ್ಷೇತಗಳಿಗೆ ಹೊಡೆತ ಬಿದ್ದಿದೆ. ಬರದನಾಡು ಕೋಲಾರ ಜಿಲ್ಲೆಯಲ್ಲಿ ಲಾಕ್ಡೌನ್ ಎಫೆಕ್ಟ್ ನಿಂದ ರಕ್ತಕ್ಕೂ ಬರ ಬಂದಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಪರಿಣಾಮ ರಾಜ್ಯದ ಜನರು ಆರ್ಥಿಕತೆ, ನಿರುದ್ಯೋಗ, ಆಹಾರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಕಾಣಬೇಕಾಯಿತು. ಇದರೊಂದಿಗೆ ರಕ್ತದ ಕೊರತೆಯೂ ಎದುರಾಗಿದೆ. ರಾಜ್ಯ ಸರ್ಕಾರ ಮಾ.23 ರಿಂದ ಲಾಕ್ಡೌನ್ …
Read More »ಶಿವಮೊಗ್ಗ ಜೈಲಿನಲ್ಲಿ ಸ್ಯಾನಿಟೈಸರ್ ಟನಲ್ ಅಳವಡಿಕೆ
ಶಿವಮೊಗ್ಗ: ಇಡೀ ರಾಜ್ಯದಲ್ಲಿಯೇ ಹಲವಾರು ಬಂಧೀಖಾನೆಗಳು ಕೊರೊನಾ ಪಾಸಿಟಿವ್ ಗಳಿಂದ ನಲುಗಿ ಹೋಗಿದ್ದರೂ, ಶಿವಮೊಗ್ಗದ ಜೈಲು ಮಾತ್ರ ಕೊರೊನಾ ಮುಕ್ತವಾಗಿದೆ. ಅಲ್ಲದೇ ಇದೀಗ ಈ ಜೈಲಿನಲ್ಲಿ ಸ್ಯಾನಿಟೈಸರ್ ಟನಲ್ ಅಳವಡಿಸಲಾಗಿದ್ದು, ಇದು ಕೂಡ ರಾಜ್ಯದಲ್ಲೇ ಪ್ರಪ್ರಥಮವಾಗಿದೆ. ರಾಜ್ಯದಲ್ಲಿ ಅಷ್ಟೇ ಅಲ್ಲ ಭಾರತದಲ್ಲಿಯೇ ಅತ್ಯಂತ ವಿಶೇಷತೆ ಹೊಂದಿರುವ ಇಲ್ಲಿ ಬಂದು ನಿಂತ್ರೆ ಸಾಕು ಸ್ವಚ್ಛಂದ ಗಾಳಿ, ಉತ್ತಮ ಪರಿಸರ, ಸ್ವಚ್ಛತೆ, ಸುಂದರ ಪಾರ್ಕ್, ನಮ್ಮ ಕಣ್ಮನ ಸೆಳೆಯುತ್ತೆ. ಇಂತಹ ಸುಸಜ್ಜಿತವಾದ ಜೈಲು …
Read More »ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ
ಬೆಂಗಳೂರು,ಜು.7- ಕಳೆದ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತಮ್ಮ ಸೇವೆಯನ್ನು ಖಾಯಂಗೊಳಿಸದಿದ್ದರೆ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಪ್ರಾರಂಭಿಸುವುದಾಗಿ ಗುತ್ತಿಗೆ ವೈದ್ಯರುಎಚ್ಚರಿಕೆ ನೀಡಿದ ಬೆನ್ನಲ್ಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ಸೂಚನೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ …
Read More »ಬೀದರ್ನಲ್ಲಿ 5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು
ಬೀದರ್: ಗಡಿ ಜಿಲ್ಲೆ ಬೀದರಿನಲ್ಲಿ ಕೊರೊನಾ ಮರಣ ಕೇಕೆ ಮುಂದುವರಿದಿದೆ. ಬೀದರ್ನಲ್ಲಿ 5 ಜನರ ಬಲಿಯೊಂದಿಗೆ ಮತ್ತೆ 51 ಜನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಬೀದರಿನಲ್ಲಿ 4 ಹಾಗೂ ಬಸವಕಲ್ಯಾಣದಲ್ಲಿ ಒಬ್ಬರನ್ನು ಕೊರೊನಾಗೆ ಇಂದು ಬಲಿಯಾಗಿದ್ದಾರೆ. ಬೀದರ್, ಬಸವಕಲ್ಯಾಣ, ಭಾಲ್ಕಿ, ಔರಾದ್ನಲ್ಲಿ ಸೇರಿ ಒಟ್ಟು 51 ಜನಕ್ಕೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಅಸ್ತಮಾ, ಉಸಿರಾಟ, ಜ್ವರ, ಹೃದಯ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಐವರು ಇಂದು ಸಾವನ್ನಪ್ಪಿದ್ದಾರೆ. ಇಂದು 51 …
Read More »ಕನ್ನಡ ಹಿರಿಯ ನಟಿ ಜಯಂತಿಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …
Read More »ಕೊರೊನಾ ವರದಿ ನೆಗೆಟಿವ್ ಐಶೋಲೇಶನ್ ವಾರ್ಡ್ ನಲ್ಲೇ ಆತ್ಮ ಹತ್ಯೆ..
ಉಡುಪಿ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 63 ವರ್ಷದ ಪ್ರಭಾಕರ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದ ಕಾರಣ ಜುಲೈ 5 ರಂದು ಉಡುಪಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾಗಿದ್ದರು. ಆದರೆ ಆತ್ಮಹತ್ಯೆ ನಂತರ ಕೊರೊನಾ ಪರೀಕ್ಷಾ ವರದಿ ವೈದ್ಯರ ಕೈ ಸೇರಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರಭಾಕರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಆತಂಕದಲ್ಲಿ ಆತ್ಮಹತ್ಯೆ ಸಾಧ್ಯತೆಯಿದೆ. ಜನ …
Read More »
Laxmi News 24×7