Breaking News

ಜಿಲ್ಲೆ

ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ. ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್​ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ಹಾರಿ ಹೋಗಿದ್ದು, ಮಹಂತೇಶ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ …

Read More »

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭ…………….

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೌದು. ಮೈಸೂರಿನಲ್ಲಿ ತಾಲೂಕುಗಳೀಗೂ ಮಾಹಾಮಾರಿ ವ್ಯಾಪಿಸಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್‍ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಾ.ರಾ ಮಹೇಶ್‍ಗೆ ಆತಂಕ ಹೆಚ್ಚಾಗಿದೆ. ಸಾ.ರಾ ಮಹೇಶ್ ಅವರು ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್‍ಡೌನ್ ಪ್ರದೇಶಗಳಿಗೆ ಭೇಟಿ …

Read More »

ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ

ಬೆಂಗಳೂರು, ಜು.6-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು.   55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರುಗಳು ಮಾತ್ರ ನಾಳೆ ಒಂದು ದಿನ ಮಾತ್ರ ವಿಧಾನ ಸಭಾಧ್ಯಕ್ಷರ ಆದೇಶಾನುಸಾರ ರಜೆಯನ್ನು ಘೋಷಿಸಲಾಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ಕೊರೊನಾ ತಡೆಗೆ ಸೀನಿಯರ್ ಸಿಟಿಜನ್ಸ್ ಲಾಕ್- ರಾಜ್ಯದಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು!

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನಕ್ಕೆ ಮುಂದಾಗಿದೆ. ಸೀನಿಯರ್ ಸಿಟಿಜನ್‍ಗಳನ್ನ ಲಾಕ್ ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ಅದರಲ್ಲೂ ಮಹಾನಗರಿ ಬೆಂಗಳೂರಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಕೇಸ್‍ಗಳು ಬರ್ತಿವೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ನಾನಾ ಕಸರತ್ತು ಮಾಡ್ತಿದೆ. ರಾಜ್ಯದಲ್ಲಿ ಹಿರಿಯ ನಾಗರೀಕರನ್ನ ಮನೆಯಿಂದ ಹೊರ ಬರದಂತೆ ತಡೆಯಲು ಹೊಸ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ. ಹೌದು. ಕೊರೊನಾ …

Read More »

ಗುಡ್ಡ ಕುಸಿತ- ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ರಕ್ಷಣಾ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, …

Read More »

‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ…..

ಕೊರೊನಾ ಕಾಟದಿಂದ ಚಿತ್ರಮಂದಿರಗಳು ಮುಚ್ಚಿಕೊಂಡಿರೋದರ ಬಗ್ಗೆ ಚಿತ್ರ ಪ್ರೇಮಿಗಳಲ್ಲೊಂದು ಕೊರಗಿದೆ. ಅದನ್ನು ಕೊಂಚ ನೀಗಿಸಿ ಮನೆಯೊಳಗೆ ಬಣ್ಣದ ಜಗತ್ತು ಕಣ್ತೆಯುವಂತೆ ಮಾಡುವಲ್ಲಿ ಅಮೆಜಾನ್ ಪ್ರೈಮ್‍ನ ಪಾತ್ರ ದೊಡ್ಡದು. ಈಗಾಗಲೇ ಕನ್ನಡದ ಒಂದಷ್ಟು ಸಿನಿಮಾಗಳು ಅಮೆಜಾನ್ ಪ್ರೈಮ್ ಮೂಲಕ ಲಾಕ್‍ಡೌನ್ ಕಾಲವನ್ನು ಸಹನೀಯವಾಗಿಸಿವೆ. ಅದರಲ್ಲಿಯೇ ಕೆಲ ಚಿತ್ರಗಳು ದೊಡ್ಡ ಮಟ್ಟದಲ್ಲಿ ಗೆದ್ದು ಬೀಗಿವೆ. ಅಂಥಾದ್ದೇ ಆವೇಗದೊಂದಿಗೆ ಇದೀಗ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರೋ ‘ಸ್ಟ್ರೈಕರ್’ ಚಿತ್ರ ಅಮೆಜಾನ್ ಪ್ರೈಮ್‍ನಲ್ಲಿ ಆಟ ಶುರುವಿಟ್ಟಿದೆ. …

Read More »

ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು..

ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಇಂದು ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ …

Read More »

ಒಂದೇ ದಿನ 55ಖಾಕಿ ಗಳಿಗೆ ಕರೋನ್…….ನೀವು ಸೇಫ್ ಆಗಿ ಇದೀರಾ….?

ಬೆಂಗಳೂರು: ಕೊರೊನಾ ಮಹಾ ಸುನಾಮಿ ರಾಜ್ಯದ ಮೇಲೆ ಕಳೆದೊಂದು ವಾರದಿಂದ ನಿರಂತರವಾಗಿ ದೊಡ್ಡ ದಾಳಿ ಮಾಡುತ್ತಿದೆ. ಡೆಡ್ಲಿ ವೈರಸ್ ಪ್ರತಿ ದಿನವೂ ತನ್ನೆಲ್ಲಾ ಹಿಂದಿನ ದಾಖಲೆಗಳನ್ನು ಪುಡಿಗಟ್ಟಿ ಹೊಸ ಇತಿಹಾಸ ಬರೆಯುತ್ತಿದೆ. ನೋಡ ನೋಡುತ್ತಲೇ ಸೋಂಕಿತರ ಸಂಖ್ಯೆ 23,474ಕ್ಕೆ ಬಂದು ನಿಂತಿದೆ. ಇಂದು ಒಂದೇ ದಿನ 1,925 ಮಂದಿಯನ್ನ ಹೆಮ್ಮಾರಿ ವಕ್ಕರಿಸಿಕೊಂಡಿದೆ. ಬೆಂಗಳೂರಿನ ಅಂಕಿ ಅಂಶಗಳಂತೂ ಮಹಾನಗರವನ್ನ ಬಿಟ್ಟು ಹೋಗುವಂತೆ ಮಾಡಿದೆ. ಇಂದು ರಾಜಧಾನಿ ಬೆಂಗಳೂರಲ್ಲಿ ಹೊಸದಾಗಿ 1235 ಜನರ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …

Read More »