Breaking News

ಜಿಲ್ಲೆ

ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ: ಕೋಡಿಮಠ ಶ್ರೀ

ಹಾಸನ: ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಜಗತ್ತಿನಾದ್ಯಂತ ಪ್ರಸಾರವಾಗಿರುವ ಈ ಮಾರಕ ರೋಗ ಮನುಕುಲಕ್ಕೆ ಕಂಟಕ ಪ್ರಾಯವಾಗಿದೆ. ಇದು ದಿನ ದಿನಕ್ಕೆ ಹೆಚ್ಚುತ್ತಿರುವುದು ಶೋಚನೀಯ ಪ್ರಸಂಗ ಎಂದು ಆತಂಕ ಹೊರಹಾಕಿದರು. ಮನುಷ್ಯ ಸ್ವಾರ್ಥದಿಂದ ತಂದುಕೊಳ್ಳುತ್ತಿರುವ ಈ ರೋಗ ಕೇವಲ ಮನುಕುಲ ಅಲ್ಲದೆ ಪ್ರಾಣಿ, ಪಕ್ಷಿ, ವೃಕ್ಷಗಳ ಮೇಲೆ …

Read More »

ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ- ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು!

ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುರುವಾರದಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು. ಈ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳನ್ನು …

Read More »

ಹಿಂಡಲಗಾ ಕೈದಿಗೆ ಕೊರೊನಾ ಸೋಂಕು……….

ಬೆಳಗಾವಿ: ಹಿಂಡಲಗಾ ಕೈದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಹಿಂಡಲಗಾ ಹಾಗೂ ಕ್ಯಾಂಪ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಈಚೇಗೆ ಕುಖ್ಯಾತ ರೌಡಿಯನ್ನು ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.  ಬಳಿಕ ಮೂರು ದಿನಗಳ ಹಿಂದೆಷ್ಟೇ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. ಆದ್ರೆ ಇಂದು ಕೈದಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಇದರಿಂದ ಕ್ಯಾಂಪ್ ಹಾಗೂ ಹಿಂಡಲಗಾ ಪೊಲೀಸ ಸಿಬ್ಬಂದಿಗೆ ಆತಂಕ ಮನೆ ಮಾಡಿದೆ. ಜತೆಗೆ ಹಿಂಡಲಗಾ ಜೈಲಿನಲ್ಲಿ …

Read More »

ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು

ಬೆಂಗಳೂರು: ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು, ಅವರನ್ನು ಭೇಟಿ ಮಾಡಲು ಕಾತುರದಿಂದ ಕಾಯುತ್ತಿರುತ್ತಾರೆ. ಅದೇ ರೀತಿ ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ಡಿಂಪಲ್ ಕ್ವೀನ್ ರಚಿತಾ ಭಾವುಕರಾಗಿದ್ದಾರೆ. ನಟಿ ರಚಿತಾ ರಾಮ್ ಆಟೋ ಡ್ರೈವರ್ ಅಭಿಮಾನವನ್ನು ಕಂಡು ಭಾವುಕರಾದ ಕ್ಷಣವನ್ನು ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಅಭಿಮಾನಿಗಳೇ ದೇವ್ರು” …

Read More »

ಕೊರೊನಾ ಬರುತ್ತೆ ಕೆಲಸಕ್ಕೆ ಹೋಗ್ಬೇಡ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ………..

ಬೆಂಗಳೂರು: ಕೊರೊನಾ ಬರುತ್ತೆ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸವಿತಾ(27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಾವಗಡ ಮೂಲದ ಸವಿತಾ ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಅಣ್ಣನ ಮನೆಯಲ್ಲೇ ವಾಸಿಸುತ್ತಿದ್ದರು. ಅಣ್ಣನ ಮನೆಯಿಂದಲೇ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ …

Read More »

ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ

ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಇಂದು ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಸರ್ಜಾಪುರ, ದೊಮ್ಮಸಂದ್ರ ಸೇರಿ ಹಲವು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟ ಸಚಿವರು, ಪರೀಕ್ಷಾ ಕೇಂದ್ರದ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಜೊತೆಗೆ ಕರ್ತವ್ಯದಲ್ಲಿ ಹಾಜರಿದ್ದ ಸ್ಕೌಟ್ಸ್ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇದೇ …

Read More »

ಕೊರೋನಾ ದಿನದಿಂದ ದಿನಕ್ಕೆ ಅಪಾಯದ ಮಟ್ಟಕ್ಕೆ ಏರುತ್ತಿದೆ.

ಬೆಳಗಾವಿ – ಇಲ್ಲಿಯ ಬಿಮ್ಸ್ ಆಸ್ಪತ್ರೆಯ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 2 ದಿನದ ಹಿಂದೆ ಕೊರೋನಾದಿಂದ ನಿಧನರಾಗಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಗೆ ಸೋಂಕು ದೃಢಪಟ್ಟಿದೆ. ಆದರೆ ಅವರಲ್ಲಿ ಕೊರೋನಾದ ಯಾವ ಲಕ್ಷಣಗಳೂ ಕಾಣಿಸಿಕೊಂಡಿಲ್ಲ. ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಇದೀಗ ಅವರ ಸಂಪೂರ್ಣ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಮಾಡಿ ಅವರೆಲ್ಲರ ಗಂಟಲು ದ್ರವ ಪರೀಕ್ಷೆ ನಡೆಸಲಾಗುತ್ತಿದೆ. ಇದೇ …

Read More »

ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ.

ಬೆಳಗಾವಿ- ಇತ್ತೀಚಿಗಷ್ಟೆ ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ. ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ ಸೃಷ್ಠಿಯಾಗಿದೆ. ದರೋಡೆ ಮಾಡುತ್ತಿದ್ದ ವ್ಯಕ್ಯಿಯನ್ನ ಬಂಧಿಸಿದ್ದ ಬೆಳಗಾವಿಯ ಕ್ಯಾಂಪ್ ಪೊಲೀಸರು. ಮೂರು ದಿನಗಳ ಹಿಂದೆ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ದರೋಡೆಕೋರನಿಗೆ ಇಂದು ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿನ ಕೈದಿ …

Read More »

ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ.

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ. ಹಲವಾರು ದಿನಗಳಿಂದ ಈ ನರ್ಸ್ ಗೆ ಕೋವೀಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಸೊಂಕು ದೃಡವಾದ ಹಿನ್ನಲೆಯಲ್ಲಿ ರೋಗಿಗಳ ಸೇವೆ ಮಾಡಿದ ನರ್ಸಗೂ ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ಹರಡಿ ಇಂದಿಗೆ ಮೂರು ತಿಂಗಳು ಗತಿಸಿದ್ದು ಇದೇ …

Read More »

ಸೋಂಕಿತ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳಿಸಲು ಪತಿರಾಯನ ರಂಪಾಟ!

ಹಾವೇರಿ:ಕೋವಿಡ್-19 ಪಾಸಿಟಿವ್‌ ಇರುವ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕಳುಹಿಸಲು ಒಪ್ಪದ ಪತಿ ಆರೋಗ್ಯ ಸಿಬ್ಬಂದಿಯೊಂದಿಗೆ ರಂಪಾಟ ಮಾಡಿದ ಘಟನೆ ಗುರುವಾರ ತಾಲೂಕಿನ ಕನವಳ್ಳಿಯಲ್ಲಿ ನಡೆದಿದೆ. ಕೋವಿಡ್  19 ಪಾಸಿಟಿವ್‌ ವರದಿ ಬಂದಾಗ ಗರ್ಭಿಣಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್‌ ಸಿಬ್ಬಂದಿ ಕನವಳ್ಳಿಯ ಮನೆಗೆ ಹೋದಾಗ ಪತ್ನಿಯೊಂದಿಗೆ ಪತಿಯೂ ಆಂಬ್ಯುಲೆನ್ಸ್‌ ಏರಲು ಯತ್ನಿಸಿದ್ದಾನೆ. ಪ್ರೀತಿಯ ಪತ್ನಿಯನ್ನು ಒಬ್ಬಳೇ ಇರಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಸ್ಥಳೀಯರು, ಸಿಬ್ಬಂದಿ ಮನವೊಲಿಸಿ ಆಂಬ್ಯುಲೆನ್ಸ್‌ ಹತ್ತುವುದನ್ನು …

Read More »