Breaking News
Home / ಜಿಲ್ಲೆ (page 1211)

ಜಿಲ್ಲೆ

ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 496 ವಾಹನಗಳ ಸೀಜ್ 66 ಎಫ್ಐಆರ್ ಪ್ರಕರಣಗಳು ದಾಖಲಾಗಿವೆ

ಬೆಳಗಾವಿ: ಕೊರೋನಾ ಮಹಾಮಾರಿ ಎದುರಿಸಲು ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೆ ಬೆಳಗಾವಿ ಜಿಲ್ಲೆಯ ಪೊಲೀಸ್ ಇಲಾಖೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 496 ವಾಹನಗಳ ಸೀಜ್ ಮಾಡಲಾಗಿದ್ದು, ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ 66 ಎಫ್ಐಆರ್ ಪ್ರಕರಣಗಳು ದಾಖಲಾಗಿವೆ ಎಂದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ,ನಿಂಬರಗಿ ತಿಳಿಸಿದ್ದಾರೆ. ಲಾಕ್‌ಡೌನ್ ಉಲ್ಲಂಘಿಸಿದ 66 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ …

Read More »

ಆರಂಭದಲ್ಲಿ ಎಡವಿದ್ದ ಕಲಬುರಗಿ ಈಗ ರಾಜ್ಯಕ್ಕೆ ಮಾದರಿ

ಕಲಬುರಗಿ: ಭಾರತದಲ್ಲಿ ಮೊದಲು ಕೊರೊನಾ ವೈರಸ್ ಕಲಬುರಗಿ ವೃದ್ಧನೋರ್ವನನ್ನು ಬಲಿ ಪಡೆದುಕೊಂಡಿತ್ತು. ಆರಂಭದಲ್ಲಿ ಎಡವಿದ್ದ ಕಲಬುರಗಿ ಜಿಲ್ಲಾಡಳಿತ ಈಗ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕಲಬುರಗಿ ಅನುಸರಿಸಿದ ನಿಯಮಗಳನ್ನು ಇನ್ನುಳಿದ ಜಿಲ್ಲಾಡಳಿತ ಫಾಲೋ ಮಾಡಬೇಕೆಂಬ ಸೂಚನೆ ಸಹ ನೀಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಲಬುರಗಿ ಜಿಲ್ಲಾಡಳಿತದ ಕಾರ್ಯವನ್ನು ಶ್ಲಾಘಿಸಿದೆ. ತಿರುಮಂತ್ರ ಹಾಕಿದ್ದು ಹೇಗೆ ಗೊತ್ತಾ? ದೇಶದಲ್ಲಿ ಮೊದಲ ಸಾವಾದರೂ ಕಲಬುರಗಿ ಜಿಲ್ಲಾಡಳಿತ ಪರಿಸ್ಥಿತಿ ಸಮರ್ಥವಾಗಿ ನಿರ್ವಹಣೆ ಮಾಡಿತು. ಮೊದಲ ಪ್ರಕರಣವಾಗಿದ್ದರಿಂದ …

Read More »

25 ಕುಟುಂಬಗಳಿಗೆ ಅಕ್ಕಿ,ತೊಗರೆ ಬೇಳೆ,ಎಣ್ಣೆ,ಬಟ್ಟೆ ತೊಳೆಯಲು ಹಾಗೂ ಸ್ನಾನದ ಸಾಬೂನು ,ಸಾಸಿವೆ ಜೀರಿಗೆನೀಡಿದ ಅಶೋಕ್ ಚಂದರಗಿ:

ಬೆಳಗಾವಿ:ಕೊರೋನಾ ಲಾಕ್ ಔಟ್ ನಿಂದಾಗಿ ಉಂಟಾಗಿರುವ ಅನೇಕ ಸಮಸ್ಯೆಗಳಲ್ಲಿ ಇವರದೂ ಒಂದು.ಬೆಳಗಾವಿ,ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅನೇಕ ಲಂಬಾಣಿ ತಾಂಡಾಗಳಿಂದ ಬೆಳಗಾವಿಗೆ ದುಡಿಯಲು ಬಂದಿರುವ ನೂರಾರು ಪುರುಷರು,ಮಹಿಳೆಯರು,ಮಕ್ಕಳು ಎದುರಿಸುತ್ತಿರುವ ಸಮಸ್ಯೆಯತ್ತಲೂ ಸ್ವಲ್ಪ ಗಮನ ಹರಿಸಿದೆ . ಶಾಹೂನಗರ,ಅಜಮ್ ನಗರ ಮತ್ತು ನೆಹರೂ ನಗರ,ವೈಭವ ನಗರಗಳಲ್ಲಿ ಈ ಜನರು ವಾಸವಾಗಿದ್ದು ಕಳೆದ 15 ದಿನಗಳಿಂದ ಕೆಲಸವಿಲ್ಲ.ಕೈಗೆ ಸಂಬಳವಿಲ್ಲ.ಮನೆ ನಡೆಸಲು ಕಾಳು,ಕಡಿ ಇಲ್ಲ.ನನ್ನನ್ನು ಮೂರ್ನಾಲ್ಕು ದಿನಗಳಿಂದ ಸಂಪರ್ಕಿಸಿದ ಸುಮಾರು 25 ಕುಟುಂಬಗಳಿಗೆ ಅಕ್ಕಿ,ತೊಗರೆ ಬೇಳೆ,ಎಣ್ಣೆ,ಬಟ್ಟೆ …

Read More »

ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ. ಕೊರೊನಾ ವೈರಸ್ ದೇಶದಲ್ಲಿ ಜಾಸ್ತಿಯಾದ ಕಾರಣ ಈ ಮೊದಲೇ ಶಾಲೆಗಳಿಗೆ ಏಪ್ರಿಲ್ 11ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳವಾದ ಕಾರಣ ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದರ ಜೊತೆಗೆ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿರುವ …

Read More »

ಗೌರಿಬಿದನೂರಿನಲ್ಲಿ 1 ಸಾವಿರ ಮಂದಿಗೆ ಹೋಂ ಕ್ವಾರಂಟೈನ್

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿನೂರಿನಲ್ಲಿ ಕೊರೊನಾ ಅಬ್ಬರ ಹಿನ್ನೆಲೆ, ತಾಲೂಕಿನಲ್ಲಿ ಹೊಸದಾಗಿ ಸರಿ ಸುಮಾರು 1000 ಮಂದಿಯನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ. ಸೋಂಕಿತರ ಮನೆಗಳಿರುವ ಹಿರೇಬಿದನೂರಿನ 132 ಮನೆಗಳಲ್ಲಿರುವ 872 ಮಂದಿಯನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಮತ್ತೊಂದೆಡೆ ತಾಲೂಕಿನ ತೊಂಡೆಬಾವಿ ಗ್ರಾಮದಲ್ಲೂ ಸಹ 30 ಮನೆಗಳಲ್ಲಿರುವ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಸೋಂಕಿತರ ಮನೆಗಳಿರುವ ಗ್ರಾಮದ ನಿವಾಸಿಗಳನ್ನು ಸಂಪೂರ್ಣವಾಗಿ ಹೋಂ ಕ್ವಾರಂಟೈನ್ ಗೆ ಗುರಿಪಡಿಸಲಾಗುತ್ತಿದೆ.ಈಗಾಗಲೇ ಗೌರಿಬಿದನೂರು …

Read More »

ಬೆಂಗಳೂರು:ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಟ “….

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಡುತ್ತಿರುವ ಘಟನೆ ಬೆಂಗಳೂರು ಹೊರ ವಲಯದ ನೆಲಮಂಗಲದ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಸುಮಾರು ಮೂರು ದಿನಗಳಿಂದ ಊಟ ಸಿಗದೆ ಹಕ್ಕಿಪಿಕ್ಕಿಯ ಜನ ನರಳಾಡುತ್ತಿದ್ದು, ತಾಲೂಕು ಆಡಳಿತ ಇತ್ತ ಗಮನಹರಿಸಿಲ್ಲ. ಕೊರೊನಾ ಭೀತಿಯಿಂದ ದೇಶವನ್ನೇ ಲಾಕ್‍ಡೌನ್ ಮಾಡಿರುವ ಹಿನ್ನಲೆ ದವಸ ಧಾನ್ಯ ಸಿಗದೆ ಜನ ಪರದಾಡುತ್ತಿದ್ದಾರೆ. ಮೂರು ದಿನಗಳಿಂದ ಊಟವಿಲ್ಲದೆ ಹಕ್ಕಿಪಿಕ್ಕಿ ಜನಾಂಗದವರುಪರಿತಪಿಸುತ್ತಿದ್ದರೂ ಈ ಕುಟುಂಬಗಳಿಗೆ …

Read More »

ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮೂವರು …

Read More »

ಹೊಸಪೇಟೆಯ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊರೊನಾ ಗುಣಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮೂವರನ್ನು ಬಳ್ಳಾರಿಯ ವಿಮ್ಸ್ ಗೆ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಇಂದು ಮೂವರ ವರದಿ ಬಂದಿದ್ದು, ಮೂವರಲ್ಲೂ ಸೋಂಕು ಇರುವುದು ದೃಢವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ. ಸೋಂಕಿತರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದು, ಈ ಮೂವರು ಇತ್ತೀಚೆಗೆ ಬೆಂಗಳೂರಿನಿಂದ ವಾಪಸ್ಸಾಗಿದ್ದರು. …

Read More »

ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ

ಹಾವೇರಿ: ಕೊರೊನ್ ಸಂಬಂಧ ಕಫ್ರ್ಯೂ ಹೆರಿದ್ದರು, ಕೆಲವು ಪುಂಡರು,ಪೊಕರಿಗಳು ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ ಎಂದು ಶಾಸಕ ನೆಹರು ಓಲೇಕಾರ ಸೂಚನೆ ನೀಡಿದರು. ಸೋಮವಾರ ನಗರಸಭೆ ಕಚೇರಿಯಲ್ಲಿ ನಡೆದ ಕೊರೊನ್ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸರು ನಗರದಲ್ಲಿ ಸಂಚರಿಸುವ ಜನರ ಮೇಲೆ ಅನಗತ್ಯವಾಗಿ ಲಾಠಿ ಪ್ರಯೋಗಿಸಬೇಡಿ. ಜನರು ಸುಮ್ಮನೇ ಮನೆಯಿಂದ ಆಚೆ …

Read More »

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ನಾವು ಯಾರು ರಾಜಕೀಯ ಮಾಡುವುದು ಬೇಡ. ಸಮಾಜ ರಕ್ಷಿಸುವ ಸಮಯವಾಗಿದೆ. ಆದ ಕಾರಣ ಮನೆಯಿಂದ ಯಾರು ಹೊರ ಬರದಿರಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ಹರಡಿದ್ದು,ಎಲ್ಲರನ್ನು ತಲ್ಲಣಗೊಳಿಸಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏಪ್ರೀಲ್ 14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದ ಕಾರಣ ಜನರು ಮನೆಯಿಂದ ಹೊರಗೆ …

Read More »