Breaking News

ಜಿಲ್ಲೆ

ಮೂವರು ಆರೋಪಿಗಳಿಗೆ ಸೋಂಕು- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್

ಬೆಂಗಳೂರು: ಮೂವರು ಕೊಲೆ ಆರೋಪಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲು ರೆಡಿಯಾಗಿದೆ. ಈ ಮೂಲಕ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮತ್ತೊಂದು ಸ್ಟೇಷನ್ ಸೀಲ್‍ಡೌನ್‍ಗೆ ಸಿದ್ಧತೆ ನಡೆದಿದೆ. ಪಶ್ಚಿಮ ವಿಭಾಗದ ಪೊಲೀಸರಿಗೆ ಕೊರೊನಾ ಕಂಟಕವಾಗಿದೆ. ಡಿಸಿಪಿ ಕಚೇರಿ, ಎಸಿಪಿ ಕಚೇರಿ, ಉಪ್ಪಾರಪೇಟೆ, ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ, ಜೆಜೆ ಆರ್ ನಗರ, ಕಾಮಾಕ್ಷಿಪಾಳ್ಯ, ಕೆಪಿ ಅಗ್ರಹಾರ, ಕೆಂಗೇರಿ ಪೊಲೀಸ್ ಠಾಣೆಗಳು ಸೀಲ್ …

Read More »

ಮೃತ ಪಟ್ಟು ಎರಡು ಗಂಟೆಗಳಾದರೂ ಮಳೆಯಲ್ಲೇ ಶವವನ್ನು ನೆನೆಯಲು ಬಿಟ್ಟ ಸಿಬ್ಬಂದಿ

ಬಳ್ಳಾರಿ: ಕೊರೊನಾ ಸೋಂಕಿತ ಮೃತದೇಹವನ್ನು ಮಳೆಯಲ್ಲೇ ನೆನೆಯಲು ಬಿಟ್ಟು ಬಳ್ಳಾರಿ ಜಿಲ್ಲೆಯ ಆರೋಗ್ಯ ಇಲಾಖೆ ಮತ್ತೊಮ್ಮೆ ಅಮಾನವೀಯವಾಗಿ ನಡೆದುಕೊಂಡಿದೆ. ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಆರು ಜನರು ಸಾವನ್ನಪ್ಪಿದ್ದರು. ಇದರಲ್ಲಿ ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲೂ ಓರ್ವ ಸೋಂಕಿತ ಮೃತಪಟ್ಟಿದ್ದರು. ಈ ವೇಳೆ ಆತನ ಶವವನ್ನು ಆಸ್ಪತ್ರೆಯ ಆವರಣದಲ್ಲಿ ನೆನೆಯಲು ಬಿಟ್ಟು ಆಸ್ಪತ್ರೆಯ ವೈದ್ಯರ ಮತ್ತೊಂದು ಎಡವಟ್ಟು , ಈ ಆಸ್ಪತ್ರೆಗೆ ಪ್ರತಿನಿತ್ಯ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. …

Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು……….

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ. ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು …

Read More »

ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಗೆ ಬಿಡದೇ ಕಾಡುತ್ತಿದೆ.

ಬೆಳಗಾವಿ: ನಗರದಲ್ಲಿ ಕೊರೊನಾ ಸೋಂಕಿಗೆ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ. ಗುಡ್ ಶೆಡ್ ರಸ್ತೆ ನಿವಾಸಿಯಾಗಿರುವ 74 ವರ್ಷದ ವ್ಯೆಕ್ತಿಗೆ ನಿನ್ನೆ ಮಧ್ಯಾಹ್ನ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯ ವೈದ್ಯರಿಗೆ ತೋರಿಸಿದಾಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸ್ಸು ಮಾಡಿದ್ದರು,, …

Read More »

ಬಡ್ಡಿ ಹೆಚ್ಚು ಪಡೆದುಕೊಳ್ಳುತ್ತಿದ್ದರೆ ಎಂದು ಆರೋಪಿಸಿ ಬ್ಯಾಂಕಗಳಿಗೆ ಮುತ್ತಿಗೆ ಹಾಕಿ ಗೋಕಾಕ ರೈತ ಸಂಘಟನೆಯಿಂದ ಪ್ರತಿಭಟನೆ…!

  ಗೋಕಾಕ :ನಿಗದಿ ದರಕಿಂತ ಹೆಚ್ಚು ಬಡ್ಡಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಜಾಜ್ ಪೈನಾನ್ಸ್ ಲಿಮಿಟೆಡ್ ಹಾಗೂ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಸೇರಿದಂತೆ ಗೋಕಾಕನ ವಿವಿಧ ಬ್ಯಾಂಕ್ ಕಚೇರಿಯ ಮುಂದೆ ರೈತ ಸಂಘಟನೆಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ಒಂದು ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ನಡೆದಿದೆ… ಸುಮಾರು ವರ್ಷಗಳ ಹಿಂದೆ ಸಾಗಣ್ಣಾ ಹಡಿಗನಾಳ ಹಾಗೂ ಈರಣ್ಣಾ ಹಡಿಗನಾಳ ಅನಾರೋಗ್ಯದಿಂದ ಸಾವನ್ನಪ್ಪಿದು ಅವರ ಸಾವಿಗೆ ಬ್ಯಾಂಕ್ …

Read More »

ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಿದ ಬೆಳಗಾವಿ ಜಿಲ್ಲೆಯ ಜನರ ಮೇಲೆ ಪ್ರಕರಣ ದಾಖಲಿಸಲು ಸೂಚನೆ

ಬೆಳಗಾವಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಬೆಳಗಾವಿ ಜಿಲ್ಲೆಯ 573 ಜನ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲು ಕ್ವಾರಂಟೈನ್ ನೊಡಲ್ ಅಧಿಕಾರಿಗಳು ಜಿಲ್ಲೆಯ ಉಪವಿಭಾಗಾಧಿಕಾರಿಗಳುಮತ್ತು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಪಕ್ಕದ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಗೆ ಬಂದಿರುವ 573 ಜನ ಹೋಮ್ ಕ್ವಾರಂಟೈನ್ ನಲ್ಲಿ ಇರದೇ ಸುತ್ತಾಡಿದ್ದು ಇವರನ್ನು ಟ್ರ್ಯಾಕ್ ಮಾಡಿರುವ ಕ್ವಾರಂಟೈನ್ ಅಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿರುವ 573 ಜನರ ಪಟ್ಟಿ ಮಾಡಿ ಬೆಳಗಾವಿ ಜಿಲ್ಲೆಯ ಎಲ್ಲ ಉಪ …

Read More »

ಗೋಕಾಕ ತಾಲೂಕಿನ ಘಟಪ್ರಭಾ ನಗರದ 2 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಘಟಪ್ರಭಾ: ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಘಟಪ್ರಭಾದಲ್ಲಿ ಎರಡು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ* ಪ್ರಾಥಮಿಕ …

Read More »

ನರೇಗಾ ಯೋಜನೆಯಡಿ ಕೆರೆ ಹೂಳೆತ್ತುತ್ತಿದ್ದಾನೆ ಬಿಕಾಂ ಮುಗಿಸಿದ ಯುವಕ

ಧಾರವಾಡ: ಲಾಕ್‍ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಖಾಲಿ ಕುಳಿತಿದ್ದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯಿತಿ ಕೆಲಸ ನೀಡಿದೆ. ಕೆರೆ ಹೂಳೆತ್ತುವ ಈ ಕಾರ್ಯಕ್ಕೆ ಈಗ ಪದವಿ ಮುಗಿಸಿದವರೂ ಬರುವಂತಾಗಿದೆ. ಜಿಲ್ಲೆಯ ಪ್ರಭುನಗರ ಹೊನ್ನಾಪುರ ಗ್ರಾಮದ ಪದವಿ ಮುಗಿಸಿದ ಯುವಕ ಪ್ರಕಾಶ್ ಕೆರೆ ಹೂಳೆತ್ತುವ ಕಾಮಗಾರಿಗೆ ಬರುತ್ತಿದ್ದಾನೆ. ಬಿಕಾಂ ಮುಗಿಸಿರುವ ಇವರಿಗೆ ಈಗ ಕೆಲಸ ಇಲ್ಲ. ಹೀಗಾಗಿ ನರೇಗಾ ಕಾಮಗಾರಿ ಆರಂಭವಾಗುತಿದ್ದಂತೆ ಇವರು ಸಹ ಕೆರೆ ಹೂಳೆತ್ತುವ ಕೆಲಸಕ್ಕೆ ಹೋಗುತ್ತಿದ್ದಾರೆ. ದಿನಕ್ಕೆ 275 …

Read More »

ಬೆಂಗಳೂರಲ್ಲಿ ಎಸಿಪಿ-ಇನ್ಸ್‌ಪೆಕ್ಟರ್‌ ಹೆಗಲೇರಿದೆ ಕೊರೋನಾ………..

ಬೆಂಗಳೂರು,ಜು.1- ನಗರದ ಪಶ್ಚಿಮ ವಿಭಾಗದ ಒಬ್ಬರು ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.  ಎಸಿಪಿ ಮತ್ತು ಇನ್‍ಸ್ಪೆಕ್ಟರ್ ಅವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್.ಬಿ ಈ ಸಂಜೆಗೆ ತಿಳಿಸಿದ್ದಾರೆ. ಇದುವರೆಗೂ ಪಶ್ಚಿಮ ವಿಭಾಗದಲ್ಲಿ 43 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.ಈಗಾಗಲೇ ಕಾನ್‍ಸ್ಟೆಬಲ್, ಹೆಡ್‍ಕಾನ್‍ಸ್ಟೆಬಲ್, ಎಎಸ್‍ಐಗಳಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಕೊರೊನಾ ಇದೀಗ …

Read More »

ಬೆಂಗಳೂರಲ್ಲಿ ಕೊರೊನಾ ನಿಯಂತ್ರಿಸಲು ಮತ್ತೊಂದು ತಿಂಗಳು ನಿಷೇಧಾಜ್ಞೆ…….

ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ …

Read More »