Breaking News
Home / ಜಿಲ್ಲೆ (page 1221)

ಜಿಲ್ಲೆ

ಕೊರೊನಾ ಭೀತಿಗೆ ಗ್ರಾಮಕ್ಕೆ ಬಂದ ನೆಂಟರನ್ನೇ ವಾಪಸ್ ಕಳಿಸಿದ್ರು

ಚಿಕ್ಕಮಗಳೂರು: ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸೋಂಕಿನ ಭೀತಿಗೆ ಜನ ಮನೆಯಿಂದ ಹೊರಬರೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಈಗಾಗಲೇ ಕೆಎಫ್‍ಡಿ ಭಯದಿಂದ ಕಂಗಲಾಗಿರೋ ಮಲೆನಾಡಿಗರಲ್ಲಿ ಮಹಾಮಾರಿ ಕೊರೊನಾ ಮತ್ತಷ್ಟು ಆತಂಕ ಸೃಷ್ಟಿಸಿದೆ. ಹೀಗಿರುವಾಗ ಹಳ್ಳಿ ಬಿಟ್ಟು ವರ್ಷವಾಗಿದ್ದ ಜನ ಕೊರೊನಾ ವೈರಸ್‍ಗೆ ಹೆದರಿ ಮತ್ತೆ ಹಳ್ಳಿಗಳತ್ತ ಮುಖ ಮಾಡ್ತಿದ್ದಾರೆ. ಆದ್ದರಿಂದ ಮಲೆನಾಡಿಗರು ಅವರಿಗೆಲ್ಲಾ ಬರಬೇಡಿ ಅಲ್ಲೇ ಇರಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜಿಲ್ಲೆಯ ಶೃಂಗೇರಿ …

Read More »

ಕೊರೊನಾ ಎಮರ್ಜೆನ್ಸಿಗೆ ಮೂರು ತಿಂಗಳ ಸಂಬಳ ನೀಡಿದ ಯತ್ನಾಳ್

ವಿಜಯಪುರ: ಕೊರೊನಾ ಎಮರ್ಜೆನ್ಸಿ ಹಿನ್ನೆಲೆ ಜನರ ಸಂಕಷ್ಟಕ್ಕೆ ಸಹಯ ಮಾಡಲು ರಾಜ್ಯ ಸರ್ಕಾರದ ಮನವಿ ಮಾಡಿದೆ. ಪ್ರಕೃತಿ ವಿಕೋಪ ನಿಧಿಗೆ ಧನ ಸಹಾಯ ಮಾಡಲು ಸೂಚಿಸಿದೆ. ಇದಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಂದಿಸಿದ್ದಾರೆ. ಕೊರೊನಾ ಎಮರ್ಜೆನ್ಸಿಗೆ ತಮ್ಮ ತಿಂಗಳ ವೇತನವನ್ನ ಸರ್ಕಾರಕ್ಕೆ ನೀಡಲು ಯತ್ನಾಳ್ ನಿರ್ಧರಿಸಿದ್ದಾರೆ. ತಮ್ಮ ಮೂರು ತಿಂಗಳ ವೇತನವನ್ನ ಪ್ರಕೃತಿ ವಿಕೋಪ ನಿಧಿಗೆ ಪಡೆಯುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. …

Read More »

ಶುಕ್ರವಾರದಿಂದ ಮಣಿಪಾಲ ಕೆಎಂಸಿ ಬಂದ್ – ಒಪಿಡಿ ಸೇವೆ ಸ್ಥಗಿತ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಸೋಂಕಿತನನ್ನು ಕೆಎಂಸಿಗೆ ರವಾನಿಸಿದ್ದು, ಕೆಎಂಸಿ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮಾತ್ರ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ. ಕಿಮೋಥೆರಪಿ ಮತ್ತು ರೇಡಿಯೋ ತೆರಪಿ ಮಾಡಿಸಿಕೊಳ್ಳುವ ರೋಗಿಗಳು ಕೆಎಂಸಿಗೆ ಯಾವುದೇ ಕಾರಣಕ್ಕೆ ಕಾಲಿಡಬಾರದು. ಅವರು ನೇರವಾಗಿ ಶಿರಡಿ ಸಾಯಿಬಾಬಾ …

Read More »

ಏನು ಮಾಡ್ತೀರೋ ಗೊತ್ತಿಲ್ಲ…. ಒಂದೇ ಒಂದು ಕಾಲು ಹೊರಗೆ ಕಾಣಬಾರದು….” :ಡಿಸಿಪಿ ಸೀಮಾ ಲಾಟ್ಕರ್

ಲಾಕ್ ಡೌನ್ ಘೋಷಣೆಯಾದರೂ ಬೆಳಗಾವಿಯಲ್ಲಿ ಜನರು ರಸ್ತೆ ಮೇಲೆ ಅಡ್ಡಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆಗಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ತಲೆ ಕೆಡಿಸಿಕೊಂಡಿದ್ದಾರೆ. “ನಾವು ಕೆಲಸ ಮಾಡಿದರೂ ಹೇಳಿಸಿಕೊಳ್ಳಬೇಕಾಗಿದೆ… ಏನು ಮಾಡ್ತೀರೋ ಗೊತ್ತಿಲ್ಲ…. ನಾಳೆಯಿಂದ ಒಂದೇ ಒಂದು ಕಾಲು ಹೊರಗೆ ಕಾಣಬಾರದು….” ಎಂದು ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಸರಿಯಾಗಿ ಲಾಕ್ ಡೌನ್ ಆಗುತ್ತಿಲ್ಲ ಎಂದು ಯಡಿಯೂರಪ್ಪ ಗುರುವಾರ ಸಂಜೆ ವೀಡಿಯೋ ಕಾನ್ಫರೆನ್ಸ್ …

Read More »

ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ.: ಸಿದ್ಧರಾಮಯ್

ಬೆಂಗಳೂರು: ಕೊರೊನಾ ಸೋಂಕಿನ‌ ಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ. ಈ ಪ್ಯಾಕೇಜ್  ‘Too little, Too Late’ ಎನ್ನುವ ಹಾಗಾಗಿದೆ ಎಂದು ವಿರೋಧ ಪಕ್ಷದ ‌ನಾಯಕ‌ ಸಿದ್ಧರಾಮಯ್ಯ ಮಾದ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಹೇಳಿದ್ದಾರೆ.: ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾದುದ್ದು ಜನವರಿ ಕೊನೆ ವಾರದಲ್ಲಿ. ಕೊರೊನಾದಿಂದ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ, ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ …

Read More »

ಶೈಕ್ಷಣಿಕ ಪ್ರಕ್ರಿಯೆಗಳು ಏಪ್ರಿಲ್ 20ರ ವರೆಗೆ ಮುಂದೂಡಿಕೆ

ರಾಜ್ಯದಲ್ಲಿ ಕರೋನಾ ವೈರಸ್ ಹರಡುವಿಕೆ ಮುಂದುವರಿಯುತ್ತಿರುವುದರಿಂದ  ಹಾಗೂ ಏಪ್ರಿಲ್ 15 ರ ವರೆಗೆ ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಪ್ರಧಾನ ಮಂತ್ರಿಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಕ್ರಿಯೆಗಳನ್ನು  ಏಪ್ರಿಲ್ 20 ರ ವರೆಗೆ ಮುಂದೂಡಲಾಗಿದೆ.       7 ರಿಂದ 9 ನೇ ತರಗತಿಯ ಹಾಗೂ  ಎಸ್.ಎಸ್.ಎಲ್.ಸಿ ಪರೀಕ್ಷೆಗಳು, ಆರ್.ಟಿ.ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಸೇರಿದಂತೆ ವಿವಿಧ ಮಾದರಿಯ  ಶಾಲೆಗಳಲ್ಲಿನ  2020-21 ನೇ ಸಾಲಿನ ದಾಖಲಾತಿ ಪ್ರಕ್ರಿಯೆಗಳನ್ನು …

Read More »

23 ದಿನದ ಹಸುಗೂಸನ್ನೇ ಒಲೆಗೆ ಹಾಕಿ ಸುಟ್ಟು ಹಾಕಿದ ತಾಯಿ…..

ಚಿಕ್ಕಮಗಳೂರು:   ತನ್ನ 23 ದಿನದ ಹೆಣ್ಣುಮಗುವನ್ನು ತಾಯಿಯೇ ಒಲೆಯಲ್ಲಿ ಹಾಕಿ ಹುಟ್ಟು ಹಾಕಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಕೆರೆ ಸಂತೆ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಚಂದ್ರಾಬಾಯಿ ಎಂದು ಗುರುತಿಸಲಾಗಿದೆ. ರಮೇಶ್ ನಾಯ್ಕ ಎಂಬಾತನ ಪತ್ನಿ. ಈ ದಂಪತಿಗೆ ಮಾಚ್. 2 ರಂದು ಹೆಣ್ಣು ಮಗು ಜನಿಸಿತ್ತು. ಆಕೆಗೆ ಹೆಣ್ಣು ಮಗು ಬೇಕಿರಲಿಲ್ಲ.  ಹೀಗಾಗಿ ಮಾ.21 ರಂದು ಮಗುವನ್ನು ಒಲೆಗೆ ಹಾಕಿ  ಸುಟ್ಟು ಹಾಕಿದ್ದಳು. ಬಳಿಕ ಮಗುವನ್ನು ನಾಯಿ ಎತ್ತಿಕೊಂಡು …

Read More »

ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್

ಗೋಕಾಕ:ಕೊರೋನಾ‌ ವೈರಸ್ ಹರಡುವ ಭಿತಿಗೆ ಕ್ಯಾರೆ ಎನ್ನದೆ ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್ ಮಾಡಿದ ಘಟನೆ ಗೋಕಾಕ್ ನಗರದ ಮಸೀದಿಯೊಂದರಲ್ಲಿ ನಡೆದಿದೆ..   ಲಾಕ್ ಡೌನ್ ಇದ್ದರು ಕ್ಯಾರೆ ಎನ್ನದೇ ನಮಾಜ್ ಗೆ ಜನ ಸೇರಿದ್ದಾರೆಂಬ ಮಾಹಿತಿ ಪಡೆದ ಪೋಲೀಸರು ಲಾಠಿ ಚಾರ್ಜ ಮಾಡಿ ಜನರನ್ನು ಚದುರಿಸಿದ್ದಾರೆ. ಎರಡು ಮಸೀದಿಗಳಲ್ಲಿ ನಮಾಜ್ ಮಾಡುತ್ತಿದ್ದ ಮೂವತ್ತಕ್ಕೂ ಅಧಿಕ ಜನರನ್ನು ಮಸೀದಿಯಿಂದ ಹೊರಗೆ ಕರೆದು ಪೋಲೀಸರು ಲಾಠಿ …

Read More »

ಅನಗತ್ಯ ಮನೆಯಿಂದ ಹೊರ ಬರದಿರಿ: ಹೆಗ್ಗನಾಯಕ

ಮೂಡಲಗಿ: ಕೊರೊನಾ ವೈರಸ್ ದೇಶವನ್ನೇ ಬೆಚ್ಚಿ ಬಿಳಿಸಿದೆ. ಪ್ರತಿಯೊಬ್ಬರು ತಮ್ಮ ಜೀವ ಉಳಿಸಿಕೊಳ್ಳಬೇಕಾದರೆ ಸಾಮಾಜಿಕ ಅಂತರದ ಕಾಯ್ದುಕೊಳ್ಳಬೇಕು. ಅನಗತ್ಯ ಮನೆಯಿಂದ ಹೊರಗೆ ತಿರಗಾಡದಿರಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ತಾಲ್ಲೂಕಿನ ಸುಣಧೋಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ದೇಶನದಂತೆ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದೇಶಕ್ಕೆ ದೇಶವೇ ಈ ಮಾರಕ ವೈರಲ್ ವೈರಸ್‍ದಿಂದಾಗಿ ಮನುಕುಲ ಅಪಾಯದ ಅಂಚಿನಲ್ಲಿದೆ. ಈ ಮಾರಕ ರೋಗ …

Read More »

ಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ.

ಚಿಕ್ಕೋಡಿ :  ಪಟ್ಟಣದ  23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು  ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.  ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ …

Read More »