Breaking News

ಜಿಲ್ಲೆ

ಆಶಾ ಕಾರ್ಯಕರ್ತೆಯಿಂದ ಸ್ಟಾಫ್ ನರ್ಸ್ ಗೂ ತಗುಲಿದ ಕೊರೊನಾ

ಹಾವೇರಿ: ಜಿಲ್ಲೆಯಲ್ಲಿ ಇವತ್ತು 10 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಸವಣೂರು ಪಟ್ಟಣದಲ್ಲಿ ಸ್ಟಾಫ್ ನರ್ಸ್ ಸೇರಿದಂತೆ ಏಳು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರು ಪಟ್ಟಣದ 23 ವರ್ಷದ ಗರ್ಭಿಣಿಗೆ ರೋಗಿ 8699 ಪ್ರಾಥಮಿಕ ಸಂಪರ್ಕದಿಂದ ಏಳು ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಇನ್ನು ಸವಣೂರು ತಾಲೂಕಿನ ಕಾರಡಗಿ ಗ್ರಾಮದ 38 ವರ್ಷದ ಆಶಾ ಕಾರ್ಯಕರ್ತೆ (ರೋಗಿ-8700)ಯ ಸಂಪರ್ಕದಿಂದ ಸ್ಟಾಫ್ ನರ್ಸ್ ಗೆ ಕೊರೊನಾ ವಕ್ಕರಿಸಿದೆ. …

Read More »

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು‌.

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಸುಗಮವಾಗಿ ನಡೆಯಿತು. ಬೆಳಗಾವಿ ,ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು‌. ಬೆಳಗಾವಿ ಶೀಕ್ಷಣಿಕ ಜಿಲ್ಲೆಯಲ್ಲಿ 32,356 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಆದರೆ 31,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು,788 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ,40,436 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಅದರಲ್ಲಿ 38,778 ವಿದ್ಯಾರ್ಥಿಗಳು ಪರೀಕ್ಷೆ ಬರೆದರು,1658 ವಿದ್ಯಾರ್ಥಿಗಳು ಗೈರಾಗಿದ್ದರು . ಬೆಳಗಾವಿ,ಹಾಗೂ ಚಿಕ್ಕೋಡಿ ಶೈಕ್ಷಣಿಕ …

Read More »

S.S.L.C.  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ

ಗದಗ: ಎಸ್ಎಸ್ಎಲ್ ಸಿ  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ  ಸಂಭವಿಸಿದೆ. ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ  ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಎಸ್ಎಲ್ ಸಿ  ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ …

Read More »

ಮಾಜಿ ಪ್ರಧಾನಿ ದೇವೇಗೌಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ.

ಬೆಂಗಳೂರು (ಜೂನ್‌ 25); ರಾಜ್ಯದಲ್ಲಿ ಜೆಡಿಎಸ್‌ ಕಾರ್ಯಕರ್ತರಿಗೆ ಬಿಜೆಪಿ ಸಚಿವರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದಾರೆ. ಜೂನ್‌.29 ರಂದು ಧರಣಿ ನಡೆಸಲಿರುವುದಾಗಿ ಸ್ವತಃ ಸಿಎಂ ಗೆ ಎಚ್ಚರಿಕೆ ಪತ್ರ ರವಾನಿಸಿದ್ದಾರೆ.ಸಿಎಂ ಗೆ ಪತ್ರ ಬರೆದಿರುವ ದೇವೇಗೌಡ, “ಸಚಿವ ಕೆ.ಸಿ. ನಾರಾಯಣಗೌಡ ಚುನಾವಣಾ ವೈಷಮ್ಯದ ಹಿನ್ನೆಲೆ ಕೆ.ಆರ್ ಪೇಟೆಯ ಜೆಡಿಎಸ್ ಕಾರ್ಯಕರ್ತ ಹೆಚ್.ಟಿ. …

Read More »

ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?

ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …

Read More »

ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.

ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …

Read More »

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು: ಗೋಕಾಕ

ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿಯನ್ನು   ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು  ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ  

Read More »

ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …

Read More »

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ

ಗದಗ: ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್‍ನಲ್ಲಿ ನಡೆದಿದೆ. ನಡು ರಸ್ತೆಯಲ್ಲೆ ಲಾಂಗು, ಮಚ್ಚುಗಳು ಝಳಪಿದ ಹಿನ್ನೆಲೆ ರಸ್ತೆ ಅನೇಕ ಕಡೆಗೆ ರಕ್ತಸಿಕ್ತವಾಗಿದೆ. ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖಂ ಆಗಿವೆ. ಘಟನೆಯಿಂದ ಯೇಸುಕುಮಾರ ಹೊಸಮನಿ (34), ಅನಿಲ ಮುತಗಾರ (35), ಗೋವಿಂದ ಮುತಗಾರ (43) ಮತ್ತು ಶಾಕಮ್ಮ (37)ಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳನ್ನು …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………

ಬೆಳಗಾವಿ- ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು‌. ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ …

Read More »