Breaking News

ಜಿಲ್ಲೆ

ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲುಬಾಂದಾರಗಳನಿರ್ಮಾಣ

ಬೈಲಹೊಂಗಲ: ಬಾಂದಾರಗಳನ್ನು ನಿರ್ಮಾಣ ಮಾಡುವುದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು. ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ  ಸಣ್ಣ ನೀರಾವರಿ ಇಲಾಖೆಯಲ್ಲಿ ಟಿಎಸ್‍ಪಿ ಅನುದಾನದಡಿ 40 ಲಕ್ಷ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಹೊಸ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಶುದ್ಧ ನೀರು ಕುಡಿಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದುದು. ಗ್ರಾಮಾಂತರ …

Read More »

ಕೋವಿಡ್ ಕುರಿತು ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಣ ಕ್ರಮ

ಧಾರವಾಡ:  ಕೋವಿಡ್‍-19 ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮೌಖಿಕವಾಗಿ ಕೆಲವರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.  ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಅಂತಾ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 202 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅವರಲ್ಲಿ ಈಗಾಗಲೇ 90 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಿಮ್ಸ್  ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಎಲ್ಲರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಸುಳ್ಳು …

Read More »

ಹುಬ್ಬಳ್ಳಿ:ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ ಕಳ್ಳ…………

ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುತ್ತಿದ್ದ ವಿಕೃತ ಮನಸ್ಸಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಯುವಕನು ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ಈಶ್ವರ ನಗರ, ನೇಕಾರನಗರದ ವಿವಿಧ ಬಡಾವಣೆಗಳಲ್ಲಿ ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ. ಇದರಿಂದಾಗಿ ಕಳ್ಳನನ್ನು ಹಿಡಿಯಲು ಸಾರ್ವಜನಿಕರು ಕಾಯುತ್ತಿದ್ದರು. ಯುವಕ ಇಂದು ಕೂಡ ಬಟ್ಟೆ ಕದಿಯಲು ನೇಕಾರನಗರದ ಬಡಾವಣೆಗೆ ಬಂದಿದ್ದ. ಬಟ್ಟೆ ಕದ್ದು ಇನ್ನೇನು ಪರಾರಿಯಾಗುತ್ತಿದ್ದಂತೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ಕಂಬಕ್ಕೆ ಕಟ್ಟಿದ …

Read More »

ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು,,,,,,,,,,

ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ.

ಶಿವಮೊಗ್ಗ : ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ. ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಸುಂದರವಾದ ಕೆರೆ ಪುನರ್ ನಿರ್ಮಾಣಕ್ಕೆ ಕೈ ಜೋಡಿಸಿ, ಎಲ್ಲರ ಮನೆ ಮಾತಾಗಿದ್ದಾರೆ. ಸ್ವಗ್ರಾಮ ಸಮಿತಿಯ ಸದಸ್ಯರೊಂದಿಗೆ ಕೈ ಜೋಡಿಸಿ ಒತ್ತುವಾರಿಯಾಗಿದ್ದ ಇಡೀ ಕೆರೆಯನ್ನು ಬಿಡಿಸಿಕೊಂಡು, ಕೆರೆಯಲ್ಲಿ ತುಂಬಿದ್ದ ಹೂಳು ತೆಗೆದು ಇದೀಗ ಜೀವ ಕಳೆ ನೀಡಿದ್ದಾರೆ. ಕೇವಲ 80 ಲಕ್ಷ ಲೀ. ನೀರು ತುಂಬುತ್ತಿದ್ದ …

Read More »

ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ,ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟ……

ರಾಯಚೂರು: ಜಿಲ್ಲೆಯ ಸಾವಿರಾರು ರೈತರ ಜೀವನಾಡಿ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಭರದಿಂದ ಸಾಗಿದೆ. ಆದರೆ ಕಾಲುವೆ ಕಾಮಗಾರಿ ಬಗ್ಗೆ ರೈತರಲ್ಲಿ ಆತಂಕ ಎದುರಾಗಿದೆ. ನೂರಾರು ಕೋಟಿ ರೂಪಾಯಿ ಖರ್ಚುಮಾಡಿ ಅಧುನೀಕರಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ರಾಯಚೂರಿನ ದೇವದುರ್ಗ, ಲಿಂಗಸುಗೂರು ತಾಲೂಕುಗಳ ರೈತರ ಬದುಕಿನ ಚಿತ್ರಣವನ್ನೇ ಬದಲಿಸಿದ ನೀರಾವರಿಯ ಜೀವನಾಡಿಯಾದ ಕಾಲುವೆ ಇದಾಗಿದ್ದು, ಆಧುನೀಕರಣ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗುತ್ತಿದೆ. …

Read More »

ಇಡೀ ಬೆಂಗ್ಳೂರು ಮತ್ತೆ ಸೀಲ್‍ಡೌನ್ ಆಗುತ್ತಾ……………?-

ಬೆಂಗಳೂರು: ಸಿಲಿಕಾನ್ ಸಿಟಿ ಸೀಲ್‍ಡೌನ್ ಆಗುವುದು ಬಹುತೇಕ ಪಕ್ಕಾ ಆಗಿದೆ. ನಗರದಲ್ಲಿ ನಿತ್ಯ 150ಕ್ಕೂ ಪಾಸಿಟಿವ್ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಪೊಲೀಸ್, ಸಾರಿಗೆ ನೌಕರರು ಹಾಗೂ ವೈದ್ಯರಿಗೂ ಎಲ್ಲ ವಿಭಾಗದ ಜನರಿಗೂ ಕೊರೊನಾ ಬಂದಿದೆ. ಹೀಗಾಗಿ ಕೊರೊನಾ ಪ್ರತಿದಿನ ಹೆಚ್ಚುತ್ತಿದ್ದು, ಸರ್ಕಾರಕ್ಕೆ ಹೊಸ ಸವಾಲು ಎದುರಾಗಿದೆ. ಬೆಂಗಳೂರನ್ನ ಮತ್ತೆ 15 ದಿನ ಲಾಕ್‍ಡೌನ್ ಮಾಡಿಬಿಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೆಲ ಸಚಿವರು ಲಾಕ್‍ಡೌನ್ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. …

Read More »

ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್

ರಾಮನಗರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್ ಆಗಿದೆ. ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಿಲ್ಲೆಯ ಮಾಗಡಿ ಪಟ್ಟಣ ಮತ್ತು ಕನಕಪುರ ಲಾಕ್‍ಡೌನ್ ಮಾಡಲಾಗಿದೆ. ಇಂದಿನಿಂದ ರಾಮನಗರ ಪಟ್ಟಣ ಕೂಡ ಲಾಕ್‍ಡೌನ್ ಆಗಿದೆ. ಕಳೆದ ದಿನವೇ ಅಂಗಡಿ, ಮುಂಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಲಾಕ್‍ಡೌನ್‍ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಸ್ವಯಂ …

Read More »

ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ …

Read More »

ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ

ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …

Read More »