Breaking News

ಜಿಲ್ಲೆ

ಎತ್ತಿನ ಹೊಳೆ ಯೋಜನೆ : ಭೂ ಪರಿಹಾರ ದರ ನಿಗಧಿಗೆ ಸಿಎಂ ಜತೆ ಚರ್ಚೆ

ತುಮಕೂರು, – ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.  ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ  ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »

ಮೂಲ ಸೌಕರ್ಯ ಪೂರೈಸಲುದಗಿಸುವಂತೆ ಸಚಿವ …….

ಕಾಯಿಪಲ್ಯ ವ್ಯಾಪಾರಸ್ಥರಿಂದ ಮಾರು ಕಟ್ಟೆಗೆ ಮೂಲ ಸೌಕರ್ಯ ಪೂರೈಸಲು ಜಲಸಂಪನ್ಮೂಲ ಸಚಿವರಿಗೆ ಮನವಿ ಘಟಪ್ರಭಾ: ಘಟಪ್ರಭಾ ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತರಕಾರಿ ವ್ಯಾಪಾರಸ್ಥರು ಮತ್ತು ಜನಪ್ರತಿನಿಧಿಗಳು ಇಂದು  ಮನವಿ ಸಲ್ಲಿಸಿದರು. ಪಟ್ಟಣದ ತರಕಾರಿ ಮಾರುಕಟ್ಟೆ ತುಂಬಾ ಹೆಸರುವಾಸಿಯಾಗಿದ್ದು ದಿನನಿತ್ಯ  ಸುತ್ತ ಮುತ್ತಲಿನ ಹಳ್ಳಿಯ ನೂರಾರು  ರೈತರು ತಾವು ಬೆಳಸಿದ ತರಕಾರಿಗಳನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬರುತ್ತಾರೆ. ಆದ್ರೆ ಮಾರುಕಟ್ಟೆಯಲ್ಲಿ …

Read More »

ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮ ಅಂದರ್………….

ಬೆಂಗಳೂರು, ಜೂ.17- ಒಡಹುಟ್ಟಿದ ಇಬ್ಬರು ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಕೊಲೆ ಪ್ರಕರಣದ ಆರೋಪಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಅವರು ಈ ಸಂಜೆಗೆ ತಿಳಿಸಿದ್ದಾರೆ. ಈತ ತನ್ನ ಅಣ್ಣಂದಿರಾದ ಸಹದೇವ ಮತ್ತು ದಂಡಪಾಣಿ ಎಂಬುವರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಪ್ರಕರಣ …

Read More »

ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ.  ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …

Read More »

ಬ್ರೇಕಿಂಗ್ : ಹರಿಪ್ರಸಾದ್ ಮತ್ತು ನಜೀರ ಅಹಮದ್ ಗೆ ಕಾಂಗ್ರೆಸ್ ಪರಿಷತ್ ಟಿಕೆಟ್ ಘೋಷಣೆ

ಬೆಂಗಳೂರು, ಜೂ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ವಿಧಾನ ಪರಿಷತ್‍ನ ಮಾಜಿ ಸದಸ್ಯ ನಜೀರ ಅಹಮದ್, ರಾಜ್ಯಸಭೆ ಮಾಜಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಮಾದರಿಯಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೂಚಿಸಿದ ಹೆಸರಗಳನ್ನು ಹೊರತು ಪಡಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಹೈಕಮಾಂಡ್‍ಗೆ ಮಣೆ …

Read More »