ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್ಪಿ ಹಣ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »ಲಾಕ್ಡೌನ್ನಿಂದ ಆರತಕ್ಷತೆ ಕ್ಯಾನ್ಸಲ್- 225 ಆಹಾರ ಕಿಟ್ಗಳನ್ನು ವಿತರಿಸಿದ ಜೋಡಿ…….
ಲಕ್ನೋ: ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಒಕ್ಕರಿಸುತ್ತಿದ್ದಂತೆಯೇ ದೇಶದಲ್ಲಿ ಲಾಕ್ ಡೌನ್ ಹೇರಲಾಗಿದೆ. ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬಡವರು, ನಿರ್ಗತಿಕರಿಗೆ ದಾನಿಗಳು ಸಹಾಯ ಮಾಡಿ ಮಾನೀವಯತೆ ಮೆರೆದಿದ್ದಾರೆ. ಅನೇಕ ಸಮಾರಂಭಗಳು ಕೂಡ ಲಾಕ್ ಡೌನ್ ಪರಿಣಾಮ ರದ್ದಾವು. ಹಾಗೆಯೇ ಉತ್ತರಪ್ರದೇಶದ ಬರೇಲಿಯಲ್ಲಿ ಆರತಕ್ಷತೆ ಸಮಾರಂಭವೊಂದು ಕ್ಯಾನ್ಸಲ್ ಆದ ಪರಿಣಾಮ ಜೋಡಿ ಆಹಾರ ಕಿಟ್ ಗಳನ್ನು ನೀಡುವ ಮೂಲಕ ಬಡವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದಾರೆ. ಹೌದು. ಜೋಡಿ …
Read More »ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಪ್ರಕರಣ- ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ…
ಮೈಸೂರು: ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ. ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಗುಂಡುಗಳು ನಾಪತ್ತೆಯಾಗಿದ್ದವು. 303 ಮಾದರಿ ಬಂದೂಕಿನ ಗುಂಡುಗಳು ನಾಪತ್ತೆಯಾಗಿದ್ದವು. ಗುಂಡುಗಳು ಹೇಗೆ ನಾಪತ್ತೆಯಾಗಿವೆ ಎಂಬುದು ಪತ್ತೆಯಾಗಿಲ್ಲ. ಈ ಸಂಬಂಧ ಎಸ್ಪಿ ಸಿ.ಬಿ.ರಿಷ್ಯಂತ್ ಇಬ್ಬರನ್ನು ಅಮಾನತುಗೊಳಿಸಿದ್ದರು. ಇದೀಗ ಕಪಿಲಾ ನದಿಯಲ್ಲಿ ಗುಂಡುಗಳು ಪತ್ತೆಯಾಗಿದೆ. ಮಾಹಿತಿ ಆಧಾರದ ಮೇರೆಗೆ ಕಪಿಲಾ ನದಿಯಲ್ಲಿ ಎಎಸ್ಪಿ …
Read More »ಹೆಂಡ್ತಿ ಮೇಲೆ ಕಣ್ಣು ಹಾಕ್ತಾನೆ ಅಂತ ಅಣ್ಣನನ್ನೇ ಕೊಂದ ತಮ್ಮ…….
ಚಿಕ್ಕಬಳ್ಳಾಪುರ: ಮಲಗಿದ್ದ ಸಹೋದರನ ಕುತ್ತಿಗೆಯನ್ನ ತಮ್ಮ ಮಧ್ಯರಾತ್ರಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೇ ಕುರಬರಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಆರೋಪಿ ಸುರೇಶ್ ಸಹೋದರ ರಮೇಶ್ (32)ನನ್ನು ಕೊಲೆ ಮಾಡಿದ್ದಾನೆ. ಮಂಗಳವಾರ ತಡರಾತ್ರಿ ಆರೋಪಿ ಸುರೇಶ್ ಸಹೋದರನ ಜೊತೆ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿಕೊಂಡಿದ್ದು, ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದರು. ತದನಂತರ ಮನೆಯ ಹೊರಭಾಗದ ಪಾಯಕಲ್ಲಿನ ಮೇಲೆ ಮಲಗಿದ್ದ ಅಣ್ಣನನ್ನು ಮಧ್ಯರಾತ್ರಿ ಕೊಚ್ಚಿ ಕೊಲೆ …
Read More »ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್
ಬೆಂಗಳೂರು: ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಹಿರಿಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹಿರಿಯ ನಾಯಕರ ಕಾಲೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. …
Read More »3 ತಿಂಗಳಾದ್ರೂ ಬಾರದ 3 ಸಾವಿರ ಪ್ರೋತ್ಸಾಹ ಧನ- ಆಶಾ ಕಾರ್ಯಕರ್ತೆಯರು ಆಕ್ರೋಶ…..
ಕಲಬುರಗಿ/ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕಿಟ್ಟು ಸರ್ಕಾರ ನಿರ್ವಹಿಸಿದ ಕೆಲಸ ಮಾಡಿದ್ದಾರೆ. ಹೀಗಿದ್ದರು ಸಹ ರಾಜ್ಯ ಸರ್ಕಾರ ಘೋಷಿಸಿದ್ದ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಹಣ ಮಾತ್ರ ನೀಡಿಲ್ಲ ಎಂದು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 44-45 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ಇದ್ದರೂ ಮನೆ ಮನೆಗೆ ಹೋಗಿ ಸರ್ವೇ ಮಾಡಿದ್ದೆವೆ. ಮನೆಯಲ್ಲಿದವರಿಗೇ ಕ್ವಾರಂಟೈನ್ ಹಾಗೂ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಸಾಗಿಸುವ …
Read More »ಮಾಲೀಕರ ಕಿರುಕುಳ- ಬೀದಿಗೆ ಬಿದ್ದ ಪಿಜಿ ನಿವಾಸಿಗಳು
ಬೆಂಗಳೂರು: ಕೊರೊನಾ ಹೆಮ್ಮಾರಿಗೆ ಇಡೀ ರಾಜ್ಯವೇ ತತ್ತರಿಸಿದೆ. ರಾಜ್ಯಕ್ಕೆ ರಾಜ್ಯವೇ ಲಾಕ್ ಡೌನ್ ನಿಂದ ಸ್ಥಬ್ಧಗೊಂಡಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರ ಬೆಂಗಳೂರಿನಲ್ಲಿ ಪಿಜಿ ಮಾಲೀಕರು ಘರ್ಜಿಸ್ತಿದ್ದಾರೆ. ಪಿಜಿ ನಿವಾಸಿಗಳಿಗೆ ಹಣ ಪಾವತಿ ಮಾಡುವಂತೆ ಕಿರುಕುಳ ನೀಡ್ತಿದ್ದಾರೆ. ಪಿಜಿ ಮಾಲೀಕರ ಕಿರುಕುಳ ವಿರುದ್ಧ ಪಬ್ಲಿಕ್ ಟಿವಿ ಮೆಗಾ ಅಭಿಯಾನ ಶುರು ಮಾಡಿದೆ. ಹೌದು. ಕೊರೊನಾ ತಂದ ಅವಾಂತರ ಅಷ್ಟಿಷ್ಟಲ್ಲ. ಬೆಂಗಳೂರಿನ ಪಿಜಿಗಳಲ್ಲಿ ನೆಲೆಸಿದ್ದ ಯುವಕ-ಯುವತಿಯರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಪಿಜಿ …
Read More »ತಮಿಳುನಾಡಿನಲ್ಲಿ ಡಿಎಂಕೆ ಶಾಸಕನನ್ನೇ ಬಲಿ ಪಡೆದ ಕಿಲ್ಲರ್ ಕೊರೊನಾ.!
ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ …
Read More »ರೋಗ ನಿರೋಧ ಶಕ್ತಿ ಹೆಚ್ಚಿಸುವಂತಹ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ………
ತುಮಕೂರು: ಇಡೀ ದೇಶವೇ ಮಹಾಮಾರಿ ಕೊರೊನಾ ವೈರಸ್ನಿಂದ ತತ್ತರಗೊಂಡಿದೆ. ಇದುವರೆಗೂ ಕೊರೊನಾ ವೈರಸ್ಗೆ ಸೂಕ್ತವಾದ ಔಷಧಿ ಸಿಗಲಿಲ್ಲ. ಸದ್ಯಕ್ಕೆ ತುಮಕೂರು ಜಿಲ್ಲೆಯ ರೈಸ್ ಮಿಲ್ ಒಂದರಲ್ಲಿ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ. ಈ ಅಕ್ಕಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ. ಆಯುರ್ವೇದಿಕ್ ರೈಸ್ ಎಂದು ಇದರ ಹೆಸರು. ನೈಸರ್ಗಿಕವಾದಂತಹ ವಸ್ತುಗಳನ್ನು ಈ ಅಕ್ಕಿಯಲ್ಲಿ ಬೆರೆಸಿ ತಯಾರು ಮಾಡಲಾಗುತ್ತದೆ. ಈ ರೈಸ್ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಲಿದೆ ಎನ್ನಲಾಗಿದೆ. …
Read More »
Laxmi News 24×7