Breaking News

ಜಿಲ್ಲೆ

ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸರಕಾರಕ್ಕೆ ಮನವಿ………….

ಚಿಕ್ಕೋಡಿ:  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸುಪ್ರಿಂಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರಕಾರ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ನೀಡುವಂತೆ ಒತ್ತಾಯಿಸಿ ಮಂಗಳವಾರ ಮೂಲ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಲಂಬಾಣಿ(ಬಂಜಾರ), ಭೋವಿ, ಕೊರಚ ಕೊರಮ ಮುಂತಾದ ಸಮುದಾಯದ ಜನರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯಲು ಸುಪ್ರಿಂಕೋರ್ಟ್ ಆದೇಶ ಮಾಡಿರುತ್ತದೆ. ಆದ್ದರಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಸುಪ್ರಿಂಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು.ಸುಪ್ರಿಂಕೋರ್ಟಿಗೆ ಅನುಪಾಲನ …

Read More »

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.  ರಾಜ್ಯಸಭೆ ಟಿಕೇಟ್ ವಿಚಾರವಾಗಿ ನಡೆದ ಬೆಳಗಾವಿ ಜಿಲ್ಲೆಯ ನಾಯಕರ ಗುದ್ದಾಟ ರಾಜ್ಯ ರಾಜಕೀಯವನ್ನೆ ತಲ್ಲಣಗೊಳಿಸುವ ಮಟ್ಟಿಗೆ ಬಂದಿತ್ತು. ಅಂತಿಮವಾಗಿ ಇಬ್ಬರ ಜಗಳಗಳಲ್ಲಿ ಮೂರನೇಯವರು ಟಿಕೆಟ್ ಗಿಟ್ಟಿಸಿಕೊಂಡಿದ್ದು ಆಯಿತು.  ಈಗ ರಾಜ್ಯಸಭೆ ಟಿಕೇಟ್ ವಂಚಿತರಾಗಿರುವ ರಮೇಶ ಕತ್ತಿ ಮತ್ತು ಅವರಿಗಾಗಿ ತೀವ್ರ ಲಾಬಿ ನಡೆಸಿದ್ದ ಸಹೋದರ ಉಮೇಶ ಕತ್ತಿ ಅವರಿಗೆ ಇಂದು ನಳೀನ್ …

Read More »

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಈರಣ್ಣಾ ಕಡಾಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. 

ಬೆಂಗಳೂರು: ಜೂ. 19 ರಂದು ನಡೆಯಲಿರುವ  ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಈರಣ್ಣಾ ಕಡಾಡಿ ಅವರು ಇಂದು ನಾಮಪತ್ರ ಸಲ್ಲಿಸಿದರು.  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ , ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಸಮ್ಮುಖದಲ್ಲಿ ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ  ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.   ಇದೇ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ …

Read More »

ಮುಂಬೈಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡಲು ಸಿಎಂ ಗಮನಕ್ಕೆ ತರುತ್ತೇವೆ: ಸಚಿವ ಗೋಪಾಲಯ್ಯ

ಹಾಸನ: ಬಾಂಬೆಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಹೊರರಾಜ್ಯದಿಂದ ಬಂದವರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮುಂಬೈಯಿಂದ ಬಂದವರನ್ನು ಕ್ವಾರಂಟೈನ್‍ನಲ್ಲಿ ಇಟ್ಟು ನೆಗೆಟಿವ್ ವರದಿ ಬಂದ ನಂತರವೇ ಮನೆಗೆ ಕಳುಹಿಸಲಾಗುವುದು. ಹೊರರಾಜ್ಯದಿಂದ ಬಂದವರನ್ನು ಈಗ ಏಳು ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. …

Read More »

ದೆಹಲಿಯಲ್ಲಿ ಕೊರೊನಾ ಸ್ಫೋಟ – ಜುಲೈ ಅಂತ್ಯಕ್ಕೆ 5.5 ಲಕ್ಷ ಜನರಿಗೆ ಸೋಂಕು……….

ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ವೇಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದೆಂದು ಡಿಸಿಎಂ ಮನೀಶ್ ಸಿಸೋಡಿಯಾ ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ …

Read More »

ಇಲಾಖೆ ಹೇಳೋದು ಒಂದು, ಆರೋಗ್ಯ ಸಚಿವರು ಹೇಳೋದು ಮತ್ತೊಂದು……..

ಉಡುಪಿ: ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸರ್ಕಾರಿ ಕ್ವಾರಂಟೈನ್ ಕಡ್ಡಾಯ ಎಂದು ಸೋಮವಾರವಷ್ಟೇ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರು ಇನ್ನು ಮುಂದೆ ಸರ್ಕಾರಿ ಕ್ವಾರಂಟೈನ್ ಇರಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಜನ ಆರೋಗ್ಯ ಇಲಾಖೆಯನ್ನು ನಂಬಬೇಕಾ ಅಥವಾ ಆರೋಗ್ಯ ಸಚಿವರನ್ನು ನಂಬಬೇಕಾ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ. ಹೌದು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. …

Read More »

ಕಾಂಗ್ರೆಸ್‍ಗೆ ಭವಿಷ್ಯ ಇಲ್ಲವೆಂದು ಈಗಾಗಲೇ ಮನೆಗೆ ಕಳಿಸಿದ್ದಾರೆ: ಸಿದ್ದರಾಮಯ್ಯಗೆ ಶೆಟ್ಟರ್ ತಿರುಗೇಟು

ಧಾರವಾಡ: ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಇಗಾಗಲೇ ಮನೆಗೆ ಕಳಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಪಕ್ಷದಿಂದ ರಾಜ್ಯದ ಜನರಿಗೆ ಭವಿಷ್ಯ ಇಲ್ಲ ಎಂದು ಧಾರವಾಡದಲ್ಲಿ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್‍ಗೆ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಭವಿಷ್ಯ ಇಲ್ಲ. ರಾಹುಲ್ ಗಾಂಧಿ ಅವರಂಥ …

Read More »

ಕಿಮ್ಸ್ ವೈದ್ಯರ ಜೊತೆ ಕೊರೊನಾ ಚಿಕಿತ್ಸೆ ಬಗ್ಗೆ ಬೊಮ್ಮಾಯಿ ಚರ್ಚೆ……….

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ನಿಯೋಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಭೇಟಿ ಮಾಡಿ, ಕೋವಿಡ್-19 ಕುರಿತು ಚರ್ಚಿಸಿದರು. ಕಿಮ್ಸ್ ಆಸ್ಪತ್ರೆ ವೈದ್ಯರ ತಂಡ ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಕಿಮ್ಸ್‍ಗೆ ಅನುಮತಿ ನೀಡಿದೆ. ಹೀಗಾಗಿ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮನವಿಯನ್ನು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರ ನೇತೃತ್ವದ ತಂಡ ಗೃಹ ಸಚಿವರಿಗೆ ಸಲ್ಲಿಸಿದೆ. ಮನವಿಯನ್ನು …

Read More »

ಹದ್ದು ಮೀರಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಸಭೆ

ನವದೆಹಲಿ,ಜೂ.9- ದೇಶದೆಲ್ಲೆಡೆ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಆತಂಕ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇಂದು ಮಹತ್ವದ ಸಭೆ ನಡೆಸಿ ಹೆಮ್ಮಾರಿಯ ಪರಿಣಾಮಕಾರಿ ನಿಗ್ರಹಕ್ಕಾಗಿ ಅಗತ್ಯವಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಿತು. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ನೇತೃತ್ವದಲ್ಲಿ ಸಚಿವರ ಸಮೂಹದ ಸಭೆ ಜರುಗಿತು. ಈ ಸಭೆಯಲ್ಲಿ ಕೊರೊನಾ ಉಲ್ಭಣದ ಬಗ್ಗೆ ಆತಂಕ ವ್ಯಕ್ತಪಡಿಸಿ ಈ ಮಹಾಮಾರಿಯನ್ನು ನಿಯಂತ್ರಿಸುವ ಮಾರ್ಗೋಪಾಯಗಳ ಬಗ್ಗೆ ಗಹನ …

Read More »

ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ:B.S.Y.

ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೆಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ವರಿಷ್ಠರು ನನ್ನ ಜೊತೆ ಮಾತನಾಡಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿದೆ ಎಂದು ಹೇಳಿದರು. ಅದರಂತೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ …

Read More »