ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್ನ ವ್ಯವಸ್ಥಾಪಕ ನಿರ್ದೇಶಕ ಮೋಹನ್ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …
Read More »‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ
ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …
Read More »ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….
ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …
Read More »ಸಾಂಸ್ಥಿಕ ಕ್ವಾರಂಟೈನ್ ಬೇಡ, ಮಲೆನಾಡಲ್ಲಿ ಹೋಂಕ್ವಾರಂಟೈನ್ ಮಾಡಿ: ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮುಂಬೈ ಸೇರಿದಂತೆ ಬೇರೆ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಜನ ಬರುತ್ತಿದ್ದಾರೆ. ಇಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಉಡುಪಿ-ಚಿಕ್ಕಮಗಳೂರು ಎರಡೂ …
Read More »ಮಹಾರಾಷ್ಟ್ರದ ನಂಟು – ಒಂದೇ ಕುಟುಂಬದ ಐವರಿಗೆ ಕೊರೊನಾ………
ರಾಯಚೂರು: ಜಿಲ್ಲೆಗೆ ಮಹಾರಾಷ್ಟ್ರದ ನಂಟಿನ ಶಾಪ ಇನ್ನೂ ಮುಗಿದಿಲ್ಲ. ಇಂದು ಹೊಸ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಮೇ 16 ರಂದು ಮುಂಬೈನಿಂದ ಬಂದ ರಾಯಚೂರು ತಾಲೂಕಿನ ಕೊರ್ವಿಹಾಳದ ಒಂದೇ ಕುಟುಂಬದ ಐದು ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ದೇವಸುಗೂರಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ ಐವರನ್ನ ರಾಯಚೂರಿನ ಓಪೆಕ್ ಆಸ್ಪತ್ರೆ ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. ಐವರಲ್ಲಿ ಮೂವರು ಮಕ್ಕಳಿದ್ದಾರೆ. 12 …
Read More »ತೆಲಂಗಾಣ, ಮುಂಬೈನಿಂದ ಧಾರವಾಡಕ್ಕೆ ಬಂದಿರೋ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ
ಧಾರವಾಡ: ಹೊರ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಆಗಮಿಸಿದ ಐವರಲ್ಲಿ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದ್ದು, ಅವರನ್ನು ರೋಗಿ ಸಂಖ್ಯೆ-1505, ರೋಗಿ ಸಂಖ್ಯೆ-1506, ರೋಗಿ ಸಂಖ್ಯೆ-1507, ರೋಗಿ ಸಂಖ್ಯೆ-1508 ಹಾಗೂ ರೋಗಿ ಸಂಖ್ಯೆ-1509 ಎಂದು ಗುರುತಿಸಲಾಗಿದೆ. ಈ ಐದು ಜನರ ಪ್ರಯಾಣದ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ರೋಗಿ ಸಂಖ್ಯೆ-1505 ಹಾಗೂ ರೋಗಿ ಸಂಖ್ಯೆ-1506 ಸಂಖ್ಯೆ ರೋಗಿಗಳು ಹುಬ್ಬಳ್ಳಿ ಶಹರದ ಹಳೆ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಇವರು ಕಳೆದ ಮಾರ್ಚ್ನಲ್ಲಿ ಹುಬ್ಬಳ್ಳಿಯಿಂದ ವಿಜಯವಾಡ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖ..
ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಹಿರೇಬಾಗೇವಾಡಿ ಪಿ-483
Read More »ಮಂಡ್ಯ, ಉಡುಪಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಯಲ್ಲಿ 143 ಜನರಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಉಡುಪಿ 26, ಮಂಡ್ಯ 33, ಹಾಸನ 13, ಬಳ್ಳಾರಿ 11, ಬೆಂಗಳೂರು 6, ದಾವಣಗೆರೆ 3, ರಾಯಚೂರು ಹಾಗೂ ಧಾರವಾಡದಲ್ಲಿ ತಲಾ 5, ಉತ್ತರ ಕನ್ನಡ 7, ಶಿವಮೊಗ್ಗ …
Read More »ಎಣ್ಣೆ ಮುಗಿತು ಈಗ ತಂಬಾಕಿಗೂ ಕ್ಯೂ!
ಬಳ್ಳಾರಿ: ನಾಲ್ಕನೆಯ ಹಂತದ ಲಾಕ್ಡೌನ್ ಸಡಿಲಿಕೆ ಹಿನ್ನೆಲೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಎಣ್ಣೆ ಆಯ್ತು ಈಗ ಜಗಿಯುವ ತಂಬಾಕು ಖರೀದಿಗೂ ಭಾರೀ ಪ್ರಮಾಣದ ಕ್ಯೂ ನಿಂತುಕೊಂಡು ಖರೀದಿಸಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಜಗಿಯುವ ತಂಬಾಕು ಉತ್ಪನ್ನಗಳಾದ ವಿಮಲ್, ಗುಟ್ಕಾ ಡೀಲರ್ ಅಂಗಡಿಗಳ ಮುಂದೆ ಇಂದು ನೂರಾರು ಮಂದಿ ನಿಂತಿದ್ದರು. ಬೆಳಗ್ಗೆ 5 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತ ಜನರು ಗುಟ್ಕಾ ಖರೀದಿಸಿದ್ದಾರೆ. ಒಬ್ಬರಿಗೆ 2 …
Read More »ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.
ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …
Read More »
Laxmi News 24×7