ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …
Read More »ಬೆಳಗ್ಗೆಯ ಬಸ್ಗೆ ಜನರು ರಾತ್ರಿಯೆಲ್ಲಾ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ….
ಬೆಂಗಳೂರು: ಬೆಳಗ್ಗೆಯ ಬಸ್ಗೆ ಜನರು ರಾತ್ರಿ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ಕಳೆದಿದ್ದಾರೆ. ಸಂಜೆ ಆರು ಗಂಟೆಗೆ ಬಂದ ಬಹುತೇಕ ಜನಕ್ಕೆ ಬಸ್ ಸಿಕ್ಕಿರಲಿಲ್ಲ. ಇನ್ನು ವಾಪಸ್ ಮನೆಗೆ ಹೋಗಲು ಯಾವುದೇ ವಾಹನದ ವ್ಯವಸ್ಥೆ ಇಲ್ಲ. ಹಾಗಾಗಿ ಜನ ಬಸ್ ನಿಲ್ದಾಣದಲ್ಲಿಯೇ ರಾತ್ರಿ ಕಳೆದಿದ್ದಾರೆ. ಒಂದು ಬಸ್ ಗೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಹಾಗಾಗಿ ಬಸ್ ಸಿಗದಿದ್ದರೆ ಹೇಗೆ ಅಂತ ಬಹುತೇಕರು ಪ್ರಯಾಣಿಕರು ನಿಲ್ದಾಣದಲ್ಲಿಯೇ ಇರುವಂತಾಯ್ತು. …
Read More »ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ
ಬೆಂಗಳೂರು: ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ರೈಲುಗಳ ಸೇವೆ ಮೇ 22ರಿಂದ ಆರಂಭವಾಗಲಿದ್ದು, ಭಾರತೀಯ ರೈಲ್ವೇ ವೆಬ್ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಈ ರೈಲುಗಳನ್ನು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ನಿಲ್ದಾಣದಲ್ಲಿನ ಕೌಂಟರ್ ಗಳಲ್ಲಿ ಟಿಕೆಟ್ ನೀಡುವುದಿಲ್ಲ. ಭಾನುವಾರ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸೋಮವಾರ, ಬುಧವಾರ, …
Read More »ಬಸ್ಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಹಲವೆಡೆ ತಮ್ಮ ಊರಿಗೆ ತೆರಳಲು ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಿದ ಮೂರನೇ ದಿನವೂ ಸಮಸ್ಯೆಯಾಗುತ್ತಿದ್ದು, ಕೆಲವೆಡೆ ಪ್ರಯಾಣಿಕರಿಲ್ಲದೆ ಬಸ್ಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಹಲವೆಡೆ ತಮ್ಮ ಊರಿಗೆ ತೆರಳಲು ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಪ್ರತಿ ದಿನ ಪ್ರಯಾಣಿಕರು ವಿವಿಧೆಡೆಗೆ ತೆರಳಲು ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮುಗಿಬೀಳುತ್ತಿದ್ದಾರೆ. ಗುರುವಾರ ಬೆಳಗ್ಗೆ ಸಹ ರಸ್ತೆಯುದ್ದಕ್ಕೂ ಜನ ಸಾಲುಗಟ್ಟಿ ನಿಂತಿದ್ದರು. ಮಕ್ಕಳು, ಮಹಿಳೆಯರು ಸೇರಿದಂತೆ ಪ್ರಯಾಣಿಕರೆಲ್ಲರೂ ಥಮರ್ಲ್ ಟೆಸ್ಟಿಂಗ್ಗಾಗಿ ಬಸ್ ನಿಲ್ದಾಣದ ಮುಂಭಾಗ ಸಾಲುಗಟ್ಟಿ …
Read More »ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ……..
ಕೋಲಾರ: ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಲಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹರೀಶ್(32) ಕೊಲೆಯಾದ ವ್ಯಕ್ತಿ, ಹೊಡೆತದ ರಭಸಕ್ಕೆ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರೋಪಿಗಳು ಬೃಹತ್ ಕಲ್ಲನ್ನು ಎತ್ತಿ ಹಾಕಿದ್ದಾರೆ. ಅಲ್ಲದೆ ಘಟನೆ ನಂತರ ಕಲ್ಲನ್ನು ಸ್ಥಳದಲ್ಲಿ ಬಿಡದೆ ಅದನ್ನೂ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದು, …
Read More »ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕೀಟಗಳನ್ನು ನೀಡುತ್ತಿದ್ದಾರೆ.
ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …
Read More »ಇಂದು ಇಬ್ಬರು ಕೊವಿಡ್ ಸೊಂಕೀತರು ಗುಣಮುಖ, ಬಿಡುಗಡೆ: ಕುಡಚಿ ಪಟ್ಟಣ ಈಗ ಕೋರಾನಾ ಮುಕ್ತ
ಬೆಳಗಾವಿ:ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದಬಿಡುಗಡೆಮಾಡಲಾಗಿದೆ. ಈ ಮೂಲಕ ಈಗ ಕುಡಚಿ ಪಟ್ಟಣ ಕೊರೋನಾ ಮುಕ್ತವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಒಟ್ಟು ಹದಿನೆಂಟು ಕೊರೋನಾ ಸೊಂಕೀತರ ಪತ್ತೆಯಾಗಿದ್ದರು. ಇವತ್ತು ಇಬ್ಬರು ಗುಣಮುಖರಾದ ಬಳಿಕ ಮನೆಗೆ ಸೇರಿದ್ದು …
Read More »ನಾಳೆಯಿಂದ ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಆರಂಭ
ಬೆಂಗಳೂರು, ಮೇ 20- ನಾಳೆಯಿಂದ ದ್ವಿತೀಯ ಪಿಯುಸಿಯ ಉತ್ತರಪತ್ರಿಕೆಗಳ ಮೌಲ್ಯಮಾಪನವು ಆಯ್ದ ಕೇಂದ್ರಗಳಲ್ಲಿ ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ಇಂಗ್ಲೀಷ್ ಹೊರತುಪಡಿಸಿ ಇತರ ಪತ್ರಿಕೆಗಳ ಮೌಲ್ಯಮಾಪನವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿದೆ. ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯ ದಿನಾಂಕ ಜೂನ್ 18ಕ್ಕೆ ನಿಗದಿಪಡಿಸಲಾಗಿದ್ದು, ಪರೀಕ್ಷೆಗೂ ಮುನ್ನವೇ ಮೌಲ್ಯಮಾಪನ ಪೂರ್ಣಗೊಳಿಸಲು ಇಲಾಖೆ ಉದ್ದೇಶಿಸಿದೆ ಎಂದು ತಿಳಿದುಬಂದಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕೃತವಾಗಿ ಮೌಲ್ಯಮಾಪನಕ್ಕೆ ಯಾವುದೇ ರೀತಿಯ …
Read More »ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಏಳು ತಿಂಗಳ ಗರ್ಭಿಣಿ ನರಳಾಟ……….
ಉಡುಪಿ: ಮಹಾರಾಷ್ಟ್ರದಿಂದ ಉಡುಪಿಗೆ ಹೊರಟ 7 ತಿಂಗಳ ಗರ್ಭಿಣಿ ಕಳೆದ ಎರಡು ದಿನದಿಂದ ಕರ್ನಾಟಕದ ಗಡಿಯಲ್ಲಿ ನರಳಾಟ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾಧಿಕಾರಿಯ ಅನುಮತಿಗಾಗಿ ಬೆಳಗಾವಿ ಪೊಲೀಸರು ಕಾಯುತ್ತಿದ್ದಾರೆ. ಮಹಾರಾಷ್ಟ್ರದಿಂದ ಮೂರು ದಿನದ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 30 ಜನ ಹೊರಟಿದ್ದರು. ಮಹಾರಾಷ್ಟ್ರದ ಪಾಸ್ ಪಡೆದಿದ್ದ ಈ ಗುಂಪು, ಕರ್ನಾಟಕ ಪ್ರವೇಶದ ಸೇವಾಸಿಂಧು ಪಾಸ್ ಪಡೆದಿರಲಿಲ್ಲ. ಹಾಗಾಗಿ ರಾಜ್ಯದೊಳಗೆ ಪ್ರವೇಶ ಸಾಧ್ಯವಾಗುತ್ತಿಲ್ಲ. ನಿಪ್ಪಾಣಿಯಲ್ಲಿ ಕಳೆದ ಎರಡು ದಿನಗಳಿಂದ …
Read More »ಇಂದು 67 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 1,462ಕ್ಕೆ
ಬೆಂಗಳೂರು: ರಾಜ್ಯದ ಜನರಿಗೆ ಮಂಗಳವಾರ ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿತರ ಸಂಖ್ಯೆಯು ಇಂದು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 67 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಇಂದು ಹಾಸನ 21, ಬೀದರ್ 10, ಮಂಡ್ಯ 8, ಉಡುಪಿ 6, ಕಲಬುರಗಿ 7, ಬೆಂಗಳೂರು, ತುಮಕೂರು, ರಾಯಚೂರಿನಲ್ಲಿ ತಲಾ 4, ಉತ್ತರ ಕನ್ನಡ, ದಕ್ಷಿಣ ಕನ್ನಡ, …
Read More »
Laxmi News 24×7