Breaking News

ಜಿಲ್ಲೆ

ಬೆಳಗಾವಿ: ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯: 5 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಮೇ 12 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮೂವರು ಮಹಿಳೆಯು ಸೇರಿದಂತೆ ಒಟ್ಟು ಐದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಐದು ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-482 ಪಿ-485 …

Read More »

ಉಡುಪಿಯಲ್ಲಿ ನಾಳೆಯಿಂದ ಖಾಸಗಿ, ಸರ್ಕಾರಿ ಬಸ್ ಸಂಚಾರ ಆರಂಭ…..

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ. ಜನತಾ ಕಫ್ರ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ. ಇದೀಗ ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ …

Read More »

ಕೊರೊನಾ ವಾರಿಯರ್ಸ್‍ಗೆ ಪಾದ ಪೂಜೆ ಮಾಡಿ ದಾದಿಯರ ದಿನಾಚರಣೆ ಆಚರಣೆ

ಹಾವೇರಿ: ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವಾರಿಯರ್ಸ್ ಕಾಲು ತೊಳೆದು, ಕುಂಕುಮ ಹಚ್ಚಿ, ಪೂಜೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ದಾದಿಯರಿಗೆ ಗ್ರಾಮದ ವಿಶ್ವನಾಥ ಹಿರೇಮಠ ಮತ್ತು ಕೃಷ್ಣ ಈಳಿಗೇರ ಸ್ನೇಹ ಬಳಗದ ವತಿಯಿಂದ ಪಾದ ಪೂಜೆ ನೆರವೇರಿಸಲಾಗಿದೆ. ಈ ಮೂಲಕ ಸ್ನೇಹ ಬಳಗದ ಸದಸ್ಯರು ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ. …

Read More »

ಹೆಚ್ಚು ಎಣ್ಣೆ ಕುಡಿದಿದ್ದಕ್ಕೆ ಗೆಳೆಯನ್ನ ಕೊಂದವರು ಅಂದರ್…………

ಬೆಂಗಳೂರು: ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದ ಗೆಳೆಯನನ್ನು ಕೊಂದ ಇಬ್ಬರನ್ನು ಬಂಧಿಸುವಲ್ಲಿ ಬೆಂಗಳೂರಿನ ಆರ್.ಟಿ.ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 4ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 6ರಂದು ಮದ್ಯ ಖರೀದಿಸಿ ರಾಜೇಶ್, ಸುಜಿತ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಪಾರ್ಟಿ ಮಧ್ಯೆ ಹೆಚ್ಚು ಮದ್ಯ ತಮಗೆ ಬೇಕೆಂದು ಮೂವರು ಕಿತ್ತಾಡಿಕೊಂಡಿದ್ದಾರೆ. ಮದ್ಯ ಖರೀದಿಗೆ ಕಿಶೋರ್ ಹೆಚ್ಚು ನೀಡಿಲ್ಲ ಎಂದು ರಾಜೇಶ್ ಮತ್ತು ಸುಜಿತ್ ಕಿಡಿಕಾರಿದ್ದಾರೆ. …

Read More »

ಕರ್ನಾಟಕಕ್ಕೆ ಕಾದಿದೆ ದೊಡ್ಡ ಗಂಡಾತರ..? ಬೆಂಗಳೂರಿನ ಮೇಲೆ ಕೊರೋನಾ ಕಾರ್ಮೋಡ…!

ಬೆಂಗಳೂರು, ಮೇ 12- ರಾಜಧಾನಿ ಬೆಂಗಳೂರಿಗೆ ಹೊಸ ಕಂಟಕ ಎದುರಾಗಿದೆ. ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಮಹಾಮಾರಿ ಕೊರೊನಾ ದಶದಿಕ್ಕುಗಳಿಂದಲೂ ಆವರಿಸುವ ಆತಂಕ ಪ್ರಾರಂಭವಾಗಿದೆ. ಹೊರರಾಜ್ಯಗಳಿಂದ ನಗರಕ್ಕೆ ಸುಮಾರು 30 ಸಾವಿರಕ್ಕೂ ಹೆಚ್ಚು ಕನ್ನಡಿಗರು ಬರುತ್ತಿದ್ದು, ಅವರನ್ನು ಕ್ವಾರಂಟೈನ್ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿಗೆ ವಿವಿಧೆಡೆಯಿಂದ ಬರುತ್ತಿರುವ 30 ಸಾವಿರ ಜನರನ್ನು ನಿಭಾಯಿಸುವುದು ಹೇಗೆ, ಕ್ವಾರಂಟೈನ್ ಮಾಡುವುದು ಹೇಗೆ ಎಂಬ ಟೆನ್ಷನ್ ಅಧಿಕಾರಿಗಳಿಗೆ ಪ್ರಾರಂಭವಾಗಿದೆ. ಇವರಲ್ಲಿ ಸೋಂಕು ತಗುಲಿದವರು …

Read More »

“ಕೊರೋನಾ ಹೆಚ್ಚಾಗಲು ತಬ್ಲಿಘೀಗಳು ಕಾರಣರಲ್ಲ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದರೆ ಜನರ ಕಷ್ಟ ತೀರಲ್ಲ” : ಸಿದ್ದರಾಮಯ್ಯ

ಬೆಂಗಳೂರು, ಮೇ 12- ಕೊರೊನಾ ಸೋಂಕು ಹೆಚ್ಚಾಗಲು ತಬ್ಲಿಘೀಗಳು ಕಾರಣ ಎಂಬ ಆರೋಪದಲ್ಲಿ ಸತ್ಯವಿಲ್ಲ. ಕೋಮುವಾದಿಗಳು ಮತ್ತು ಆರ್‍ಎಸ್‍ಎಸ್‍ನವರು ರಾಜಕೀಯ ಕಾರಣಕ್ಕಾಗಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನಜೀವನವನ್ನು ಸುಧಾರಿಸಲು, ಸೋಂಕನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು. ಈವರೆಗೆ ನಾವು ಸರ್ಕಾರಕ್ಕೆ …

Read More »

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು

ಬೆಂಗಳೂರು : ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ಅವಧಿಯಲ್ಲಿ ರಾಜ್ಯದ 63 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.ಇದೇ ಮೊದಲ ಬಾರಿಗೆ ಹೆಚ್ಚು ರಾಜ್ಯದಲ್ಲಿ ಒಂದೇ ದಿನದಲ್ಲಿ ಸೋಂಕು ಕಾಣಿಸಿಕೊಂಡಿರುವುದು ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ …

Read More »

ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್‍ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ

ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ ಲಾಕ್ ಆಗಿದ್ದ ಕಾರ್ಮಿಕರು, ಜನರು ಇದೀಗ ತಮ್ಮ ತಮ್ಮ ಊರುಗಳತ್ತ ಬರುತ್ತಿದ್ದಾರೆ. ಇದೀಗ ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಬೇರೆಬೇರೆ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತ ಸರ್ಕಾರಿ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲು ಸಿದ್ಧತೆ …

Read More »

ಸಕ್ಕರೆ ನಾಡಿಗೆ ಮತ್ತೆ ಕೊರೊನಾ ಶಾಕ್ – ಜಿಲ್ಲೆಗೆ ತಲೆನೋವಾದ ಮುಂಬೈ ನಂಟು!

ಮಂಡ್ಯ: ಮಹಾಮಾರಿ ಕೊರೊನಾ ಅಬ್ಬರದಿಂದ ಸಕ್ಕರೆ ನಾಡು ದಿನೇ ದಿನೇ ಸುಧಾರಿಸಿಕೊಳ್ಳುವಷ್ಟರಲ್ಲೇ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ.  ಸೋಮವಾರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾತಂಕ ತಂದೊಡ್ಡಿದ್ದ ತಬ್ಲಿಘಿ ಹಾಗೇ ಜ್ಯುಬಿಲಿಯಂಟ್ ನಂಟಿಂದ ದಿನೇ ದಿನೇ ಮಂಡ್ಯ ಜಿಲ್ಲೆ ಸುಧಾರಿಸಿಕೊಳುತ್ತಿತ್ತು. ಆದರೆ ಈ ಮಧ್ಯೆ ಕೊರೊನಾ ಮತ್ತೆ ಜನರ ನಿದ್ದೆಗೆಡಿಸಿದೆ. ತಬ್ಲಿಘಿ, ಜ್ಯುಬಿಲಿಯಂಟ್ ಬಳಿಕ ಈ ಮುಂಬೈ ನಂಟು ಜಿಲ್ಲೆಯಲ್ಲಿ ಹೊಸದೊಂದು ತಲೆನೋವಾಗಿದೆ. ಸೋಮವಾರ ಪಾಸಿಟಿವ್ ಆಗಿರುವ ಎರಡು …

Read More »

ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹಾಟ್‍ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ …

Read More »