ಮೈಸೂರು: ಮೈಸೂರಿನಲ್ಲಿ ಕೊರೋನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅನಗತ್ಯವಾಗಿ ರಸ್ತೆಗೀಳಿದವರಿಗೆ ಜಿಲ್ಲಾಡಳಿತ ದಂಡ ವಿಧಿಸುತ್ತಿದೆ. ಮಧ್ಯಾಹ್ನ 12 ಗಂಟೆಯ ನಂತರ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತ ದಂಡ ವಿಧಿಸಲು ತೀರ್ಮಾನಿಸಿದೆ. ಆಸ್ಪತ್ರೆ, ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಉಳಿದ ವ್ಯವಹಾರಗಳಿಗೆ ನಿರ್ಬಂಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡಿದರೆ 2 ಸಾವಿರ ದಂಡ ವಿಧಿಸಲಾಗುತ್ತಿದೆ. ಈಗಾಗಲೇ 5 ಸಾವಿರ ವಾಹನಗಳನ್ನು ಸೀಜ್ ಮಾಡಿರುವ ಮೈಸೂರು ನಗರ …
Read More »ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ………….
ಬೆಂಗಳೂರು: ಬಹುತೇಕರಿಗೆ ಪೆಟ್ ಡಾಗ್ ಎಂದರೆ ಎಲ್ಲಿಲ್ಲದ ಪ್ರೀತಿ, ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಸಾಕಿರುತ್ತಾರೆ. ಅವುಗಳ ಜೊತೆ ಯಾವಾಗಲೂ ಕಾಲ ಕಳೆಯುತ್ತಿರುತ್ತಾರೆ. ಈ ಮೂಲಕ ಕೆಲಸದ ದಣಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ. ಹೀಗೆ ಸಾಕು ಪ್ರಾಣಿಗಳು ಅವರ ಜೀವನದ ಭಾಗವೇ ಆಗಿರುತ್ತವೆ. ಅದೇ ರೀತಿ ನಟಿ ಶುಭ ಪೂಂಜಾ ಸಹ ನಾಯಿಯನ್ನು ಸಾಕಿದ್ದರು. ಆದರೆ ಅದು ಈಗ ಸಾವನ್ನಪ್ಪಿದೆ. ನಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಶುಭ ಪೂಂಜ ಕೊರಗುತ್ತಿದ್ದಾರೆ. ಲಾಕ್ಡೌನ್ ಹಿನ್ನೆಲೆ ಮನೆಯಲ್ಲೇ ಇರುವ …
Read More »ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಸಿಎಂಗಳ ಪಟ್ಟಿಯಲ್ಲಿ ಬಿಎಸ್ವೈಗೆ 2ನೇ ಸ್ಥಾನ..!
ಬೆಂಗಳೂರು, ಮೇ 11-ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಹೆಚ್ಚು ಹಬ್ಬದಂತೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್.ಯಡಿಯೂರಪ್ಪನವರಿಗೆ ದೇಶದಲ್ಲೇ 2ನೇ ಸ್ಥಾನ ದೊರಕಿದೆ. ಟೈಮ್ಸ್ ನೌ ಹಾಗೂ ಓರೊ ಮಾಕ್ಸ್ ಜಂಟಿಯಾಗಿ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪೈಕಿ ದೆಹಲಿಯಲ್ಲಿ ಅರವಿಂದ್ ಕ್ರೇಜಿವಾಲ್ಗೆ ಮೊದಲ ಸ್ಥಾನ ಬಂದಿದ್ದರೆ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 2ನೇ ಸ್ಥಾನ ಸಿಕ್ಕಿದೆ. ಕೊರೊನಾ ಭಾರತಕ್ಕೆ ಅಧಿಕೃತವಾಗಿ ಕಾಲಿಟ್ಟ ನಂತರ ಅದನ್ನು ತಡೆಗಟ್ಟಲು ಪ್ರಧಾನಿ …
Read More »ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ಮೂವರಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಬೆಂಗಳೂರು, ಮೇ 11- ಮೂರು ಮಂದಿ ದರೋಡೆಕೋರರನ್ನು ಸಾರ್ವಜನಿಕರೇ ಹಿಡಿದು ಸಿದ್ದಾಪುರ ಪೊಲೀಸರ ವಶಕ್ಕೆ ನೀಡಿದ್ದಾರೆ.ಸಿದ್ದಾಪುರ ಠಾಣೆ ಪೊಲೀಸರು ಈ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಾ ಲೇಔಟ್ನ ಸಯ್ಯದ್ ನದೀಮ್ (23), ಮಾಗಡಿ ರಸ್ತೆಯ ಚೌಳರಪಾಳ್ಯ ರಾಮದಾಸ್ ಲೇಔಟ್ನ ಇರ್ಫಾನ್ ಪಾಷ (20) ಮತ್ತು ಪಾದರಾಯನಪುರದ ಮೌಶಾಕ್ ಅಹಮ್ಮದ್ (44) ಪೊಲೀಸರ ವಶದಲ್ಲಿರುವ ಆರೋಪಿಗಳು. ಈ ಮೂವರು ಹೊಸೂರು ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೊಬ್ಬರ …
Read More »ಮೊಬೈಲ್ ಫೀವರ್ ಕ್ಲಿನಿಕ್ಗೆ ಚಾಲನೆ ನೀಡಿದ ಸಿಎಂ …………
ಬೆಂಗಳೂರು,ಮೇ 11- ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನ ನಾಲ್ಕು ವಿಭಾಗಗಳಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡಲಿದ್ದು, ಈಗಾಗಲೇ ಮೈಸೂರು, ಮಂಗಳೂರಲ್ಲಿ ಈ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು. ನಾಲ್ಕು ಬಸ್ಗಳಲ್ಲಿ ಸಂಚಾರ ಮಾಡಲಿರುವ ಮೊಬೈಲ್ ಫೀವರ್ ಕ್ಲಿನಿಕ್ಗಳಲ್ಲಿ ಯಾರಿಗಾದರೂ ಅನಾರೋಗ್ಯ ಕಂಡುಬಂದರೆ ಇಲ್ಲಿ ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ …
Read More »ಕಾಲ್ನಡಿಗೆಯಲ್ಲಿ ಮಧ್ಯಪ್ರದೇಶ, ಬಿಹಾರಕ್ಕೆ ಹೊರಟಿದ್ದ ಕಾರ್ಮಿಕರಿಗೆ ಆಶ್ರಯ
ಧಾರವಾಡ/ಹುಬ್ಬಳ್ಳಿ: ಕಾಲ್ನಡಿಗೆ ಮೂಲಕ ಮಧ್ಯಪ್ರದೇಶ ಹಾಗೂ ಬಿಹಾರಕ್ಕೆ ಹೊರಟಿದ್ದ 70 ಜನ ವಲಸೆ ಕಾರ್ಮಿಕರಿಗೆ ಇಂದು ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪದ ಬಳಿಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಾರ್ಮಿಕರು ಕಾಲ್ನಡಿಗೆ ಮೂಲಕ ತಮ್ಮ ರಾಜ್ಯಗಳಿಗೆ ಹೊರಟಿರುವ ವಿಷಯ ತಿಳಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಎಲ್ಲರಿಗೂ ಆಶ್ರಯ ಕಲ್ಪಿಸುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿವೈಎಸ್ ಪಿ ರವಿ ನಾಯಕ್ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. …
Read More »ಸಂಜೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬಿಡುಗಡೆಯಾದ ಬುಲೆಟಿನ್………
ಬೆಂಗಳೂರು: ಇಂದು 14 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಮಂಡ್ಯ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1, ಹಾವೇರಿ 1, ಆಂಧ್ರದ ಮೂಲದ ವ್ಯಕ್ತಿಯಿಂದ ಆತನ ಪತ್ನಿಗೆ, ಬೆಂಗಳೂರಿನಲ್ಲಿ 1 ಹೊಸ ಕೊರೊನಾ ಪ್ರಕರಣಗಳು …
Read More »ಹೋಟೆಲ್ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್
ಚಿಕ್ಕಮಗಳೂರು: ಹೋಟೆಲ್ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ …
Read More »ಬೆಂಗ್ಳೂರು ಹೋಟಿಲಿನಲ್ಲಿ ಕ್ವಾರಂಟೈನ್ – 1 ದಿನಕ್ಕೆ ಊಟ, ತಿಂಡಿ, ಬಾಡಿಗೆ ಎಷ್ಟು?
ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ 6,100 ಮಂದಿ ಕನ್ನಡಿಗರನ್ನು ಕ್ವಾರಂಟೈನ್ ಮಾಡಲು ಸರ್ಕಾರ ಹೋಟೆಲ್ ಗಳನ್ನು ಬುಕ್ ಮಾಡಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ಈ ವ್ಯವಸ್ಥೆ ಮಾಡಿದ್ದಾರೆ. 18 ಫೈವ್ ಸ್ಟಾರ್, 23 ತ್ರಿಸ್ಟಾರ್, 18 ಬಜೆಟ್ ಹೋಟೆಲ್ ಸೇರಿದಂತೆ ಒಟ್ಟು 6,008 ರೂಂ ಗಳನ್ನು ಬುಕ್ ಮಾಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಅವರೇ ತುಂಬಬೇಕಾಗುತ್ತದೆ. ಮೊದಲು ಬಂದವರು ತಮ್ಮ ಆಯ್ಕೆ ಅನ್ವಯ ಹೋಟೆಲಿಗೆ ಕರೆದುಕೊಂಡು …
Read More »ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ
ಬೆಳಗಾವಿ: ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸಿ ಸೌಮ್ಯ ಟಿ.ಎ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮೃತ ಮಹಿಳೆ ಪತಿ ಶರತ್ ತನ್ನ ಪತ್ನಿ ಮೃತ ದೇಹವನ್ನು ತನ್ನೂರಿಗೆ ತೆಗೆದುಕೊಂದು ಬರಲು ಮಂಡ್ಯ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದ್ದಾರೆ. ಆದರೆ ಮೃತ …
Read More »
Laxmi News 24×7