ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು …
Read More »ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ……………
ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
Read More »ಗೋವಾದಿಂದ ಬಂದಿಳಿದ 200ಕ್ಕೂ ಅಧಿಕ ಕೂಲಿ ಕಾರ್ಮಿಕರು……….
ಗದಗ: ಗೋವಾ ರಾಜ್ಯಕ್ಕೆ ದುಡಿಯಲು ಹೋಗಿದ್ದ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಕೂಲಿ ಕಾರ್ಮಿಕರು ಮತ್ತೆ ತಾಯಿನಾಡಿಗೆ ವಾಪಸ್ ಬಂದಿದ್ದಾರೆ. ಜಿಲ್ಲೆಯ ನಾಗಾವಿತಾಂಡ, ಬೆಳಧಡಿ, ಅಡವಿಸೋಮಾಪುರ ತಾಂಡ, ಕಳಸಾಪೂರ ತಾಂಡ ಸೇರಿದಂತೆ ಅನೇಕ ಗ್ರಾಮಗಳ ಜನರು ಗೋವಾ ರಾಜ್ಯಕ್ಕೆ ವಲಸೆ ಹೋಗಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಇವರಿಗೆಲ್ಲಾ ಸ್ವ ಗ್ರಾಮಗಳಿಗೆ ಬರಲು ಸಾಧ್ಯವಾಗಿರಲಿಲ್ಲ. ಸದ್ಯ ಲಾಕ್ಡೌನ್ ಸಡಿಲಿಕೆ ನಂತರ ಗೋವಾ ಸರ್ಕಾರ ಇವರ ಮನವಿಗೆ ಸ್ಪಂದಿಸಿ ಕದಂಬ ಬಸ್ ಮೂಲಕ ಗದುಗಿಗೆ ಕಳುಹಿಸಿದ್ದಾರೆ. …
Read More »ನೆಗೆಟಿವ್ ಬಂದಿದ್ದ ತಬ್ಲಿಘಿಗೆ ಮತ್ತೆ ಪಾಸಿಟಿವ್………..
ಬೆಂಗಳೂರು: ಇಂದು 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಸೋಂಕಿತರ ವಿವರ: 1. ರೋಗಿ-849: ಕಲಬುರಗಿಯ 38 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. …
Read More »ಇ-ಪಾಸ್ ಪಡೆದ ಅಂತರ್ ರಾಜ್ಯ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ – ಕೆಎಸ್ಆರ್ಟಿಸಿ ಸಂಸ್ಥೆ
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್ಡೌನ್ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್ಡೌನ್ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ಡೌನ್ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …
Read More »ಲಾಕ್ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …
Read More »ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ:ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಹೆಮ್ಮಾರಿ ಕೊರೊನಾ ವೈರಸ್ನಿಂದಾಗಿ ಹೇರಿದ್ದ ಲಾಕ್ಡೌನ್ ಸೇರಿದಂತೆ ವಿವಿಧ ಕ್ರಮ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ರಧಾನಿ ಸಭೆಯಲ್ಲಿ ಚರ್ಚಿಸಲಿದ್ದಾರೆ. ಮೇ 17ರಂದು ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬ ವಿಚಾರವಾಗಿ ಸಲಹೆ …
Read More »ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ
ಚಿಕ್ಕಮಗಳೂರು: ಬದುಕಿಗಾಗಿ ಬೆಳೆ ಬೆಳೆದು ಲಾಕ್ಡೌನ್ನಿಂದ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದ ರೈತರ ಹೊಲಗಳಿಗೆ ಹೋಗಿ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಾಂಕೇತಿಕವಾಗಿ ರೈತರು ಹೇಳಿದ ಬೆಲೆಗೆ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದಾರೆ. ಒಂದೆರಡು ಎಕ್ರೆಯಲ್ಲಿ ರೈತರು ಬದುಕಿಗಾಗಿ ನಾನಾ ಬೆಳೆ ಬೆಳೆದಿರುತ್ತಾರೆ. ಬೆಲೆ ಇದ್ದಾಗ ಬೆಳೆ ಇರಲ್ಲ. ಬೆಳೆ ಇದ್ದಾಗ ಬೆಲೆ ಇರಲ್ಲ. ರಾಜ್ಯದ ರೈತರದ್ದು ಶೋಚನಿಯ ಪರಿಸ್ಥಿತಿ. ರೈತರ ಬಹುಪಾಲು ಜೀವನ ಮಧ್ಯವರ್ತಿಗಳ ಜೇಬು ಸೇರುತ್ತೆ. ಅದರಲ್ಲೂ …
Read More »ನೆಲಮಂಗಲ ಬಳಿ ಟ್ರಾಫಿಕ್ ಜಾಮ್- ಬೆಂಗಳೂರಿನತ್ತ ಜನರು…………
ಬೆಂಗಳೂರು: ಲಾಕ್ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ. ಲಾಕ್ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ …
Read More »ಬೆಂಗ್ಳೂರಲ್ಲಿ ದಂಪತಿಯ ಬರ್ಬರ ಹತ್ಯೆ- ಮಗ ಟೆಕ್ಕಿಯಿಂದ್ಲೇ ಕೃತ್ಯ ಶಂಕೆ………….
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ ಅವರು ಆರ್ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ …
Read More »
Laxmi News 24×7