Breaking News

ಜಿಲ್ಲೆ

ಮದ್ಯ’ವಿಲ್ಲದೆ ‘ಮಧ್ಯ’ರಾತ್ರಿ ಎದ್ದು ಕೂರ್ತಿದ್ದೆ: ಎಣ್ಣೆಪ್ರಿಯನ ಮನದಾಳದ ಮಾತು,ಮೊದಲು ಬಂದ ಗ್ರಾಹಕನಿಗೆ ವೈನ್ ಶಾಪ್ ಮಾಲೀಕರು ಹಾರ ಹಾಕಿ ಸನ್ಮಾನ

ಬೆಳಗಾವಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಕರ್ನಾಟದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಣ್ಣೆ ಪ್ರಿಯರು ಫುಲ್ ಖುಷಿಯಾಗಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬಾರ್ ಓಪನ್ ಮಾಡಿರೋದು ತುಂಬಾ ಖುಷಿಯಾಗುತ್ತಿದೆ. ನಿನ್ನೆ ಟಿವಿಯಲ್ಲಿ ಮೇ 4ರಂದು ಮದ್ಯದಂಗಡಿಗಳು ಓಪನ್ ಅಂದಾಗ ತುಂಬಾನೇ ಖುಷಿಯಾಯ್ತು. ಹೀಗಾಗಿ ಇಂದು ಬೆಳಗ್ಗೆನೇ ಬಂದು ಟೋಕನ್ ತೆಗೆದುಕೊಂಡು ಕ್ಯೂನಲ್ಲಿ …

Read More »

ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ

ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಉಡುಪಿ: ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ ಇಂದು ನಡೆದಿದೆ. ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಅಂತ ಎದ್ದು ಬಿದ್ದು ಮದ್ಯ ಖರೀದಿ ಮಾಡಿದರು. ರೂಲ್ಸ್ & ರೆಗ್ಯುಲೇಶನ್ ಅನ್ನು ಉಡುಪಿಯ ಮಣಿಪಾಲದಲ್ಲಿ ಗಾಳಿಗೆ ತೂರಿ, ಬಿಸಿಲ ದಾಹ ತೀರಿಸಲು ಬಿಯರ್ ಗಾಗಿ ಬಿಸಿಲಿನಲ್ಲೇ ಯುವತಿಯರು ಒಣಗಿದರು. ಮಣಿಪಾಲದಲ್ಲಿ ಮದ್ಯಕ್ಕಾಗಿ ಯುವತಿಯರು ಸರತಿ ಸಾಲು ಕಟ್ಟಿದ್ದರು. ಬಿಸಿಲ …

Read More »

ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್……

ಮೈಸೂರು: ಜಿಲ್ಲೆಯಲ್ಲಿ ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ ಆಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ಮೈಸೂರಿನ ದೇವರಾಜ ಠಾಣಾ ವ್ಯಾಪ್ತಿಯಲ್ಲಿರುವ ಟ್ರೂ ಸ್ಪಿರಿಟ್ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಾಲ್ಕೈದು ಬಾರಿ ವಾರ್ನ್ ಮಾಡಿದ್ದರು. ಇನ್ಸ್‌ಪೆಕ್ಟರ್ ಮಾತಿಗೂ ಲೆಕ್ಕಿಸದೆ ಮಾಲೀಕರು ಮದ್ಯ ಮಾರಾಟ ಮಾಡುತ್ತಿದ್ದರು. ಹೀಗಾಗಿ ಪೊಲೀಸರು ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ. ಮದ್ಯದಂಗಡಿಯಲ್ಲಿ ಸಿಬ್ಬಂದಿಯಿಲ್ಲದೆ …

Read More »

ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ

ಬೆಳಗಾವಿ: ರಾಜ್ಯದಲ್ಲಿ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಸಿಗಲಾರದು. ಬೆಳಗಾವಿ …

Read More »

ಹಲವು ವಿನಾಯಿತಿಗಳ ನಡುವೆ ಮೇ 17ರವರೆಗೆ ನಿಷೇಧಾಜ್ಞೆ ಮುಂದುವರಿಕೆ ……..

ಹಾವೇರಿ: ಹಲವು ವಿನಾಯಿತಿಗಳ ನಡುವೆ ಕರೋನಾವೈರಸ್ (Coronavirus) ಕೋವಿಡ್ ನಿರ್ಭಂಧ ಜಿಲ್ಲೆಯಲ್ಲಿ ಮುಂದುವರೆದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 17ರವರೆಗೆ ಮುಂದುವರಿಸಿ  ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ (Lockdown)ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಅದರಂತೆ ಈ ಕೆಳಕಂಡ ಚಟುವಟಿಕೆಗಳನ್ನು ನಿಯಂತ್ರಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್‍ಗಳನ್ನು ಹೊರತುಪಡಿಸಿ ಉಳಿದ ಯಾವುದೇ …

Read More »

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ …

Read More »

ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ…………

ಚಿಕ್ಕಮಗಳೂರು: ಕಳೆದ ದಿನ ಅನೇಕ ಕಡೆ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕೊಪ್ಪ, ಎನ್‍ಆರ್ ಪುರ, ಶೃಂಗೇರಿಯಲ್ಲಿ ಭಾರೀ ಗಾಳಿಯೊಂದಿಗೆ ವರುಣ ದೇವ ಅಬ್ಬರಿಸಿದ್ದಾನೆ. ಭಾನುವಾರ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಕೊಪ್ಪದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಕೊಪ್ಪ ಅಕ್ಷರಶಃ ನಲುಗಿ ಹೋಗಿದೆ. ಕೊಪ್ಪದಲ್ಲಿ ಮಳೆ ಜೊತೆ ಬೀಸಿದ ರಣಗಾಳಿಗೆ ಸುಮಾರು …

Read More »

ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ……….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದೆ. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಕೂಡ …

Read More »

ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೂರು ವಲಯಗಳಲ್ಲೂ …

Read More »

ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ…….

ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ …

Read More »