Breaking News

ಜಿಲ್ಲೆ

ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ ಡಿ.ಕೆ ಶಿವಕುಮಾರ್………

ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇದೀಗ ಮತ್ತೆ ಮೇ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾತ್ರೋ ರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಕಡೆಯ ರೈತರು ತಾವು …

Read More »

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ. ಪಡಿತರ ಚೀಟಿದಾರರು ಓಟಿಪಿ ಅಥವಾ ಬಯೋ ಮೆಟ್ರಿಕ್‌ ಮೂಲಕ ಪಡಿತರವನ್ನು ಪಡೆಯಬಹುದು. ಜಿಲ್ಲೆಗೆ ಹೆಚ್ಚುವರಿ 12,857 ಮೆ. ಟನ್‌ ಅಕ್ಕಿ ಹಾಗೂ 3806 ಮೆ. ಟನ್‌ ತೊಗರಿಬೇಳೆ ಹಂಚಿಕೆಯಾಗಿದೆ. ಈ ಆಹಾರಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ …

Read More »

ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇಕಠಿಣ ರೂಲ್ಸ್……….

ಬೆಂಗಳೂರು: ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಲಾಕ್‍ಡೌನ್ ಮೂರರಲ್ಲಿ ಹೆಚ್ಚುವರಿ ನಿರ್ಬಂಧಗಳಿದ್ದು, ಈ ಬಾರಿ ಸಾರ್ವಜನಿಕ ಪ್ರದೇಶಗಳಲ್ಲೂ ರೂಲ್ಸ್ ಜಾರಿ ಮಾಡಲಾಗಿದೆ. ಕೊರೊನಾದ ಮೂರನೇ ಲಾಕ್‍ಡೌನ್‍ನಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಕಠಿಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಬೇಕಾಬಿಟ್ಟಿ ಓಡಾಡುವಂತಿಲ್ಲ. ಓಡಾಡಿದರೆ ಮಾಸ್ಕ್ ಧರಿಸಿರಲೇಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ.

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತ್ತ ಮಲ್ಲಯ್ಯನ ದೇವಸ್ಥಾನದ ಬಳಿಯ ಕೆಪಿಟಿಸಿಎಲ್ ವಿಂಡ್ ಪ್ಯಾನ್ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಸಂಪತ್ತು ಸೇರಿದಂತೆ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿದೆ. ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಇದು ವಿಂಡ್ ಫ್ಯಾನ್ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿದೆಯಾ? …

Read More »

ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್- ಎಚ್‍ಡಿಕೆ ಆರೋಪ……

ಕೋಲಾರ: ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್ಲ. ಜನ ಸಾಮಾನ್ಯರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು. ಮುಳಬಾಗಿಲಿನ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಅವರು ತಾಲೂಕಿನಲ್ಲಿ 46 ಸಾವಿರ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮುಂಬೈನಿಂದ ಮಂಡ್ಯಗೆ …

Read More »

ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಇನ್ನೂ 2 ವಾರ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶಾದ್ಯಂತ ಮೇ 17ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಇದೇ ವೇಳೆ ವಲಸೆ ಕಾರ್ಮಿಕರು, ತುರ್ತು ಪ್ರಯಾಣಿಕರಿಗೆ ಗುಡ್‍ನ್ಯೂಸ್ ಜೊತೆಗೆ ಕೇಂದ್ರ ಸರ್ಕಾರ ಶಾಕ್ ಕೂಡ ಕೊಟ್ಟಿದೆ. ಕೊರೊನಾ ತೊಲಗಿಸಲು ಕೇಂದ್ರ ಸರ್ಕಾರ 4 ಝೋನ್‍ಗಳಾಗಿ ವಿಂಗಡಣೆ ಮಾಡಿದೆ. ಕಂಟೈನ್‍ಮೆಂಟ್, ರೆಡ್, ಆರೆಂಜ್, ಗ್ರೀನ್ ಝೋನ್ ಅಂತ ವಿಂಗಡಣೆ ಮಾಡಿದ್ದು, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಸೆ …

Read More »

ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ.

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ. ಶುಕ್ರವಾರ ರಾತ್ರಿ ವೇಳೆ ಗಾಳಿಯ ರಭಸಕ್ಕೆ ಹಾರಿ ಬಂದ ಟಿನ್‍ಗಳು ನಗರದ ಸಿಯತಲಾಬ್ ನಿವಾಸಿ ರತ್ನಾಬಾಯಿ ಮನೆ ಮೇಲೆ ಬಿದ್ದಿವೆ. ರಸ್ತೆ, ಮನೆಗಳ ಮೇಲೆ ಬಿದ್ದಿರುವ ಟಿನ್ ಗಳಿಂದ ತಳ್ಳೋ ಬಂಡಿ, ಬೈಕ್‍ಗಳು ಜಖಂಗೊಂಡಿವೆ. ಅಷ್ಟೇ ಅಲ್ಲದೇ ರಾತ್ರಿ ಮಳೆ ಜೋರಾಗಿದ್ದರಿಂದ ನಿವಾಸಿಗಳು ಮನೆಯಿಂದ ಹೊರಗಡೆಯಿರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ಕ್ಯಾಮೆರಾ ಹಿಂದಿನ ಕಾಣದ ಕೈಗಳಿಗೆ ಗಿಫ್ಟ್ ಕೊಟ್ಟ ‘ರಾಬರ್ಟ್’

ಬೆಂಗಳೂರು: ಕ್ಯಾಮೆರಾ ಹಿಂದೆ ಕಾಣದ ಕೈಗಳಿಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡದಿಂದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಮೇ 1ರಂದು ಕಾರ್ಮಿಕರ ದಿನಾಚರಣೆಗೆ ಒಂದು ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಅಂತಯೇ ಇಂದು ಮೇಕಿಂಗ್ ಸಾಂಗ್ ಬಿಡುಗಡೆ ಮಾಡಿದೆ. ಈ ವಿಚಾರವನ್ನು ದರ್ಶನ್ ಮತ್ತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸರ್ವರಿಗೂ …

Read More »

“ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಇಬ್ಬರ ದುರ್ಮರಣ”

ಚಿತ್ರದುರ್ಗ: ಕೊರೊನ ವೈರಸ್‍ನಿಂದ ರಾಜ್ಯದ ಎಲ್ಲೆಡೆ ಲಾಕ್‍ಡೌನ್ ಜಾರಿ ಇದ್ದು, ಈ ಲಾಕ್‍ಡೌನ್‍ನಿಂದ ಕಳೆದ ಒಂದು ತಿಂಗಳಿಂದ ಮನೆಯಲ್ಲೇ ಉಳಿದಿದ್ದ ಇಬ್ಬರು ರೈತರ ಜೀವವನ್ನು ವರುಣ ಬಲಿ ಪಡೆದಿದ್ದಾನೆ. ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿನಾದ್ಯಂತ ಇಂದು ಭಾರೀ ಗಾಳಿ ಸಹಿತ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಶ್ರೀರಾಂಪುರ ಹೋಬಳಿಯ ಆಲ್ಗಟ್ಟ ಗ್ರಾಮದ ರೇಣುಖಾರಾಧ್ಯ (35) ಎಂಬ ರೈತನ ಮೇಲೆ ತೆಂಗಿನ ಮರವೊಂದು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. …

Read More »