ಬೆಂಗಳೂರು(ಏ. 27): ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್ಪಿಎಫ್ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ ಎಸಗಿದ ಘಟನೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯನ್ನು ತನಿಖೆಗೊಳಪಡಿಸಬೇಕೆಂದು ಸಿಆರ್ಪಿಎಫ್ನ ಎಡಿಜಿಪಿ ಸಂಜಯ್ ಅರೋರಾ ಅವರು ಒತ್ತಾಯ ಮಾಡಿದ್ಧಾರೆ. ಈ ಸಂಬಂಧ, ಕರ್ನಾಟಕ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಅರೋರಾ ಪತ್ರ ಬರೆದು …
Read More »ಹಾವೇರಿ :ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣವಾಗಿ ಬಂದ್…….
ಹಾವೇರಿ(ಏ. 28): ಒಣ ಮೆಣಸಿನಕಾಯಿ ಕಣಜ ಎಂದೇ ವಿಶ್ವಪ್ರಸಿದ್ಧಿ ಪಡೆದಿರುವ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣವಾಗಿ ಬಂದ್ ಆಗಿದೆ. ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆ ತನ್ನದೇ ಆದ ಇತಿಹಾಸ ಹೊಂದಿದ್ದು ಮುಂಬೈ ಸರ್ಕಾರದ ಕಂದಾಯ ಇಲಾಖೆಯ ಅಧಿಸೂಚನೆ ಅನ್ವಯ 1948ರಲ್ಲಿ ಈ ಮಾರುಕಟ್ಟೆ ಸ್ಥಾಪನೆಯಾಗಿದೆ. ಅಂದಿನಿಂದ ಇಂದಿನವರೆಗೂ ಇಷ್ಟು ದಿನಗಳ ಕಾಲ ಈ ಮಾರುಕಟ್ಟೆ ಬಂದ್ ಆಗಿರುವ ದಾಖಲೆ ಇರಲಿಲ್ಲ. ಆದರೆ ಕೊರೋನಾದಿಂದಾಗಿ ಮಾರ್ಚ್19 ರಿಂದ ಸಂಪೂರ್ಣ ಲಾಕ್ ಮಾಡಲಾಗಿದೆ. …
Read More »ರಾಮನಗರಕ್ಕೆ ಹಸಿರು ವಲಯದ ಜಿಲ್ಲೆಗಳಿಗೆ ನೀಡಿರುವ ವಿನಾಯಿತಿ ಘೋಷಿಸಬೇಕೆಂದು ಸರ್ಕಾರಕ್ಕೆ ಎಚ್ಡಿಕೆ ಆಗ್ರಹ
ಬೆಂಗಳೂರು: ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದ್ದವರ ಪೈಕಿ ಇಬ್ಬರಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದ 68 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲು ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಗೆ ಕಳುಹಿಸಿದ್ದ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಸಮಾಧಾನ ವ್ಯಕ್ತಪಡಿಸಿ, ರಾಮನಗರಕ್ಕೆ ಹಸಿರು ಜಿಲ್ಲೆಗೆ ನೀಡಿರುವ ರಿಯಾಯಿತಿಗಳನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ರಾಜಧಾನಿಯ …
Read More »ರಸ್ತೆ ಮಧ್ಯೆಯೇ ಯುವತಿಯನ್ನು ಎಳೆದಾಡಿದ್ದ ಬೆಂಗಳೂರಿನ ಕಾಮುಕ ಬಂಧನ………..
ಬೆಂಗಳೂರು (ಏ. 28): ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯ ಮೈ ಮುಟ್ಟಿ, ಕೈ ಕಚ್ಚಿ ಪರಾರಿಯಾಗಿದ್ದ ಬೆಂಗಳೂರಿನ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇಶಾದ್ಯಂತ ಲಾಕ್ಡೌನ್ ಘೋಷಣೆ ಆದಮೇಲೆ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದೆ ಎಂದು ವರದಿಯೊಂದು ತಿಳಿಸಿತ್ತು. ಆದರೆ, ಮನೆಯಿಂದ ಹೊರಗೆ ಹೋಗಲೂ ಯೋಚಿಸಬೇಕಾದ ಪರಿಸ್ಥಿತಿ ಇದ್ದರೂ ಅಪರಾಧ ಪ್ರಕರಣಗಳು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇದಕ್ಕೆ ಉದಾಹರಣೆಯೆಂಬಂತೆ ಲಾಕ್ಡೌನ್ ಬಳಿಕವೂ ಅಲ್ಲಲ್ಲಿ ಕೊಲೆ, ಅತ್ಯಾಚಾರ, ಸುಲಿಗೆ, ವಂಚನೆ, ಅಪಹರಣದ ಪ್ರಕರಣಗಳು …
Read More »ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.
ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ. ಲಾಕ್ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ …
Read More »ಮಂಡ್ಯ ಜಿಲ್ಲೆ ನಾಗಮಂಗಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಖಾತ್ರಿ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಪೆಟ್ರೋಲ್ ಪಂಪನ್ನು ಸೀಲ್ ಮಾಡಲಾಗಿದೆ.
ಉಡುಪಿ: ಮಂಡ್ಯ ಜಿಲ್ಲೆ ನಾಗಮಂಗಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಖಾತ್ರಿ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಪೆಟ್ರೋಲ್ ಪಂಪನ್ನು ಸೀಲ್ ಮಾಡಲಾಗಿದೆ. ಖರ್ಜೂರ ತುಂಬಿದ ಗೂಡ್ಸ್ ಲಾರಿ ಹತ್ತಿಕೊಂಡು ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸಿದ ವ್ಯಕ್ತಿಗೆ ಕೊರೊನಾ ಆವರಿಸಿತ್ತು. ಆತ ದಾರಿ ನಡುವೆ ಉಡುಪಿಯ ತೆಕ್ಕಟ್ಟೆಯ ಶಿವಪ್ರಸಾದ್ ಪೆಟ್ರೋಲ್ ಸ್ಟೇಷನ್ ನಲ್ಲಿ ಸ್ನಾನ ಮಾಡಿ ಊಟ ಮಾಡಿ ಕೊಂಚ ವಿರಮಿಸಿದ್ದ. ಹೀಗಾಗಿ ಉಡುಪಿಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತೆಕ್ಕಟ್ಟೆ ಶಿವಪ್ರಸಾದ್ …
Read More »ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆ………….
ಚಿಕ್ಕಮಗಳೂರು: ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚೇಗು ಗ್ರಾಮದ ನಿವಾಸಿ ಮಂಜಯ್ಯ (58) ಮೃತ ದುರ್ದೈವಿ. ಲಕ್ಷ್ಮಣ ಕೊಲೆಗೈದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದ ವಿಚಾರವಾಗಿ ಮಂಜಯ್ಯ ಹಾಗೂ ಲಕ್ಷ್ಮಣ ಸಹೋದರರ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆದಿತ್ತು. ಈ ವಿಚಾರವಾಗಿ ಸೋಮವಾರವೂ ಸಹೋದರರು ಪರಸ್ಪರ ಗಲಾಟೆ …
Read More »ನಿರಾಶ್ರಿತರು, ಕೂಲಿ ಕಾರ್ಮಿಕರಿಗೆ ಶೇವಿಂಗ್ ಕಿಟ್ ವಿತರಿಸಿದಸಮಾಜಸೇವಕ, ನಿತ್ಯಾನಂದ
ಉಡುಪಿ: ಕಳೆದ ಒಂದು ತಿಂಗಳಿಂದ ಉಡುಪಿಯಲ್ಲಿ ಸೆಲೂನ್ಗಳು ಬಂದ್ ಆಗಿರುವುದರಿಂದ ಹೇರ್ ಕಟ್ಟಿಂಗ್, ಶೇವಿಂಗ್ ಮಾಡದೆ ಜನಕ್ಕೆ ಕಿರಿಕಿರಿಯಾಗುತ್ತಿದೆ. ಮನೆಯಲ್ಲಿ ಲಾಕ್ ಆಗಿರೋರು ತಮ್ಮ ಹೇರ್ ಕಟ್ಟಿಂಗ್ ತಾವೇ ಮಾಡಿಕೊಳ್ತಾ ಇದ್ದಾರೆ. ಹೊರ ಜಿಲ್ಲೆಯಿಂದ ಬಂದು ಉಡುಪಿಯ ನಿರಾಶ್ರಿತರ ಕೇಂದ್ರದಲ್ಲಿ ಇರುವವರು ಕಟ್ಟಿಂಗ್, ಶೇವಿಂಗ್ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರ ಸಂಕಷ್ಟವನ್ನು ಅರಿತುಕೊಂಡ ಉಡುಪಿಯ ಸಮಾಜಸೇವಕ, ನಿತ್ಯಾನಂದ ಒಳಕಾಡು ಶೇವಿಂಗ್ ಕಿಟ್ ಗಳನ್ನು ಉಚಿತವಾಗಿ ವಿತರಿಸಿದ್ದಾರೆ. ಉಡುಪಿಯ ಇಂದಿರಾ ಕ್ಯಾಂಟೀನ್, …
Read More »ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …
Read More »ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ- ಇಬ್ಬರ ಬಂಧನ…….
ಉಡುಪಿ: ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೊನಾ ವಾರಿಯರ್ಸ್ ಮೇಲೆ ಬೆದರಿಕೆ ಪ್ರಕರಣ ಮರುಕಳಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯನ್ನ ಬೆದರಿಸಿದ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ್ ಮೇಸ್ತ ಎಂಬಾತನಿಗೆ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು. ಆದರೆ ಸಂದೀಪ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್ ನನ್ನ ಮನೆಯಲ್ಲಿರುವಂತೆ ಸೂಚನೆ ನೀಡಿದ್ದೇ ತಡ ಸಂದೀಪ್ ಹಾಗೂ ಆತನ ಗೆಳೆಯ …
Read More »
Laxmi News 24×7