Breaking News

ಜಿಲ್ಲೆ

ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ

ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …

Read More »

ಪೊಲೀಸರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಹಾಮಾರಿ ಕೊರೊನಾ ಕುರಿತು ಜಾಗೃತಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದಾಗಿ ಮನೆಯಲ್ಲೇ ಇರಿ ಎಂದು ಪೊಲೀಸರು ಲಾಠಿ ಹಿಡಿದಾಯ್ತು, ಒದೆ ಕೊಟ್ಟಾಯ್ತು, ಕೇಸು ಹಾಕಾಯ್ತು, ಕೈ ಮುಗಿದಾಯ್ತು. ಜನ ಯಾವುದಕ್ಕೂ ಜಪ್ಪಯ್ಯ ಅನ್ನಲಿಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ವಿಭಿನ್ನವಾಗಿ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜಾಗತಿಕ ಶಾಪವಾಗಿ ಕಾಡುತ್ತಿರುವ ಕೊರೊನಾ ಮಹಾಮಾರಿ ವಿರುದ್ಧ ಜನರಿಗೆ ಎಲ್ಲಾ ರೀತಿಯ ಮನವಿ ಮಾಡಿಕೊಂಡಿದ್ದ ಪೊಲೀಸರು ಇದೀಗ ವಿಭಿನ್ನ ಪ್ರಯತ್ನಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬಾಳೆಹೊನ್ನೂರು ಪೊಲೀಸರು …

Read More »

ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ……….

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಟ್‍ಸ್ಪಾಟ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನಂಜನಗೂಡು, ದೆಹಲಿ ನಿಜಾಮುದ್ದೀನ್ ಪ್ರಕರಣದ ಬಳಿಕ ಚಾಮರಾಜನಗರದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಅಲ್ಲಿಂದ ಬಂದವರ ರಿಪೋರ್ಟ್ ಸಹ ನೆಗೆಟಿವ್ ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಜೊತೆಗೆ ನೆರೆ …

Read More »

ಯಾದಗಿರಿಯಲ್ಲಿ ಕಲಬುರಗಿ ಸೋಂಕಿತ ತಂದ ಫಜೀತಿ…………

ಯಾದಗಿರಿ: ಗ್ರೀನ್‍ಜೋನ್‍ನಲ್ಲಿರುವ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಫಜೀತಿಗೆ ಸಿಲುಕಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ ನಗರದಲ್ಲಿ ಕನ್ನಡಕದ ಅಂಗಡಿಯಿದ್ದು, ಈ ಅಂಗಡಿ ಏಪ್ರಿಲ್ 15 ರಿಂದ 22ವರೆಗೆ …

Read More »

ಅಂದು ಕ್ಯಾಮೆರಾಮ್ಯಾನ್ ಇಂದು ಬೀದಿ ಬೀದಿಯಲ್ಲಿ ಹಣ್ಣು, ತರಕಾರಿ ಮಾರೋ ವ್ಯಾಪಾರಿ

ಮಡಿಕೇರಿ: ಕೊರೊನಾ ವಿಶ್ವದಾದ್ಯಂತ ತಲ್ಲಣ ಮೂಡಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳನ್ನು ಲಾಕ್‍ಡೌನ್ ಮಾಡಲಾಗಿದೆ. ಈ ಪರಿಣಾಮ ಹಲವರ ಬದುಕು ಬೀದಿಗೆ ಬಂದಿದೆ. ವರ್ಷದಲ್ಲಿ 6 ತಿಂಗಳು ಮದುವೆ, ನಾಮಕರಣ, ಪ್ರೀವೆಡ್ಡಿಂಗ್ ಶೂಟ್ ಹೀಗೆ ಫೋಟೋ ಹಾಗೂ ವಿಡಿಯೋ ಮಾಡಿಕೊಂಡು ಜೀವನ ನಡೆಸುತ್ತಿದ್ದ ಹಲವು ಛಾಯಾಗ್ರಾಹಕರ ಕುಟುಂಬಗಳಿಗೆ ಕೊರೊನಾ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಇದಕ್ಕೆ ಕೊಡಗು ಜಿಲ್ಲೆಯ ಛಾಯಾಗ್ರಾಹಕರು ಹೊರತಾಗಿಲ್ಲ. ಏಕಾಏಕಿ ದೇಶದಾದ್ಯಂತ ಲಾಕ್‍ಡೌನ್ ಘೊಷಿಸಿದ್ದರಿಂದ ಯಾವುದೇ ಮದುವೆ ಹಾಗೂ …

Read More »

10 ಮಂದಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ……..

ಚಿಕ್ಕಮಗಳೂರು: ಕೊರೊನಾ ಆತಂಕ ಹಾಗೂ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕೇವಲ 10 ಮಂದಿಯ ಸಮ್ಮುಖದಲ್ಲಿ ಸರಳವಾದ ಮದುವೆಯೊಂದು ನಡೆದಿದೆ. ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದ ರಂಜಿತ್ ಹಾಗೂ ಮೇಘ ಮದುವೆ ಇಂದು ಮೂಡಿಗೆರೆ ನಗರದ ರೈತ ಭವನದಲ್ಲಿ ನಿಶ್ಚಯವಾಗಿತ್ತು. ಆದರೆ ಕೊರೊನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅಲ್ಲದೇ ಮದುವೆ, ಸಭೆ, ಸಮಾರಂಭಗಳಿಗೆ ಸರ್ಕಾರ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಜೋಡಿ ಬೈದುವಳ್ಳಿ ಗ್ರಾಮದಲ್ಲಿನ ಈಶ್ವರ …

Read More »

ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು……….

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ 90 ವರ್ಷದ ವೃದ್ಧ ಸವಾಲು ಹಾಕಿದ್ದು, ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಅಜ್ಜ ಎಲ್ಲ ರೀತಿಯ ಹೋರಾಟ ನಡೆಸುತ್ತಿದ್ದಾನೆ. ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದ ಬಿಹಾರ ಮೂಲದ ಕಾರ್ಮಿಕ ರೋಗಿ-419ರ ಸಂಪರ್ಕದಿಂದ ವೃದ್ಧನಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು. ಹೀಗಾಗಿ ಸದ್ಯ ಆತನನ್ನು ಪ್ರತ್ಯೇಕವಾಗಿಸಿರಿ ಚಿಕಿತ್ಸೆ ಕೊಡಲಾಗುತ್ತಿದೆ. ವೃದ್ಧನಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈದ್ಯರಿಗೆ ಎಲ್ಲವೂ ಕಷ್ಟ ಕಷ್ಟವಾಗಿದೆ. ಆದರೂ ಅಜ್ಜ …

Read More »

ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿದ ಕೆಎಂಎಫ್ ಅಧಿಕಾರಿ

ಧಾರವಾಡ: ನಗರದ ಕೆಎಂಎಫ್ ಅಧಿಕಾರಿಯೊಬ್ಬರು ಕೊರೊನಾ ಸಂಕಷ್ಟದಲ್ಲೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿ, ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ. ಧಾರವಾಡ ನಗರದ ಟೋಲ್‍ನಾಕಾದಲ್ಲಿ ಪ್ರತಿ ದಿನ 30ಕ್ಕೂ ಹೆಚ್ಚು ಪೌರಕಾರ್ಮಿಕರು ಈ ಕೊರೊನಾ ಸಮಯದಲ್ಲಿ ಕೂಡಾ ಬೆಳಗಿನ ಜಾವವೇ ಬಂದು ಕಸ ತೆಗೆದುಕೊಂಡು ಹೋಗುವುದು, ರಸ್ತೆ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿರುತ್ತಾರೆ. ಇದನ್ನ ಧಾರವಾಡ ಕೆಎಂಎಫ್‍ನ ಟೆಕ್ನಿಕಲ್ ಆಫಿಸರ್ ನಾಗಪ್ಪ ಅರಳೋದ ಅವರು ಕಳೆದ …

Read More »

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ : ಗೋಪಾಲಯ್ಯಗೆ ಡಿಕೆಶಿ ವಾರ್ನಿಂಗ್ …….

ಬೆಂಗಳೂರು, ಏ.26- ಆನೆಕಲ್ ನಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿದ ಕೃತ್ಯದ ಹಿಂದೆ ಏನೆಲ್ಲಾ ಮಾತುಕತೆಗಳಾಗಿವೆ ಎಂದು ನನಗೆ ಗೋತ್ತಿದೆ. ಈಗ ಎಲ್ಲವನ್ನು ಚರ್ಚೆ ಮಾಡುವ ಕಾಲವಲ್ಲ. ಸುಮ್ಮನೆ ನನ್ನ ಕೆಣಕಿ ಮರ್ಯಾದೆ ಕಳೆದುಕೊಳ್ಳುದು ಬೇಡ. ಮುಂದಾಗಬೇಕಿರುವ ಕೆಲಸದತ್ತ ಸಚಿವರು ಗಮನ ಕೊಡಲಿ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಪಡಿತರ ವ್ಯವಸ್ಥೆಯಡಿ ಹಂಚಿಕೆ ಮಾಡಲು …

Read More »

ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ: ಮಹೇಶ ಕುಮಟಳ್ಳಿ

ಅಥಣಿ: ಕಾಂಗ್ರೆಸ್ ಮುಖಂಡರು ಕೊರೊನಾ ಸಂದಿಗ್ಧ ಪರಿಸ್ಥಿತಿಯನ್ನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಶಾಸಕ‌ ಮಹೇಶ ಕುಮಟಳ್ಳಿ ಕಿಡಿಕಾರಿದ್ದಾರೆ. ಶಾಸಕ‌ ಮಹೇಶ ಕುಮಟಳ್ಳಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ‌ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಖಂಡರನಷ್ಟು ಕೀಳು ರಾಜಕೀಯಕ್ಕೆ ನಾನು ಇಳಿಯಲ್ಲ. ಅಧಿಕಾರಿಗಳು ಹಾಗೂ ಜನರ ಮಧ್ಯೆ ಇದ್ದು, ಕೊರೊನಾ ಸೋಂಕು ಹರಡದಂತೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ ಎಂದರು.‌ ಪ್ರತಿನಿತ್ಯ ಅವರ ಮನೆಗೆ ಹೋಗಿ ಭೇಟಿ …

Read More »