Breaking News

ಜಿಲ್ಲೆ

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ಕೋವಿಡ್ 19 ಗೆದ್ದ ವ್ಹೀಲ್‌ಚೇರ್‌ನಲ್ಲಿ ಓಡಾಡೋ 92 ವರ್ಷದ ಅಜ್ಜಿ……….

ಪುಣೆ: ಇಲ್ಲಿಯವರೆಗಿನ ಪ್ರಕರಣಗಳಲ್ಲಿ ಕೋವಿಡ್ 19ಗೆ ಹೆಚ್ಚಾಗಿ ವಯಸ್ಸಾದವರೇ ಬಲಿಯಾಗಿದ್ದು, ಇತ್ತ ಪ್ರಧಾನಿ ಮೋದಿ ಕೂಡ 65 ವರ್ಷ ಮೇಲ್ಪಟ್ಟವರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದ್ದರು. ಆದರೆ ಇದೀಗ 92 ವರ್ಷದ ಅಜ್ಜಿಯೊಬ್ಬರು ಸಾವು ಗೆದ್ದು ಬೀಗಿದ್ದಾರೆ. ಹೌದು. ಪುಣೆ ಮೂಲದ ಅಜ್ಜಿ ನಾನ್ಜೆಜೆನೇರಿಯನ್ ಕೊರೊನಾ ವೈರಸ್ ಎಂಬ ಮಾರಕ ರೋಗವನ್ನು ಮೆಟ್ಟಿ ನಿಂತಿದ್ದಾರೆ. ನಾನ್ಜೆಜೆನೇರಿಯನ್ ಅವರು 7 ತಿಂಗಳ ಹಿಂದೆಯಿಂದ ಪಾರ್ಶ್ವವಾಯುಗೆ ತುತ್ತಾಗಿದ್ದರು. ಇದೀಗ ಈಕೆಯ ಜೊತೆ ಕುಟುಂಬದ …

Read More »

ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ – ಇಂದು ಡಿಸ್ಚಾರ್ಜ್

ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ಬಾಧಿತರಾಗಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯ ಪೈಕಿ ಮೂವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಈ ಮೂವರನ್ನು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ …

Read More »

ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ …

Read More »

ಯಾದಗಿರಿ:ವಾರಿಯರ್ಸ್‍ಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ….

ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು. ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು …

Read More »

ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ

ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ. ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್‍ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ. ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ …

Read More »

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …

Read More »

ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೋನಾ ಶತಕ ಸಿಡಿಸಿದ ಬಿಹಾರಿ ಕಾರ್ಮಿಕ, ಇಂದು 16 ಮಂದಿಗೆ ಸೋಂಕು..!

ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …

Read More »

ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್‍ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …

Read More »

ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನ

ಬೆಳಗಾವಿ –  – ಸಾಧು-ಸಂತರ ಮೇಲೆ ಮಹಾರಾಷ್ಟ್ರದಲ್ಲಿ ನಡೆದಿರುವ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಈ ವಿಷಯ ತಿಳಿಸಿದ್ದಾರೆ. ಮಹಾರಾಷ್ಟ್ರ ಸಿಪಿಐ ಶಾಸಕನಿಂದ ಈ ದುಷ್ಕೃತ್ಯ ನಡೆದಿದ್ದು, ಆತನನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು, ಶ್ರೀರಾಮ ಸೇನೆಯ ಕಾರ್ಯಕರ್ತರು ರಾಜ್ಯದ್ಯಂತ ಮನೆಯಲ್ಲೇಯ ಸಾಧು ಸಂತರ ಫೋಟೋ ಇಟ್ಟು ಪ್ರತಿಭಟನೆ ನಡೆಸಿ, ಪ್ರಧಾನಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ …

Read More »