Breaking News

ಜಿಲ್ಲೆ

ಹಾವೇರಿ:ಎಂಎಸ್‍ಐಎಲ್ ತೆರೆಯಲು ಸಿದ್ಧತೆ………..

ಹಾವೇರಿ: ಲಾಕ್‍ಡೌನ್ ಮದ್ಯ ಮಾರಾಟಕ್ಕೆ ಪೂರ್ಣ ವಿರಾಮ ಬಿದ್ದಿದೆ. ಮಂಗಳವಾರ ಮೊದಲ ಹಂತ ಲಾಕ್‍ಡೌನ್ ಅಂತ್ಯವಾಗಲಿದ್ದು, ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಒಂದು ವೇಳೆ ಮದ್ಯ ಮಾರಾಟಕ್ಕೆ ವಿನಾಯ್ತಿ ಸಿಕ್ಕರೆ ಅಂಗಡಿಗಳ ಮುಂದೆ ಉಂಟಾಗುವ ನೂಕುನುಗ್ಗಲು ತಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣ ಸೇರಿದಂತೆ ಜಿಲ್ಲೆಯ ಕೆಲವೆಡೆ ಎಂಎಸ್‍ಐಎಲ್ ಮದ್ಯದ ಅಂಗಡಿಗಳ ಮುಂದೆ ನೂಕು ನುಗ್ಗಲು ತಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಾಕ್‍ಡೌನ್ ನಂತರ …

Read More »

ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ಹೊಸದಿಲ್ಲಿ: ಕೊರೋನಾ ವೈರಸ್​​ ವಿರುದ್ಧ ಹೋರಾಡುವ ಕುರಿತಂತೆ ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಭಾರದಲ್ಲಿ ಲಾಕ್​​​ಡೌನ್​​​ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್​​-19 ತಡೆಗೆ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇತ್ತೀಚಿಗೆ ಕೊರೋನಾ ವಿರುದ್ಧ ಹೋರಾಡಲು ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್​​ಡೌನ್​ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ …

Read More »

ವೈದ್ಯಕೀಯ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಡಿಕೆಶಿ

ನೆಲಮಂಗಲ: ವೈದ್ಯಕೀಯ ಸಚಿವ ಕೆ. ಸುಧಾಕರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಕ್ಕಸಂದ್ರ ಗ್ರಾಮದಲ್ಲಿ ನೆಲಮಂಗಲ ಕಾಂಗ್ರೆಸ್ ಕಾರ್ಯಕರ್ತರಿಂದ ಕಾರ್ಯಕ್ರಮ ಆಯೋಜನೆ ಮಾಡಿ ದಿನಸಿ ವಿತರಣೆ ಮಾಡಿದರು. ಲಾಕ್ ಡೌನ್ ಸಂದರ್ಭದಲ್ಲಿ ಸಚಿವ ಸುಧಾಕರ್ ಈಜು ಕೊಳದಲ್ಲಿ ಸ್ವಿಮ್ಮಿಂಗ್ ವಿಚಾರ ಮಾತನಾಡಿದ ಡಿಕೆಶಿ, ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು …

Read More »

ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ ‌ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು

ಬೆಂಗಳೂರು: ಲಾಕ್​ಡೌನ್​ನಿಂದಾಗಿ 22 ದಿನಗಳಿಂದ ರಾಜ್ಯದೆಲ್ಲೆಡೆ ಮಾಲ್, ಬಾರ್, ಪಬ್​ಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುವ ಸಾಧ್ಯತೆಯಿದೆ. ಲಾಕ್​ಡೌನ್​ ಅನ್ನು ಏ. 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ ಇನ್ನೂ 18 ದಿನ ಸಾರಾಯಿ ಸಿಗುವುದಿಲ್ಲ ಎಂಬ ನಿರಾಸೆ ಮದ್ಯಪ್ರಿಯರನ್ನು ಕಾಡಿತ್ತು. ಆದರೆ, ಈ ಬಗ್ಗೆ ಸದ್ಯದಲ್ಲೇ ಘೋಷಿಸಲಿರುವ ರಾಜ್ಯ ಸರ್ಕಾರ ಬುಧವಾರದಿಂದಲೇ ಸಾರಾಯಿ ಮಾರಾಟಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ.ರಾಜ್ಯದಲ್ಲಿ …

Read More »

ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ

ಬೆಳಗಾವಿ:  ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು  ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ  ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.   ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …

Read More »

ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.

ಬೆಳಗಾವಿ: ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …

Read More »

ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ.

ಬೆಳಗಾವಿ : ಹಿರೇಬಾಗೇವಾಡಿಯ ಕೊರೊನಾ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. …

Read More »

ಇಂದು 14 ಬೆಳಗಾವಿ:  ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ಸೋಂಕಿತರ ಸಂಖ್ಯೆ 17 ಕ್ಕೆ

  ಬೆಳಗಾವಿ:  ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಇಂದು 14 ವರ್ಷದ ಬಾಲಕ ಸೇರಿ ಮತ್ತೆ  ಮೂವರಿಗೆ  ಕೊರೊನಾ ಪಾಸಿಟಿವ್ ವರದಿ ಬಂದಿದೆ. ಆ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಭಾನುವಾರದಂದು ರಾಯಬಾಗ ಕುಡಚಿ ಮೂವರು ಹಾಗೂ ಹಿರೇಬಾಗೇವಾಡಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ಬಳಿಕ ಇಂದು ರಾಯಬಾಗ ಕುಡಚಿಯಲ್ಲಿ  ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವದು ದೃಢವಾಗಿದೆ. …

Read More »

ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು. ಕೊರೊನಾ ಸೋಂಕು ತಡೆಗೆ ಖಾಸಗಿ ಆಸ್ಪತ್ರೆಗಳ ವೈದ್ಯರು ಅಗತ್ಯ ಸಹಕಾರ ನೀಡಬೇಕು. ಸಾಮಾನ್ಯ ರೋಗಿಗಳಿಗೆ ತಾವು ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಬೇಕು. ಮುಖ್ಯವಾಗಿ ವೈದ್ಯರಾದ ತಾವುಗಳು ಸುರಕ್ಷತಾ ಕವಚಗಳನ್ನು ತೊಟ್ಟು ಚಿಕಿತ್ಸೆಯಲ್ಲಿ ತೊಡಗಿಸಿಕೊಳ್ಳಬೇಕು. ರೋಗಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಚತೆ …

Read More »

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು …

Read More »