Breaking News

ಜಿಲ್ಲೆ

ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ”………

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …

Read More »

ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ

ಗೋವಾ:  ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಹಾಯ ಹಸ್ತಕೋರುವಂತೆ ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಹರದಗಟ್ಟಿ ಗ್ರಾಮದ 30 ಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕಾಗಿ ಗೋವಾಗೆ ತೆರಳಿದ್ದರು. ಆದ್ರೆ  ಲಾಕ್ ಡೌನ್ ಹಿನ್ನೆಲೆ ಗ್ರಾಮಕ್ಕೆ ತೆರಳಲಾಗದ ಅತ್ತೆ ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡುಂತಾಗಿದೆ. ಪಣಜಿಯ ಮಾಪ್ಸಾ ಬಳಿ  ಉಳಿದುಕೊಂಡಿರುವ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ಸಾಗಲು …

Read More »

ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್: ಡಾ.ಎಸ್. ಬಿ.ಬೊಮ್ಮನಹಳ್ಳಿ

ಬೆಳಗಾವಿ: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಲ್ಕು ಮಾದರಿಗಳ ಪೈಕಿ ಇನ್ನೊಂದು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿರುತ್ತವೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ಹದಿನೈದು ಮಾದರಿಗಳ ಪೈಕಿ …

Read More »

ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್

ಬೆಳಗಾವಿ: ಪೊಲೀಸರ ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್ ಮಾಡಿದ್ದಾರೆ. ನಾಯಿ ಕಚ್ಚಿದೆ ದಾರಿ ಬಿಡಿ ಎಂದು ಬೋಗಾರ್‌ವೇಸ್‌ ಬಳಿ ಬೋರ್ಡ್ ಹಿಡಿದುಕೊಂಡು ಬಂದಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪೊಲೀಸರು ಜನರು ಸಂಚರಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ಜನರಿಗೆ ಪೊಲೀಸರು ಲಾಠಿ ಬಿಸಿ ತೋರಿಸುತ್ತಿದ್ದಾರೆ. ಇದೇ ವೇಳೆ ಪೊಲೀಸರು ಹೊಡೆಯಲು ಹೊದ ಸಂದರ್ಭದಲ್ಲಿ ದ್ವಿಚಕ್ರದ ಸವಾರರಿಬ್ಬರು …

Read More »

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ”

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ” ನಿಪ್ಪಾಣಿ ನಗರ ಸಭೆಯಲ್ಲಿ ಕೊರೋನಾ ವೈರಸ್ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಸಭೆ ಉದ್ದೇಶಿಸಿ ಮಾತನಾಡಿದರು. …

Read More »

ಲಾಕ್‍ಡೌನ್ ಎಫೆಕ್ಟ್- ಸಿಗರೇಟ್ ಕೊಡದಿದ್ದಕ್ಕೆ ಬರ್ಬರವಾಗಿ ಕೊಲೆಗೈದ್ರು

ಮುಂಬೈ: ಸಿಗರೇಟ್ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯನ್ನು ಇಬ್ಬರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‍ನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅರವಿಂದ್ ಶಂಕರ್ ಕುಮಾರ್ (38) ಕೊಲೆಯಾದ ವ್ಯಕ್ತಿ. ಕಲ್ಯಾಣ್‍ನ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧಕಾರ್ಯ ಅಪ್ರಾರಂಭಿಸಿದ್ದಾರೆ. ಆಗಿದ್ದೇನು?: ಮೃತ ತರಕಾರಿ ವ್ಯಾಪಾರಿ ಅರವಿಂದ್ ತನ್ನ ಸೋದರಸಂಬಂಧಿ ಆನಂದ್ ಗುಪ್ತಾ ಜೊತೆಗೆ ಕಲ್ಯಾಣ್‍ನ ಗೋವಿಂದ್ ವಾಡಿ …

Read More »

ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು4 ತಿಂಗಳ ವೇತನ ನೀಡಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಸರ್ಕಾರದ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ 4 ತಿಂಗಳ ವೇತನವನ್ನು ನೀಡಿದ್ದಾರೆ. 2 ತಿಂಗಳ ವೇತನ ಅಂದರೆ 2 ಲಕ್ಷ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. 2 ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಮೊದಲಿಗೆ ಮಂಡ್ಯದ ಮಿಮ್ಸ್ …

Read More »

ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.

ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ. ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್‍ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಆದ್ದರಿಂದ ಮೆಜೆಸ್ಟಿಕ್‍ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು …

Read More »

ಎಲ್ಲ ಸಾಲಗಳ ಇಎಂಐಗೆ 3 ತಿಂಗಳ ವಿನಾಯ್ತಿ:ಆರ್​ಬಿಐ ಗವರ್ನರ್​ ಶಕ್ತಿಕಾಂತ್

ಹೊಸ ದಿಲ್ಲಿ: ಕರೊನಾ ವೈರಸ್​ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿ ಉಂಟಾಗಿರುವ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಆರ್​ಬಿಐ ರೆಪೋ ದರ ಕಡಿತಗೊಳಿಸಿದೆ. ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೆಪೋ ದರವನ್ನು ಶೇ.5.1ರಿಂದ ಶೇ.4.4ಕ್ಕೆ ಇಳಿಸಲಾಗಿದೆ ಎಂದರು. ರಿವರ್ಸ್​ ರೆಪೋ ದರವನ್ನು ಶೇ.90 ಇಳಿಕೆ ಮಾಡಲಾಗಿದೆ. ಸಣ್ಣ ಉದ್ದಿಮೆಗಳು ಅನುಭವಿಸುತ್ತಿರುವ ನಷ್ಟವನ್ನು ಗಮನಿಸಲಾಗಿದೆ. ಕರೊನಾ ವೈರಸ್​ ದೇಶಕ್ಕೆ ಕಠಿಣ ಸ್ಥಿತಿಯನ್ನು ತಂದಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ …

Read More »

ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ

ಬೆಂಗಳೂರು: ಲಾಕ್​ಡೌನ್​ ಆದೇಶ ಉಲ್ಲಂಘಿಸುವ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ ನೀಡಿದ್ದಾರೆ. ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ವೃದ್ದರು, ಮಹಿಳೆಯರಿಗೆ ಗೌರವ ನೀಡಿ. ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು. ಅವಶ್ಯಕತೆ ಇದ್ದರೆ ಕೇವಲ ಕೆಎಸ್​ಆರ್​ಪಿ ಮತ್ತು ಸಿಎಆರ್​ ಪೊಲೀಸರು ಮಾತ್ರ ಬಳಸಬಹುದು. ಆದ್ರೆ ಸಿವಿಲ್​ ಪೊಲೀಸರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬಳಸಬೇಡಿ. ಮೈಕ್​ಗಳನ್ನ ಬಳಸಿ ಅನೌನ್ಸ್​ಮೆಂಟ್​ ಮಾಡುವ ಮೂಲಕ …

Read More »